BREAKING: ಚಿಂತಕ ಪ್ರೊ.ಮುಜಾ‍ಫರ್ ಅಸ್ಸಾದಿ ನಿಧನ

Date:

Advertisements

ಕನ್ನಡದ ಖ್ಯಾತ ಚಿಂತಕರಾದ ಪ್ರೊ.ಮುಜಾಫರ್ ಅಸ್ಸಾದಿ ಅವರು ತಡರಾತ್ರಿ 12.45ರ ವೇಳೆಗೆ ನಿಧನರಾಗಿದ್ದಾರೆ. ಹೃದಯ ಸಂಬಂಧಿತ ಕಾಯಿಲೆಗಳಿಗೆ ತುತ್ತಾಗಿದ್ದ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆಗಾಗಿ ಬೆಂಗಳೂರಿಗೆ ಇತ್ತೀಚೆಗೆ ಬಂದಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ, ಬಹು ಅಂಗಾಂಗ ವೈಫಲ್ಯದ ಕಾರಣ ಕೊನೆಯುಸಿರೆಳೆದಿದ್ದಾರೆ.

ಮೈಸೂರಿನ ಸರಸ್ವತಿಪುರಂ ಫೈರ್ ಬ್ರಿಗೇಡ್ ಬಳಿ ಇರುವ ನ್ಯೂ ಮುಸ್ಲಿಂ ಹಾಸ್ಟೆಲ್‌ನಲ್ಲಿ ಸಾರ್ವಜನಿಕರ ಅಂತಿಮದರ್ಶನಕ್ಕೆ ಮೃತದೇಹವನ್ನು ಇರಿಸಲಾಗುವುದು ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ.

ಉಡುಪಿ ಜಿಲ್ಲೆಯ ಶಿರ್ವ ಎಂಬ ಊರಿನಲ್ಲಿ ಮುಸ್ಲಿಮ್ ಕುಟುಂಬದಲ್ಲಿ ಜನಿಸಿದ ಅಸ್ಸಾದಿಯವರು ಮಂಗಳೂರು, ಗೋವಾ ಮತ್ತು ಮೈಸೂರು ವಿಶ್ವವಿದ್ಯಾನಿಲಯಗಳಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದರು. ಸಮಾಜಮುಖಿ ಚಿಂತಕರಾಗಿದ್ದರು. ವಿಶಿಷ್ಟ ರಾಜಕೀಯ ಒಳನೋಟಗಳನ್ನು ನೀಡುತ್ತಿದ್ದ ಬರಹಗಾರರಾಗಿದ್ದರು.

Advertisements

ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಎಂ.ಎ. ಪದವಿ, ಎಂ.ಫಿಲ್. ಪದವಿ, ಜವಾಹರಲಾಲ್ ನೆಹರೂ ವಿಶ್ವವಿದ್ಯಾನಿಲಯದಲ್ಲಿ ಪಿಎಚ್.ಡಿ. ಪದವಿ, ಚಿಕಾಗೋ ವಿಶ್ವವಿದ್ಯಾನಿಲಯದಲ್ಲಿ ಪೋಸ್ಟ್-ಡಾಕ್ಟರೇಟ್ ಪದವಿ, ವಿಶ್ವವಿದ್ಯಾನಿಲಯ ಧನಸಹಾಯ ಆಯೋಗದಿಂದ ಜೆಆರ್‌ಎಫ್ ಫೆಲೋಶಿಪ್, ರಾಕ್ ಫೆಲ್ಲರ್ ಫೆಲೋಶಿಪ್ ಮೊದಲಾದ ಪ್ರತಿಷ್ಠಿತ ಪದವಿ ಮತ್ತು ಪುರಸ್ಕಾರಗಳನ್ನು ಅವರು ಪಡೆದಿದ್ದರು.

ಪ್ರೊ.ಅಸ್ಸಾದಿ ರಾಜ್ಯಶಾಸ್ತ್ರ ಉಪನ್ಯಾಸಕ (1991-1994), ಪ್ರವಾಚಕ (1994-2002), ಪ್ರಾಧ್ಯಾಪಕ (2002-2023) ಮೊದಲಾದ ಹುದ್ದೆಗಳನ್ನು ಮಂಗಳೂರು ವಿಶ್ವವಿದ್ಯಾನಿಲಯ, ಗೋವಾ ವಿಶ್ವವಿದ್ಯಾಲಯ ಮತ್ತು ಮೈಸೂರು ವಿಶ್ವವಿದ್ಯಾನಿಲಯಗಳಲ್ಲಿ ಸಮರ್ಥವಾಗಿ ನಿರ್ವಹಿಸಿ ಸಹೋದ್ಯೋಗಿಗಳು ಮತ್ತು ವಿದ್ಯಾರ್ಥಿಗಳ ಪ್ರಶಂಸೆಗೆ ಪಾತ್ರರಾಗಿದ್ದರು. ಸಂಶೋಧಕ, ಚಿಂತಕ, ಬರಹಗಾರರಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರು ಗಳಿಸಿದ್ದರು. ಅವರು ಇತಿಹಾಸ, ಸಮಾಜಶಾಸ್ತ್ರ, ಮಾನವಶಾಸ್ತ್ರ, ಅಭಿವೃದ್ಧಿಶಾಸ್ತ್ರ ಮೊದಲಾದ ಕ್ಷೇತ್ರಗಳ ಬಗ್ಗೆ ತಮ್ಮ ವಿನೂತನ ಚಿಂತನೆಗಳು ಮತ್ತು ವಿದ್ವತ್ಪೂರ್ಣ ಬರಹಗಳಿಂದ ಒಳನೋಟ ನೀಡುತ್ತಿದ್ದರು.

ಸುಮಾರು 500ಕ್ಕೂ ಹೆಚ್ಚು ಪ್ರಬಂಧಗಳನ್ನು ದೇಶ ವಿದೇಶಗಳಲ್ಲಿ ಮಂಡಿಸಿದ ಹೆಗ್ಗಳಿಗೆ ಪ್ರೊ.ಅಸ್ಸಾದಿ ಅವರಿಗೆ ಸಲ್ಲುತ್ತದೆ. ಕರ್ನಾಟಕದಲ್ಲಿ ಬಹುರೂಪಿ ಸ್ತ್ರೀವಾದ ಕಥನಗಳು ಮತ್ತು ಚಳವಳಿ, ಅಸ್ಮಿತೆ, ರಾಜಕಾರಣ ಮತ್ತು ಮೂಲಭೂತವಾದ ಸೇರಿದಂತೆ ಕನ್ನಡ ಮತ್ತು ಆಂಗ್ಲಭಾಷೆಗಳಲ್ಲಿ ಸುಮಾರು 14 ಮಹತ್ವದ ಕೃತಿಗಳನ್ನು ರಚಿಸಿದ್ದಾರೆ. ಅಲ್ಲದೆ ಇವರ 300ಕ್ಕೂ ಹೆಚ್ಚು ಸಂಶೋಧನಾ ಲೇಖನಗಳು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ನಿಯತಕಾಲಿಕೆಗಳಲ್ಲಿ ಪ್ರಕಟಗೊಂಡಿವೆ.

ಇದನ್ನೂ ಓದಿರಿ: ಪೊಲೀಸ್‌ ಅಧಿಕಾರಿಗೆ ಅ**ನ್ ಎಂದು ಅಶ್ಲೀಲವಾಗಿ ನಿಂದಿಸಿದ ಆರ್ ಅಶೋಕ್

ಜಗತ್ತಿನ ಸುಮಾರು 15ಕ್ಕೂ ಹೆಚ್ಚು ಪ್ರತಿಷ್ಠಿತ ನಿಯತಕಾಲಿಕೆಗಳ ಸಂಪಾದಕೀಯ ಮಂಡಳಿಯಲ್ಲಿ ಸಲಹೆಗಾರರಾಗಿ ಕರ್ತವ್ಯ ನಿರ್ವಹಿಸಿದ್ದರು. ಇವರ ಬರಹಗಳು ಫ್ರೆಂಚ್, ಮರಾಠಿ, ತಮಿಳು ಮತ್ತು ಉರ್ದು ಭಾಷೆಗಳಿಗೂ ಭಾಷಾಂತರವಾಗಿವೆ. ಅಷ್ಟೇ ಅಲ್ಲದೆ ವಿವಿಧ ರಾಜ್ಯಗಳಲ್ಲಿ ಸಾರ್ವಜನಿಕ ಸೇವಾ ಆಯೋಗಗಳಲ್ಲಿ ಪರೀಕ್ಷಕರಾಗಿ ಮತ್ತು ಸಂದರ್ಶಕರಾಗಿ ಸೇವೆ ಸಲ್ಲಿಸಿದ ಹೆಗ್ಗಳಿಕೆ ಅಸ್ಸಾದಿಯವರದ್ದು.

ಇವರ ಮಾರ್ಗದರ್ಶನದಲ್ಲಿ ರುವಾಂಡಾ, ಅಫ್ಘಾನಿಸ್ತಾನ, ಇರಾನ್, ಯುಕೆ ಮೊದಲಾದೆಡೆ ಪಿಎಚ್.ಡಿ ಪದವಿ ಪಡೆದ ವಿದ್ಯಾರ್ಥಿಗಳಿದ್ದಾರೆ. ಬುಡಕಟ್ಟು ಸಮುದಾಯಗಳ ಸ್ಥಳಾಂತರ ಕುರಿತ ಹೈಕೋರ್ಟ್ ಸಮಿತಿ ಅಧ್ಯಕ್ಷರಾಗಿ, ವರದಿ ನೀಡಿದ್ದರು. ಕರ್ನಾಟಕ ಸಾಹಿತ್ಯ ಅಕಾಡೆಮಿಯ 2021ನೇ ಸಾಲಿನ ಪುಸ್ತಕ ಬಹುಮಾನ ಇವರಿಗೆ ಸಂದಿತ್ತು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

ಕರ್ನಾಟಕ ಕೃಷಿ ಇಲಾಖೆಯಿಂದ ರೈತರಿಗೆ ಡಿಜಿಟಲ್ ಬಲ: ಬಿಇಎಲ್ ಜೊತೆ ಒಡಂಬಡಿಕೆ

ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

Download Eedina App Android / iOS

X