ಕಾರಿಗೆ ಟ್ರಕ್ ಡಿಕ್ಕಿ | ಇಬ್ಬರು ಬಿಜೆಪಿ ನಾಯಕರ ಸಾವು; ಪೂರ್ವಯೋಜಿತ ಕೃತ್ಯ ಆರೋಪ

Date:

Advertisements

ಟ್ರಕ್ ಒಂದು ಕಾರಿಗೆ ಡಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಸಾವನ್ನಪ್ಪಿರುವ ಘಟನೆ ಭಾನುವಾರ ಮುಂಜಾನೆ ಒಡಿಶಾದ ಸಂಬಲ್‌ಪುರ್ ಜಿಲ್ಲೆಯಲ್ಲಿ ನಡೆದಿದೆ.

ಮೃತ ಬಿಜೆಪಿ ನಾಯಕರನ್ನು ದೇವೇಂದ್ರ ನಾಯಕ್ ಮತ್ತು ಮುರಳೀಧರ್ ಚುರಿಯಾ ಎಂದು ಗುರುತಿಸಲಾಗಿದೆ. ನಾಯಕ್ ಬಿಜೆಪಿಯ ಗೋಶಾಲಾ ಮಂಡಲ ಅಧ್ಯಕ್ಷರಾಗಿದ್ದರೆ, ಚುರಿಯಾ ಮಾಜಿ ಸರಪಂಚ್ ಆಗಿದ್ದರು. ಇವರಿಬ್ಬರೂ ಬಿಜೆಪಿಯ ಹಿರಿಯ ನಾಯಕಿ ನೌರಿ ನಾಯ್ಕ್‌ಗೆ ಆಪ್ತರಾಗಿದ್ದರು ಎಂದು ವರದಿಯಾಗಿದೆ.

ಕಾರಿನಲ್ಲಿ ಚಾಲಕ ಸೇರಿದಂತೆ ಆರು ಜನರಿದ್ದರು. ಅವರು ಭುವನೇಶ್ವರದಿಂದ ಕಾರ್ಡೋಲಾದಲ್ಲಿರುವ ತಮ್ಮ ನಿವಾಸಕ್ಕೆ ಹಿಂದಿರುಗುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

Advertisements

ಇದನ್ನು ಓದಿದ್ದೀರಾ? ಪ್ರಿಯಾಂಕಾ ಗಾಂಧಿ ಕೆನ್ನೆಯಂತೆ ನುಣುಪಾದ ರಸ್ತೆ ನಿರ್ಮಾಣ : ಬಿಜೆಪಿ ನಾಯಕನ ಹೇಳಿಕೆಗೆ ತೀವ್ರ ಖಂಡನೆ

ಎಲ್ಲಾ ಆರು ಜನರನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆ ಪೈಕಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ವೈದ್ಯರು ಘೋಷಿಸಿದರು. ಗಾಯಾಳುಗಳು ಅಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದರು.

ಈ ಅಪಘಾತದಲ್ಲಿ ಗಾಯಗೊಂಡ ಸುರೇಶ ಚಂದಾ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದು, “ವಾಹನವು ನಮ್ಮ ಕಾರಿಗೆ ಎರಡು ಬಾರಿ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಯಾರೋ ಉದ್ದೇಶಪೂರ್ವಕವಾಗಿ ನಮ್ಮ ವಾಹನವನ್ನು ಡಿಕ್ಕಿ ಹೊಡೆಯಲು ಪ್ರಯತ್ನಿಸುತ್ತಿದ್ದಾರೆ ಎಂದು ಶಂಕಿಸಿದ ಚಾಲಕ, ಕಾಂತಪಲ್ಲಿ ಚೌಕದ ಬಳಿ ಹೆದ್ದಾರಿಯಿಂದ ಗ್ರಾಮಾಂತರ ರಸ್ತೆಯ ಕಡೆಗೆ ಕಾರನ್ನು ತಿರುಗಿಸಿದರು. ಆದರೆ ಬಳಿಕವೂ ಕಾರು ಹಿಂಬಾಳಿಸಿದೆ. ಈ ವೇಳೆ ಕಾರು ಪಲ್ಟಿಯಾಗಿದೆ. ಹೆದ್ದಾರಿಯಲ್ಲಿ ತಮ್ಮ ಕಾರಿಗೆ ಡಂಪರ್ ಎರಡು ಬಾರಿ ಡಿಕ್ಕಿ ಹೊಡೆಯುವವರೆಗೂ ನನಗೆ ಪ್ರಜ್ಞೆಯಿತ್ತು. ಆದರೆ ಮೂರನೇ ಬಾರಿ ಡಿಕ್ಕಿ ಹೊಡೆದಾಗ ಪ್ರಜ್ಞೆ ತಪ್ಪಿತು” ಎಂದು ಹೇಳಿದರು.

ಇದನ್ನು ಓದಿದ್ದೀರಾ? ಒಡಿಶಾ | ಅಲೆಮಾರಿ ಕುಟುಂಬದ ಐವರ ಬರ್ಬರ ಹತ್ಯೆ; ಐವರ ಅಪಹರಣ

“ಯಾರೋ ಉದ್ದೇಶಪೂರ್ವಕವಾಗಿ ಅಪಘಾತ ಮಾಡಿದ್ದಾರೆ ಎಂದು ನನಗೆ ಖಾತ್ರಿಯಿದೆ. ತಪ್ಪಿ ಒಮ್ಮೆ ವಾಹನಕ್ಕೆ ಡಿಕ್ಕಿ ಹೊಡೆಯಬಹುದು. ಹಿಂದಿನಿಂದ ಮೂರು ಬಾರಿ ಯಾಕೆ ಡಿಕ್ಕಿ ಹೊಡೆಯುತ್ತಾರೆ” ಎಂದು ಗಾಯಗೊಂಡ ಬಿಜೆಪಿ ಕಾರ್ಯಕರ್ತ ಪ್ರಶ್ನಿಸಿದ್ದಾರೆ.

ಗಾಯಾಳುಗಳನ್ನು ಭೇಟಿ ಮಾಡಿದ ನಂತರ ಮಾತನಾಡಿದ ಮಾಜಿ ಶಾಸಕ ರೆಂಗಾಳಿ ನಾಯ್ಕ್, “ಇದು ಅಪಘಾತವಲ್ಲ, ಉದ್ದೇಶಪೂರ್ವಕವಾಗಿ ಕಾರಿಗೆ ಡಿಕ್ಕಿ ಹೊಡೆಯಲಾಗಿದೆ, ಇದು ಯೋಜಿತ ಕೃತ್ಯ” ಎಂದು ಆರೋಪಿಸಿದರು. “ಯಾರೋ ಉದ್ದೇಶಪೂರ್ವಕವಾಗಿ ವಾಹನವನ್ನು ಮೂರು ಬಾರಿ ಹೊಡೆದಿದ್ದಾರೆ” ಎಂದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X