ಹಾಸನ | ವಿದ್ಯುತ್‌ ಬಿಲ್‌ ಕೇಳಿದ್ದಕ್ಕೆ ಸಿಬ್ಬಂದಿ ಮೇಲೆ ಹಲ್ಲೆ

Date:

Advertisements

ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದ್ದ ಐದು ಗ್ಯಾರಂಟಿಗಳಲ್ಲಿ ಒಂದಾದ ‘200 ಯುನಿಟ್ ಉಚಿತ ವಿದ್ಯುತ್’ ಯೋಜನೆ ಇನ್ನೂ ಜಾರಿಗೆ ಬಂದಿಲ್ಲ. ಆದರೆ, ವಿದ್ಯುತ್ ಬಿಲ್ ಕಟ್ಟುವ ವಿಚಾರದಲ್ಲಿ ಪ್ರತಿದಿನ ಗ್ರಾಹಕರು ಮತ್ತು ಕೆಇಬಿ ಸಿಬ್ಬಂದಿ ನಡುವೆ ಘರ್ಷಣೆ ನಡೆಯುತ್ತಿದೆ. ವಿದ್ಯುತ್ ಬಿಲ್​ ಸಂಗ್ರಹಕ್ಕೆ ಹೋಗುವ ಸಿಬ್ಬಂದಿಗಳ ಮೇಲೆ ಹಲವೆಡೆ ಹಲ್ಲೆಗಳು ನಡೆಯುತ್ತಿವೆ.

ಹಾಸನ ಜಿಲ್ಲೆ ಅರಕಲಗೂಡು ತಾಲೂಕಿನ ಹಳೆ ಕೋರ್ಟ್​ ರಸ್ತೆಯಲ್ಲಿರುವ ಮನೆಯೊಂದಕ್ಕೆ ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ(ಸೆಸ್ಕಾಂ) ಸಿಬ್ಬಂದಿ ಸಂತೋಷ್​ ಎಂಬುವರು ವಿದ್ಯುತ್ ಮೀಟರ್ ರೀಡಿಂಗ್​ಗೆ ಹೋಗಿದ್ದರು. ಆ ವೇಳೆ, ಅವರ ಮೇಲೆ ಮನೆಯ ಯಜಮಾನ ಮತ್ತು ಅವನ ಅಪ್ರಾಪ್ತ ಮಗ ಸೇರಿ ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಈ ಸುದ್ದಿ ಓದಿದ್ದೀರಾ? ಕೊಪ್ಪಳ | ಉದ್ಯೋಗ ಖಾತ್ರಿ ಯೋಜನೆ ಸಮರ್ಪಕ ಜಾರಿಗೆ ಕೂಲಿ ಕಾರ್ಮಿಕರ ಆಗ್ರಹ

Advertisements

ಮನೆ ಮಾಲೀಕ ಕೋಳಿ ಅಂಗಡಿ ನಡೆಸುತ್ತಿದ್ದಾರೆ. ಸೆಸ್ಕಾಂ ಸಿಬ್ಬಂದಿ ಮೇ 31ರಂದು ಅವರ ಮನೆಗೆ ಹೋಗಿ, ಮೀಟರ್​ ರೀಡ್​ ಮಾಡಿ, ₹1,150 ರೂಪಾಯಿ ಬಿಲ್​ ಕೊಟ್ಟಿದ್ದಾರೆ. ಆದರೆ, ಸುರೇಶ್​ ಆತನಿಗೆ ಬೈದಿದ್ದು, ಅಲ್ಲೇ ಇದ್ದ ತನ್ನ ಮಗನೊಂದಿಗೆ ಸೇರಿ ಸಂತೋಷ್​ ಮೇಲೆ ಹಲ್ಲೆ ನಡೆಸಿದ್ದಾರೆ. ಸಂತೋಷ್​ಗೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನೆಗೆ ಸಂಬಂಧಿಸಿದಂತೆ ಅರಕಲಗೂಡು ಠಾಣೆ ಪೊಲೀಸರು ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ಮಾಡಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X