ರಾಜ್ಯದ ಹಲವು ಜಿಲ್ಲೆಗಳಲ್ಲಿ ಚಳಿ ಅಧಿಕವಾಗುತ್ತಿದೆ. ಈ ನಡುವೆ ಮುಂದಿನ ಎರಡು ದಿನಗಳ ಕಾಲ ಉತ್ತರ ಒಳನಾಡಿನ ಮೂರು ಜಿಲ್ಲೆಗಳಲ್ಲಿ ಶೀತಗಾಳಿ ಇರುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.
ರಾಜ್ಯದಾದ್ಯಂತ ಮುಂದಿನ ಮೂರು ದಿನಗಳ ಕಾಲ ಒಣ ಹವೆ ಇರುವ ಸಾಧ್ಯತೆಯಿದೆ. ಕರ್ನಾಟಕದ ಒಳಭಾಗದಲ್ಲಿ ಒಂದೆರಡು ಸ್ಥಳಗಳಲ್ಲಿ ಮಂಜು ಆವರಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.
ಇದನ್ನು ಓದಿದ್ದೀರಾ? ಹವಾಮಾನ ವರದಿ | ರಾಜ್ಯದಲ್ಲಿ ಎರಡು ದಿನ ಭಾರೀ ಚಳಿ; ಆವರಿಸಿಕೊಳ್ಳಲಿದೆ ದಟ್ಟ ಮಂಜು
ಮುಂದಿನ 2 ದಿನಗಳಲ್ಲಿ ಉತ್ತರ ಒಳನಾಡಿನ ಬೀದರ್, ಕಲಬುರಗಿ, ವಿಜಯಪುರ ಜಿಲ್ಲೆಗಳಲ್ಲಿ ಶೀತಗಾಳಿಯ ಇರುವ ಸಾಧ್ಯತೆಯಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಕನಿಷ್ಠ ತಾಪಮಾನದಲ್ಲಿ ಯಾವುದೇ ಗಮನಾರ್ಹ ಬದಲಾವಣೆ ಇರುವುದಿಲ್ಲ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಉನ್ನು ಜನವರಿ 5ರ ಮುಂಜಾನೆವರೆಗೆ ಬೆಂಗಳೂರಿನಲ್ಲಿ ಶುಭ್ರ ಆಕಾಶ ಇರಲಿದೆ. ಬೆಂಗಳೂರಿನ ಸುತ್ತಮುತ್ತಲಿನ ಸ್ಥಳಗಳಲ್ಲಿ ಬೆಳಗಿನ ಜಾವ ಸಾಧಾರಣ ಮುಂಜು ಇರುವ ಸಾಧ್ಯತೆಯಿದೆ. ಗರಿಷ್ಠ ಅಥವಾ ಕನಿಷ್ಠ ತಾಪಮಾನವು ಕ್ರಮವಾಗಿ 27 ಡಿಗ್ರಿ ಸೆಲ್ಸಿಯಸ್ ಮತ್ತು 15 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆಯಿದೆ ಎಂದು ಹವಾಮಾನ ವರದಿ ಉಲ್ಲೇಖಿಸಿದೆ.
#ಶೀತ #ಗಾಳಿ #ಎಚ್ಚರಿಕೆ: #Coldwave pic.twitter.com/yPZZ1UtxoW
— Karnataka State Natural Disaster Monitoring Centre (@KarnatakaSNDMC) January 4, 2025
