ದಾವಣಗೆರೆ | ಗುಡುಗು ಸಹಿತ ಭಾರೀ ಮಳೆ; ಅಪಾರ ಬೆಳೆ ಹಾನಿ

Date:

Advertisements

ದಾವಣಗೆರೆ ಜಿಲ್ಲೆಯಲ್ಲಿ ಬಿರುಗಾಳಿ, ಗುಡುಗು, ಸಿಡಿಲು ಸಹಿತ ಭಾರೀ ಮಳೆಯಾಗಿದ್ದು ಭತ್ತ, ಅಡಿಕೆ, ಬಾಳೆ ಸೇರಿದಂತೆ ಅಪಾರ ಪ್ರಮಾಣದ ಬೆಳೆ ಹಾನಿ ಸಂಭವಿಸಿದೆ. ಜಿಲ್ಲೆಯಲ್ಲಿ ಮಳೆ ಹಾನಿಯಿಂದ ಒಟ್ಟು ₹10.90 ಲಕ್ಷಕ್ಕೂ ಹೆಚ್ಚು ನಷ್ಟವಾಗಿದೆ.

ದಾವಣಗೆರೆ ತಾಲೂಕಿನ ಕೊಡಗನೂರು ಗ್ರಾಮದಲ್ಲಿ 3 ಎಕರೆ, ಜರೀಕಟ್ಟೆ ಗ್ರಾಮದಲ್ಲಿ 2.15 ಎಕರೆಯಲ್ಲಿ ಅಡಿಕೆ ಬೆಳೆ ಹಾಳಾಗಿದ್ದು, 1 ಲಕ್ಷ ರೂ. ನಷ್ಟವಾಗಿದೆ. ಗಿರಿಯಾಪುರದಲ್ಲಿ ಜಿ ಎಸ್ ಅಜ್ಜಪ್ಪ ಹಾಗೂ ನಾಗರಾಜಪ್ಪ ಅವರಿಗೆ ಸೇರಿದ ಹತ್ತಾರು ಎಕರೆ ಪ್ರದೇಶದ ಭತ್ತ ನಾಶವಾಗಿದೆ ಎಂದು ವರದಿಯಾಗಿದೆ.

ಹರಿಹರ ತಾಲೂಕು ವ್ಯಾಪ್ತಿಯ ಇಂಗಳಗೊಂದಿ, ಧೂಳೆಹೊಳೆ ಗ್ರಾಮದಲ್ಲಿ 30 ಎಕರೆ ಭತ್ತದ ಬೆಳೆ ಹಾನಿಯಾಗಿದ್ದು, ₹1.80 ಲಕ್ಷ ಹಾನಿಯಾಗಿರುವುದಾಗಿ ತಿಳಿದುಬಂದಿದೆ.

Advertisements

ಈ ಸುದ್ದಿ ಓದಿದ್ದೀರಾ? ಬೆಂಗಳೂರಿಗೆ ಅಗತ್ಯವಿದೆ 658 ಕಿ.ಮೀ ಒಳಚರಂಡಿ

ಜಗಳೂರು ತಾಲೂಕು ವ್ಯಾಪ್ತಿಯಲ್ಲಿ ಬಿರುಗಾಳಿ ಸಹಿತ ಮಳೆಗೆ 2 ಕಚ್ಚಾ ಮನೆ, 15 ಎಕರೆ ಬಾಳೆ, 5 ಎಕರೆಯಲ್ಲಿ ಬೆಳೆದಿದ್ದ ಅಡಿಕೆ ಬೆಳೆ ನಷ್ಟವಾಗಿದ್ದು, 6 ಲಕ್ಷ ನಷ್ಟವಾಗಿದೆ. ಹೊನ್ನಾಳಿ ತಾಲೂಕಿನಲ್ಲಿ 20 ಎಕರೆ ಭತ್ತ ಹಾನಿಯಾಗಿದ್ದು, 2 ಲಕ್ಷ ರೂ. ನಷ್ಟವಾಗಿದೆ. ಚನ್ನಗಿರಿ ತಾಲೂಕು ವ್ಯಾಪ್ತಿಯಲ್ಲಿ 1 ಎಕರೆ ಬಾಳೆ ಹಾನಿಯಾಗಿದ್ದು, ₹10,000 ನಷ್ಟವಾಗಿದೆ.

ಹರಿಹರ ತಾಲೂಕಿನಲ್ಲಿ 14.5 ಮಿ.ಮೀ, ಹೊನ್ನಾಳಿಯಲ್ಲಿ 13.1 ಮಿ.ಮೀ. ದಾವಣಗೆರೆಯಲ್ಲಿ 3 ಮಿ.ಮೀ, ನ್ಯಾಮತಿಯಲ್ಲಿ 12.1 ಮಿ.ಮೀ, ಜಗಳೂರಿನಲ್ಲಿ 5 ಮಿ.ಮೀ ಮಳೆಯಾಗಿರುವುದು ವರದಿಯಾಗಿದೆ‌.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X