ಕೊಪ್ಪಳ | ತಂಬಾಕು ಸೇವನೆ ವಿರುದ್ಧ ಜಾಗೃತಿ ಕಾರ್ಯಕ್ರಮ

Date:

ತಂಬಾಕು ಸೇವನೆ ಆರೋಗ್ಯಕ್ಕೆ ಹಾನಿಕಾರಕವಾಗಿದ್ದು, ಪ್ರತಿದಿನ ದೇಶದಲ್ಲಿ ಸಾವಿರಾರು ಮಂದಿ ತಮ್ಮ ಪ್ರಾಣ ಕಳೆದು ಕೊಳ್ಳುತ್ತಿದ್ದಾರೆ ಎಂದು ಡಾ. ವಿವೇಕ ವಾಗುಲೆ ಆತಂಕ ವ್ಯಕ್ತಪಡಿಸಿದರು.

ಕೊಪ್ಪಳ ಜಿಲ್ಲೆಯ ಯಲಬುರ್ಗಾ ನಗರದ ಭಸವೇಶ್ವರ ಸಮುದಾಯ ಭವನದಲ್ಲಿ ಆಯೋಜಿಸಿದ್ದ ವಿಶ್ವ ತಂಬಾಕು ವಿರೋಧಿ ದಿನಾಚರಣೆ ಸಮಾರಂಭದಲ್ಲಿ ಮಾತನಾಡಿದರು. “ಶ್ವಾಸಕೋಶದ ತೊಂದರೆ, ಕ್ಯಾನ್ಸರ್‌ ಸೇರಿದಂತೆ ಇನ್ನಿತರ ಮಾರಕ ರೋಗಗಳಿಗೆ ತುತ್ತಾಗುತ್ತಿದ್ದಾರೆ. ನಿತ್ಯ 250ಕ್ಕೂ ಅಧಿಕ ಮಂದಿ ಹೃದ್ರೋಗ ಸಂಬಂಧಿ ಖಾಯಿಲೆಗಳಿಂದ ಇಹಲೋಕ ತ್ಯಜಿಸುತ್ತಿದ್ದಾರೆ. ತಂಬಾಕು ಸೇವನೆ ಆರೋಗ್ಯಕ್ಕೆ ಹಾನಿಕರವಾಗಿದ್ದು ಸಾರ್ವಜನಿಕ ರುಪಾನ್‌ ಮಸಲಾ, ಗುಟ್ಕಗಳಂತ ತಂಬಾಕುಗಳಿಂದ ದೂರ ಇರಬೇಕು” ಎಂದು ಕರೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ₹1715.81 ಕೋಟಿ ವಿದ್ಯುತ್‌ ಶುಲ್ಕ ಬಾಕಿ ಉಳಿಸಿಕೊಂಡಿವೆ ಇಲಾಖೆಗಳು

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಜ್ಞಾನ ವಿಕಾಸ ಸಮನ್ವಯ ಅಧಿಕಾರಿ ಗೀತಾ ಓಲೆಕಾರ ಪ್ರಾಸ್ತಾವಿಕವಾಗಿ ಮಾತನಾಡಿ, “ಗ್ರಾಮಾಭಿವೃದ್ದಿ ಯೋಜನೆ ಹಿನ್ನಲೆಯಲ್ಲಿ ಗ್ರಾಮೀಣಾಭಿವೃದ್ಧಿಗಾಗಿ ಹಲವಾರು ಕಾರ್ಯಕ್ರಮಗಳನ್ನ ಅನುಷ್ಠಾನಗೊಳಿಸಿ ದುಶ್ಚಟಗಳ ಕುರಿತು ಜಾಗೃತಿ ಮೂಡಿಸುತಿದ್ದಾರೆ” ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಒಕ್ಕೂಟದ ಮಾಜಿ ಅಧ್ಯಕ್ಷೆ ಗೌರಮ್ಮ ಬಡಿಗೇರ, ವಲಯ ಮೇಲ್ವಿಚಾರಕಿ ತ್ರಿವೇಣಿ ಭಾವಿಕಟ್ಟಿ, ಸೇವಾಪ್ರತಿನಿಧಿಗಳಾದ ಶಿವಲೀಲಾ ಅಂಗಡಿ, ವಿಜಯಲಕ್ಷ್ಮಿ ಅಂಗಡಿ, ಲಕ್ಷ್ಮೀ ಕುಂಬಾರ ಸೇರಿದಂತೆ ಕೇಂದ್ರದ ಸದಸ್ಯರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ಲೋಕಸಭಾ ಚುನಾವಣೆ; ಮಾಂಗಲ್ಯ ಧಾರಣೆ ಬಳಿಕ ಮತಗಟ್ಟೆಗೆ ಬಂದು ಮತ ಚಲಾಯಿಸಿದ ದಂಪತಿ

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ, ಚುನಾವಣೆ ಹಾಗೂ ಮತದಾನ ಬಹಳ ಮುಖ್ಯ ಪಾತ್ರ ವಹಿಸುತ್ತದೆ....

ಹಾಸನ ಪೆನ್‌ಡ್ರೈವ್ ಪ್ರಕರಣ | ಸಂಬಂಧಪಟ್ಟವರ ಬಂಧನಕ್ಕೆ ಆಗ್ರಹಿಸಿ ಏ.29ರಂದು ಪ್ರತಿಭಟನೆ

ನೂರಾರು ಅಶ್ಲೀಲ ವಿಡಿಯೋಗಳು, ಚಿತ್ರಗಳು ಇರುವ ಹಾಸನದ ಪೆನ್ ಡ್ರೈವ್ ಲೈಂಗಿಕ...