ಮಾದಾರ ಚೆನ್ನಯ್ಯ ಸ್ವಾಮೀಜಿ ಪೀಠ ತೊರೆಯಲಿ: ಸಮುದಾಯದ ಹೋರಾಟಗಾರರ ಆಗ್ರಹ

Date:

Advertisements
'ಸಂವಿಧಾನದಲ್ಲಿ ಮನುಸ್ಮೃತಿಯನ್ನು ಸೇರಿಸಿಲ್ಲ', 'ಅಂಬೇಡ್ಕರ್ ಮತ್ತು ದಲಿತ ಸಮುದಾಯಕ್ಕೆ ಸಹಕರಿಸುವುದೆಂದರೆ ಹಾವಿಗೆ ಹಾಲೆರೆದಂತೆ' ಎಂದಿದ್ದ ಆರ್‌ಎಸ್‌ಎಸ್‌ ಕೂಟವನ್ನು ಸ್ವಾಮೀಜಿ ಬೆಂಬಲಿಸುತ್ತಿರುವ ಸಂಬಂಧ ತೀವ್ರ ಆಕ್ಷೇಪ ವ್ಯಕ್ತಪಡಿಸಲಾಗಿದೆ

ಚಿತ್ರದುರ್ಗದ ಮಾದಾರ ಚೆನ್ನಯ್ಯ ಗುರುಪೀಠದ ಡಾ.ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿಯವರು ಬಿಜೆಪಿ, ಆರ್‌ಎಸ್‌ಎಸ್ ಹೇಳಿದಂತೆ ಕೇಳುತ್ತಾ, ಸಮುದಾಯಕ್ಕೆ ಅಪಚಾರ ಎಸಗಿದ್ದಾರೆ. ಅವರು ತಕ್ಷಣವೇ ಪೀಠವನ್ನು ತೊರೆಯಲಿ ಎಂದು ಮಾದಿಗ ಸಮುದಾಯದ ಹೋರಾಟಗಾರರು, ಬರಹಗಾರರು ಆಗ್ರಹಿಸಿದ್ದಾರೆ.

“ಸ್ವಾಮೀಜಿಯವರು ಪೀಠವನ್ನು ತೊರೆದು ಬಿಜೆಪಿ ಮತ್ತು ಆರ್‌ಎಸ್‌ಎಸ್ ಸೇರಿಕೊಳ್ಳಲಿ. ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಚಿಂತನೆಗಳಿಗೆ ವಿರುದ್ಧವಿರುವ ಸಂಘಪರಿವಾರದ ಜೊತೆ ಮಾದಿಗ ಸಮುದಾಯ ಇದೆ ಎಂಬಂತೆ ಬಿಂಬಿಸುತ್ತಿರುವುದನ್ನು ನಾವು ಸಹಿಸುವುದಿಲ್ಲ” ಎಂಬ ಎಚ್ಚರಿಕೆಯನ್ನು ಬಹಿರಂಗ ಪತ್ರದಲ್ಲಿ ನೀಡಲಾಗಿದೆ.

ಚಿಂತಕರು ಮತ್ತು ಹೋರಾಟಗಾರರಾದ ಪ್ರೊ.ಸಿ.ಕೆ.ಮಹೇಶ್, ಡಾ.ವಡ್ಡಗೆರೆ ನಾಗರಾಜಯ್ಯ, ಬಿ.ಆರ್.ಭಾಸ್ಕರ್ ಪ್ರಸಾದ್, ವಕೀಲರಾದ ಪ್ರೊ.ಹರಿರಾಮ್, ಹನುಮೇಶ್ ಗುಂಡೂರು, ಬರಹಗಾರರಾದ ರವಿಕುಮಾರ್ ಟೆಲೆಕ್ಸ್, ಯತಿರಾಜ್ ಅವರು ನೀಡಿರುವ ಪತ್ರದಲ್ಲಿ ಸ್ವಾಮೀಜಿಯವರ ನಡೆಯನ್ನು ಖಂಡಿಸಲಾಗಿದೆ ಮತ್ತು ಅವರ ನಿಲುವುಗಳ ಬಗ್ಗೆ ಕಳವಳ ವ್ಯಕ್ತಪಡಿಸಲಾಗಿದೆ.

Advertisements

ಪತ್ರದಲ್ಲೇನಿದೆ?

ಲೋಕಸಭಾ ಚುನಾವಣೆಯಲ್ಲಿ 400 ಸೀಟ್ ಗೆದ್ದರೆ ಸಂವಿಧಾನ ಬದಲಿಸುವ ಮುಕ್ತ ಅಜೆಂಡಾ ಹೊಂದಿದ್ದ ಬಿಜೆಪಿ, ಸಂಘಪರಿವಾರವನ್ನು ಈ ದೇಶದ ಸಮಸ್ತ ದಲಿತ ಸಮುದಾಯ ಬಲವಾಗಿ ವಿರೋಧಿಸಿದ ಕಾರಣ, ಬಿಜೆಪಿ ಬಹುಮತ ಕಳೆದುಕೊಂಡಿತು. ಆನಂತರ ಗಾಬರಿಗೊಂಡಿರುವ ಸಂಘಪರಿವಾರವು ಹಿಂಬಾಗಿನಿಂದ ಬಂದು ದಲಿತ ಸಮುದಾಯವನ್ನು ಒಡೆದು ಆಳುವ ಕಾರ್ಯಸೂಚಿಯನ್ನು ಜಾರಿಗೆ ತರಲು ಮುಂದಾಗಿದೆ. ಅದರ ಭಾಗವಾಗಿ ‘ಸಿಟಿಜನ್ ಫಾರ್ ಸೋಷಿಯಲ್ ಜಸ್ಟಿಸ್’ ಎಂಬ ವೇದಿಕೆ ರೂಪಿಸಿಕೊಂಡು ‘ಸಂವಿಧಾನ ಸನ್ಮಾನ’ ಎಂಬ ಹೆಸರಿನ ಕಾರ್ಯಕ್ರಮಗಳನ್ನು ಆಯೋಜಿಸುತ್ತಾ ಬಂದಿದೆ.

ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಸಂವಿಧಾನದ ಕುರಿತು ಅರ್ಧಸತ್ಯಗಳನ್ನು, ಹಸಿಹಸಿ ಸುಳ್ಳುಗಳ ಕಥೆ ಕಟ್ಟಿ ಅಪಪ್ರಚಾರ ಮಾಡುವ ಕಾರ್ಯಕ್ರಮಗಳನ್ನು ಆರ್‌ಎಸ್‌ಎಸ್‌ ರೂಪಿಸುತ್ತಿದೆ. ಇದಕ್ಕೆ ಮಾದಿಗ ಸಮುದಾಯದ ಮಾದಾರ ಚೆನ್ನಯ್ಯ ಸ್ವಾಮೀಜಿಯವರನ್ನು ಮುಂದೆ ಬಿಟ್ಟು, ಮಾದಿಗ ಸಮುದಾಯ ಇಂತಹ ಪಿತೂರಿ ಕೃತ್ಯಗಳ ಭಾಗವಾಗಿದೆ ಎಂಬಂತೆ ಚಿತ್ರಿಸಲಾಗುತ್ತಿದೆ.

ಮೊದನಿಂದಲೂ ಬುದ್ಧ, ಬಸವ ಮಾರ್ಗಕ್ಕೆ, ಬಾಬಾ ಸಾಹೇಬರ ಚಿಂತನೆಗಳಿಗೆ ವಿರುದ್ಧವಾಗಿಯೂ, ಸಂಘಪರಿವಾರದ ಬಾಲಂಗೋಚಿಯಾಗಿಯೂ ನಡೆದುಕೊಂಡಿರುವ ಸ್ವಾಮೀಜಿ, ಸಮುದಾಯದ ಪ್ರತಿನಿಧಿಯೂ ಅಲ್ಲ, ಸಮುದಾಯದ ನೋವು- ನಲಿವು, ಒಲವು- ನಿಲುವುಗಳೂ ಅವರಿಗೆ ತಿಳಿದಿಲ್ಲ. ಮಾದಾರ ಚೆನ್ನಯ್ಯನವರ ಪೀಠದಲ್ಲಿ ಕೂತ ಮಾತ್ರಕ್ಕೆ ಅವರು ಸಮುದಾಯದ ಸಾಕ್ಷಿಪ್ರಜ್ಞೆಯಾಗುವುದಿಲ್ಲ. ಬಿಜೆಪಿ, ಸಂಘಪರಿವಾರ ಹೇಳಿದಂತೆ ಕುಣಿಯುತ್ತಿರುವ ಸ್ವಾಮೀಜಿಯವರು ಕಾವಿ ಕಳಚಿ, ಬಿಜೆಪಿಯನ್ನೋ, ಆರ್‌ಎಸ್‌ಎಸ್‌ ಸಂಸ್ಥೆಯನ್ನೋ ಸೇರಿಕೊಂಡು ಅವರು ಕೊಟ್ಟ ಜವಾಬ್ದಾರಿಗಳನ್ನು ನಿಭಾಯಿಸಿದರೆ ನಮ್ಮದೇನೂ ತಕರಾರು ಇಲ್ಲ. ಸ್ವಾಮೀಜಿಯವರು ಮೊದಲಿನಿಂದಲೂ ಆರ್‌ಎಸ್‌ಎಸ್ ಮತ್ತು ಬಿಜೆಪಿ ಪಕ್ಷವನ್ನು ಕಟ್ಟುವಲ್ಲಿ ಮುಂಚೂಣಿಯಲ್ಲಿರುವ ಕಾರಣ, ಅವರು ಪೀಠ ತೊರೆದು ತಾವು ಬಿಜೆಪಿಯ ಬಾಲಂಗೋಚಿ ಎಂಬುದನ್ನು ಸಾಬೀತು ಮಾಡಬೇಕು. ಆರ್‌ಎಸ್‌ಎಸ್‌ನ ಸರಸಂಘಚಾಲಕ ಹುದ್ದೆಯನ್ನೋ, ಬಿಜೆಪಿಯ ರಾಜ್ಯಾಧ್ಯಕ್ಷ ಸ್ಥಾನವನ್ನೋ ಕೊಟ್ಟರೆ ನಿಭಾಯಿಸಲು ಸ್ವಾಮೀಜಿ ಯೋಗ್ಯವಾಗಿದ್ದಾರೆ. ಒಟ್ಟಾರೆ ಸ್ವಾಮೀಜಿಯವರು ಪೀಠ ತೊರೆಯುವವರೆಗೂ ಸಮುದಾಯ ಹೋರಾಟ ನಡೆಸಬೇಕಾಗುತ್ತದೆ.

ಇದನ್ನೂ ಓದಿರಿ: ಮಲ್ಲಿಕಾರ್ಜುನ ಖರ್ಗೆಯವರ ಕುಟುಂಬದ ಮೇಲೇಕೆ ಆರೆಸ್ಸೆಸ್‌ನಿಂದ ವ್ಯವಸ್ಥಿತ ದಾಳಿ?

ಕಳೆದ ಲೋಕಸಭಾ ಚುನಾವಣೆಯ ಸಂದರ್ಭದಲ್ಲೂ ಇದೇ ಕೆಲಸವನ್ನು ಸ್ವಾಮೀಜಿ ಕೈಗೊಂಡಿದ್ದರು.‌ ‘ಸಂವಿಧಾನದಲ್ಲಿ ಮನುಸ್ಮೃತಿಯನ್ನು ಸೇರಿಸಿಲ್ಲ’, ‘ಅಂಬೇಡ್ಕರ್ ಮತ್ತು ದಲಿತ ಸಮುದಾಯಕ್ಕೆ ಸಹಕರಿಸುವುದೆಂದರೆ ಹಾವಿಗೆ ಹಾಲೆರೆದಂತೆ’ ಎಂದಿದ್ದ ಆರ್‌ಎಸ್‌ಎಸ್‌ ಕೂಟವು ಈ ಹಿಂದೆ ‘ಮಾದಿಗ ಮುನ್ನಡೆ’ ಎಂಬ ಕಾರ್ಯಕ್ರಮ ನಡೆಸಿತ್ತು. ಆ ಮೂಲಕ ‘ಮನುವಾದ ಮುನ್ನಡೆ’ ಮಾಡುವ ಪಿತೂರಿ ನಡೆದಿತ್ತು.‌ ಅದಕ್ಕೂ ಈ ಮಾದಾರ ಚೆನ್ನಯ್ಯ ಸ್ವಾಮೀಜಿಯವರನ್ನು ಮುಂದೆ ಬಿಡಲಾಗಿತ್ತು. ಸಮುದಾಯ ಎಚ್ಚೆತ್ತುಕೊಂಡು ಪ್ರಶ್ನೆ ಮಾಡಿದಾಗ ತಣ್ಣಗಾಗಿದ್ದರು. ಮಾದಿಗರನ್ನು ಒಂದು ಪಕ್ಷದ, ಮತೀಯವಾದಿ ಸಿದ್ಧಾಂತ ಹೊಂದಿರುವ ಸಂಘಪರಿವಾರದ ಅಡಿಯಾಳುಗಳನ್ನಾಗಿ ಮಾಡುವ ದುಷ್ಕೃತ್ಯಗಳಿಗೆ ಸ್ವಾಮೀಜಿ ಮುಂದಾಗಿದ್ದಾರೆ. ಸ್ವಾಮೀಜಿಯವರು ಪೀಠವನ್ನು ತೊರೆದು ತಾವು ಬಿಜೆಪಿ ಹೇಳಿದಂತೆ ಕುಣಿಯುವ ರಾಜಕಾರಣಿ ಎಂದು ಸಾಬೀತು ಮಾಡಲಿ. ಸಮುದಾಯವನ್ನು ದಿಕ್ಕು ತಪ್ಪಿಸುವ ಈ ಪ್ರವೃತ್ತಿ ಮುಂದುವರಿದರೆ ಸಮುದಾಯ ಸುಮ್ಮನಿರುವುದಿಲ್ಲ ಎಂಬ ಎಚ್ಚರಿಕೆಯನ್ನು ಈ ಮೂಲಕ ನೀಡುತ್ತಿದ್ದೇವೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ: ಚಲನಚಿತ್ರ ನಿರ್ದೇಶಕಿ ಸುಮನ್ ಕಿತ್ತೂರು

ಪರಿಶಿಷ್ಟ ಜಾತಿ ಒಳಮೀಸಲಾತಿ ವಿಚಾರದಲ್ಲಿ ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ...

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

ಕರ್ನಾಟಕ ಕೃಷಿ ಇಲಾಖೆಯಿಂದ ರೈತರಿಗೆ ಡಿಜಿಟಲ್ ಬಲ: ಬಿಇಎಲ್ ಜೊತೆ ಒಡಂಬಡಿಕೆ

ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ...

Download Eedina App Android / iOS

X