ಹೆತ್ತವರನ್ನು ಸಾಕದಿದ್ದರೆ ಗಿಫ್ಟ್ ಡೀಡ್ ರದ್ದು: ಸುಪ್ರೀಂ ಕೋರ್ಟ್‌ ಮಹತ್ವದ ತೀರ್ಪು

Date:

Advertisements

ತಮ್ಮ ಪೋಷಕರು ಉಡುಗೊರೆ ರೂಪದಲ್ಲಿ (ಗಿಫ್ಟ್ ಡೀಡ್) ನೀಡಿದ ಆಸ್ತಿಯನ್ನು ಅನುಭವಿಸುವ ಹಕ್ಕು ಹೆತ್ತವರನ್ನು ಅವಗಣಿಸಿ, ಅವರ ಯೋಗಕ್ಷೇಮ ನೋಡಿಕೊಳ್ಳದೆ ಬಿಟ್ಟುಬಿಡುವ ಮಕ್ಕಳಿಗೆ ಇರುವುದಿಲ್ಲ. ಮಕ್ಕಳಿಂದ ಅವಗಣಿಸಲ್ಪಟ್ಟರೆ ಹೆತ್ತವರು ಆ ಗಿಫ್ಟ್ ಡೀಡ್‌ಗಳನ್ನು ರದ್ದುಗೊಳಿಸಬಹುದು ಎಂಬ ಮಹತ್ವದ ತೀರ್ಪನ್ನು ಸುಪ್ರೀಂ ಕೋರ್ಟ್‌ನೀಡಿದೆ.

ಡೀಡ್‌ನಲ್ಲಿ ಪೋಷಕರ ಜವಾಬ್ದಾರಿಯನ್ನು ಮಕ್ಕಳು ಹೊರಬೇಕೆಂಬ ವಿಷಯ ಪ್ರಸ್ತಾವಿಸದೆ ಹಾಗೆಯೇ ಡೀಡ್ ಮಾಡಿಕೊಂಡಿದ್ದರೆ, ಅಂತಹ ಡೀಡ್‌ಗಳನ್ನು ಹೆತ್ತವರನ್ನು ನಿರ್ಲಕ್ಷಿಸಿದ ಕಾರಣಕ್ಕೆ ರದ್ದುಗೊಳಿಸಲಾಗದು ಎಂದು ಮಧ್ಯಪ್ರದೇಶ ಹೈಕೋರ್ಟ್‌ಈ ಹಿಂದೆ ತೀರ್ಪು ನೀಡಿತ್ತು. ಆ ತೀರ್ಪನ್ನು ಈಗ ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ ಸಿ ಟಿ ರವಿಕುಮಾರ್ ಹಾಗೂ ನ್ಯಾಯಮೂರ್ತಿ ಸಂಜಯ್ ಕುಮಾರ್ ನೇತೃತ್ವದ ನ್ಯಾಯಪೀಠ ವಜಾಗೊಳಿಸಿದೆ.

ಈ ಮೂಲಕ ಅರ್ಜಿದಾರ ಮಹಿಳೆಯ ಪುತ್ರ ಆಕೆಯ ಕೊನೆಯ ಕಾಲದವರೆಗೂ ಆಕೆಯನ್ನು ನೋಡಿಕೊಳ್ಳಬೇಕು. ಇಲ್ಲದಿದ್ದರೆ ತಾಯಿಯು ಗಿಫ್ಟ್ ಡೀಡ್ ಹಿಂಪಡೆಯಲು ಸ್ವಾತಂತ್ರ್ಯ ಹೊಂದಿದ್ದಾರೆ ಎಂದು ನ್ಯಾಯಪೀಠ ಹೇಳಿದೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕಾನೂನು ದುರುಪಯೋಗ ಕುರಿತ ಸುಪ್ರೀಂ ಕೋರ್ಟ್‌ ಹೇಳಿಕೆ ಅಪಾಯಕಾರಿ

ಹೆತ್ತವರು ಹಾಗೂ ಹಿರಿಯ ನಾಗರಿಕರ ನಿರ್ವಹಣೆ ಮತ್ತು ಕಲ್ಯಾಣ ಕಾಯ್ದೆ ಅನ್ವಯ ಮಕ್ಕಳು ಹೆತ್ತವರನ್ನು ನೋಡಿಕೊಳ್ಳಲು ವಿಫಲರಾದರೆ ಹೆತ್ತವರು ಸಹಿ ಮಾಡಿದ ಗಿಫ್ಟ್ ಡೀಡ್‌ಗಳನ್ನು ಅನೂರ್ಜಿತಗೊಳಿಸಬಹುದು. ಕಾಯ್ದೆಯ ಸೆಕ್ಷನ್ 23ರ ಅನ್ವಯ, “ಕಾಯ್ದೆ ಜಾರಿಯಾದ ಬಳಿಕ ಮಕ್ಕಳಿಗೆ ಗಿಫ್ಟ್ ಡೀಡ್ ಅಥವಾ ಯಾವುದೇ ರೂಪದಲ್ಲಿ ಆಸ್ತಿ ವರ್ಗಾವಣೆ ಮಾಡಿದ ಹೆತ್ತವರನ್ನು ಮಕ್ಕಳು ನೋಡಿಕೊಳ್ಳಬೇಕು. ಅವರಿಗೆ ಬೇಕಾಗಿರುವ ಸೌಕರ್ಯ ಒದಗಿಸಬೇಕು. ಅದರಲ್ಲಿ ವಿಫಲವಾದರೆ ಆಸ್ತಿಯನ್ನು ಬಲವಂತವಾಗಿ, ವಂಚನೆಯಿಂದ ಬರೆಯಿಸಿಕೊಳ್ಳಲಾಗಿದೆ ಎಂದು ಪರಿಗಣಿಸಲಾಗುತ್ತದೆ’ ಎಂದೂ ನ್ಯಾಯಪೀಠ ಹೇಳಿದೆ.

ಒಂಟಿಯಾಗಿರುವ ಹಿರಿಯ ನಾಗರಿಕರಿಗೆ, ಮಕ್ಕಳಿಂದ ಕಡೆಗಣಿಸಲ್ಪಟ್ಟ ಹೆತ್ತವರಿಗೆ ಸಹಾಯ ಹಸ್ತ ನೀಡುವ ನಿಟ್ಟಿನಲ್ಲಿ ಈ ಕಾಯ್ದೆಯನ್ನು ತರಲಾಗಿದೆ. ಅದರ ನಿಬಂಧನೆಗಳನ್ನು ಕಟ್ಟುನಿಟ್ಟಾಗಿ ಅಲ್ಲ, ಉದಾರವಾಗಿ ಅರ್ಥೈಸಿಕೊಳ್ಳಬೇಕಾದ ಅಗತ್ಯವಿದೆ ಎಂದು ನ್ಯಾಯಪೀಠ ಹೇಳಿದೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X