ಕಲಬುರಗಿ | ಚಿಂಚೋಳಿ ಬಂದ್‌ಗೆ ಉತ್ತಮ ಸ್ಪಂದನೆ : ಅಮಿತ್ ಶಾ ಅವರ ಅಣಕು ಶವಯಾತ್ರೆ

Date:

Advertisements

ರಾಜ್ಯಸಭೆಯಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿದ್ದ ಹೇಳಿಕೆ ಖಂಡಿಸಿ ಸೋಮವಾರ ಕರೆ ನೀಡಿದ ಚಿಂಚೋಳಿ ಬಂದ್‌ ಯಶಸ್ವಿಯಾಯಿತು. ಪ್ರತಿಭಟನೆಯಲ್ಲಿ ಅಮಿತ್‌ ಶಾ ಅವರ ಶವಯಾತ್ರೆ ಅಣಕು ಶವಯಾತ್ರೆ ನಡೆಸಿ, ಭಾವಚಿತ್ರ ಪ್ರತಿಕೃತಿ ದಹಿಸಲಾಯಿತು.

ನಾಗರಿಕ ಹಿತರಕ್ಷಣಾ ಸಮಿತಿ ಕರೆ ನೀಡಿದ ಬಂದ್‌ಗೆ ವಿವಿಧ ಸಂಘಟನೆಗಳು ಬೆಂಬಲ ಸೂಚಿಸಿದರು. ಬೆಳಿಗ್ಗೆ 6 ರಿಂದ ಪ್ರತಿಭಟನೆ ಆರಂಭಿಸಿದ ಹೋರಾಟಗಾರರು, ಮಧ್ಯಾಹ್ನ 2 ಗಂಟೆವರೆಗೆ ಪಾದಯಾತ್ರೆ, ಟೈರ್‌ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ಬಂದ್‌ ಶಾಂತಿಯುತವಾಗಿ ನಡೆಯಿತು.‌

WhatsApp Image 2025 01 07 at 12.25.01 AM

ಆಸ್ಪತ್ರೆ ಮತ್ತು ಔಷಧಿ ಅಂಗಡಿಗಳು ಹೊರತುಪಡಿಸಿ ಉಳಿದೆಲ್ಲಾ ಅಂಗಡಿಗಳು ಮುಚ್ಚಲ್ಪಟ್ಟಿದ್ದವು. ಬೆಳ್ಳಿಗೆಯಿಂದಲೇ ವ್ಯಾಪಾರಸ್ಥರು ಸ್ವಯಂ ಪ್ರೇರಣೆಯಿಂದ ಅಂಗಡಿ ಮುಚ್ಚಿ ಬಂದ್‌ಗೆ ಬೆಂಬಲಿಸಿದರು. ಸಾರಿಗೆ ಸಂಸ್ಥೆಯ ಬಸ್‌ಗಳ ಸಂಚಾರ ಸಂಪೂರ್ಣ ಸ್ಥಗಿತಗೊಂಡಿತ್ತು. ಬಸ್‌ಗಳು ರಸ್ತೆಗಿಳಿಯದ ಕಾರಣ ಪ್ರಯಾಣಿಕರು ಪರದಾಡುತ್ತಿದ್ದ ದೃಶ್ಯಗಳು ಕಂಡು ಬಂದವು. ಶಾಲಾ-ಕಾಲೇಜುಗಳಿಗೆ ಒಂದು ದಿನದ ರಜೆ ಘೋಷಿಸಲಾಗಿತ್ತು.

Advertisements

ಪಟ್ಟಣದ ಡಾ.ಬಿ.ಆರ್.‌ ಅಂಬೇಡ್ಕರ್‌ ವೃತ್ತದಿಂದ ಅಮಿತ್‌ ಶಾ ಅವರ ಅಣಕು ಶವಯಾತ್ರೆ ನಡೆಸಿ, ಬಸವೇಶ್ವರ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಶವವನ್ನು ದಹಿಸಿ ಆಕ್ರೋಶ ಹೊರ ಹಾಕಿದರು. ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರನ್ನು ಅಪಮಾನಿಸಿದ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಸಂಪುಟದಿಂದ ವಜಾಗೊಳಿಸಿ, ಗಡಿಪಾರು ಮಾಡಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಬಹಳಷ್ಟು ಮಾಧ್ಯಮಗಳು ಉದ್ದಿಮೆಯಾಗಿ ಬದಲಾಗಿವೆ: ಶಾಸಕ ಬಿ ಆರ್ ಪಾಟೀಲ್‌

ಪ್ರತಿಭಟನೆಯಲ್ಲಿ ಪ್ರಮುಖರಾದ ಕನ್ನಡ ಪರ ಸಂಘಟನೆಯ ಮುಖಂಡ ಸಚಿನ್ ರಾಠೋಡ್, ತಾಲ್ಲೂಕು ಬಂಜಾರಾ ಸಮಾಜದ ಅಧ್ಯಕ್ಷ ರಾಮಶೆಟ್ಟಿ ಪವಾರ್, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಅಧ್ಯಕ್ಷ ಶರಣು ಪಾಟೀಲ್ ರವಿ ಪೋತಕಪಳ್ಳಿ, ತಾಲ್ಲೂಕು ಕೋಲಿ ಸಮಾಜದ ಮುಖಂಡ ಅನೀಲಕುಮಾರ ಪಾಟೀಲ್ ಹಾಗೂ ಪ್ರಮುಖರಾದ ಗೋಪಾಲ್ ರಾಂಪೂರೆ, ಕಾಮರಾವ್ ಕೊರವಿ, ಗೌತಮ್ ಬೊಮ್ಮನಳ್ಳಿ ಮಾರುತಿ ಗಂಜಗಿರಿ, ಸಂತೋಷ್ ಗುತ್ತೇದಾರ್, ಮಾಣಿಕರಾವ್ ಗುಲಗುಂಜಿ, ಮುಸ್ಲಿಂ ಸಮಾಜದ ಮುಖಂಡ ಅಬ್ದುಲ್ ಬಾಸಿತ್, ರೈತ ಸಂಘಟನೆ ಶರಣಬಸಪ್ಪ ಮಮ್ಮಶೆಟ್ಟಿ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ : ಗಾಂಜಾ ಮಾರಾಟ ಮಾಫಿಯಾ 9 ಮಂದಿ ಅರೆಸ್ಟ್ : ರೂ 30 ಲಕ್ಷ ಮೌಲ್ಯದ ಗಾಂಜಾ ವಶ

ಬೆಳಗಾವಿ ನಗರದಲ್ಲಿ ಗಾಂಜಾ ಮಾರಾಟ ಜಾಲ ಬಯಲಾಗಿದ್ದು, ಬೆಳಗಾವಿ ಪೊಲೀಸರು ದೊಡ್ಡ...

ಬಾಗಲಕೋಟೆ | ಬಿಜೆಪಿ ಮತಗಳ್ಳತನ ವಿರುದ್ಧ ವ್ಯಾಪಕ ಹೋರಾಟ: ಮಾಜಿ ಸಚಿವ ವಿನಿಯಕುಮಾರ್

ಬಿಜೆಪಿ ಮತಗಳ್ಳತನ ನಡೆಸಿ ಚುನಾವಣೆ ಅಕ್ರಮ ಎಸಗಿರುವ ಬಗ್ಗೆ ವ್ಯಾಪಕವಾಗಿ ಹೋರಾಟ...

ಶಿವಮೊಗ್ಗ | KSRTC ನಗರ ಸಾರಿಗೆ ಬಸ್ ಮಲವಗೊಪ್ಪದ, ಚೆನ್ನಬಸವೇಶ್ವರ ದೇವಸ್ಥಾನ ಬಳಿ ಕಡ್ಡಾಯ ನಿಲುಗಡೆಗೆ ಆದೇಶ

ಶಿವಮೊಗ್ಗ, ಸಾರ್ವಜಕನಿಕ ಪ್ರಯಾಣಿಕರು/ಶಾಲಾ-ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಶಿವಮೊಗ್ಗ-ಭದ್ರಾವತಿ ಮಾರ್ಗದಲ್ಲಿ ಕಾರ್ಯಾಚರಣೆಯಾಗುವ ನಗರ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

Download Eedina App Android / iOS

X