Breaking News | ಮುಖ್ಯವಾಹಿನಿಗೆ ಬರಲು ನಕ್ಸಲ್ ಹೋರಾಟಗಾರರ ಗ್ರೀನ್ ಸಿಗ್ನಲ್!

Date:

Advertisements

ಸಶಸ್ತ್ರ ಹೋರಾಟವನ್ನು ತ್ಯಜಿಸಿ ಮುಖ್ಯವಾಹಿನಿ ಬರಲು ಮತ್ತು ಪ್ರಜಾತಾಂತ್ರಿಕ ಹೋರಾಟದಲ್ಲಿ ತೊಡಗಿಸಿಕೊಳ್ಳಲು ನಕ್ಸಲ್ ಹೋರಾಟಗಾರರು ನಿರ್ಧಾರಿಸಿದ್ದಾರೆ. ಶಾಂತಿಗಾಗಿ ನಾಗರಿಕ ವೇದಿಕೆಯೊಂದಿಗೆ ಚರ್ಚೆ ನಡೆಸಿರುವ ನಕ್ಸಲ್ ಹೋರಾಟಗಾರರು, ಸರ್ಕಾರದ ಕರೆಯನ್ನು ಒಪ್ಪಿಕೊಂಡಿದ್ದಾರೆ.

ಶಾಂತಿಗಾಗಿ ನಾಗರಿಕ ವೇದಿಕೆಯ ಮುಖಂಡರು ಮತ್ತು ಸರ್ಕಾರದ ಪ್ರತಿನಿಧಿಗಳೊಂದಿಗೆ ಮಾವೋವಾದಿ ಹೋರಾಟಗಾರರು ಸಭೆ ನಡೆಸಿದ್ದಾರೆ. ಸಭೆಯಲ್ಲಿ ತಮ್ಮ ಶರತ್ತುಗಳನ್ನು ಸರ್ಕಾರದ ಮುಂದಿರುವ ನಕ್ಸಲ್‌ ಹೋರಾಟಗಾರರು ಮುಖ್ಯವಾಹಿನಿ ಬರಲು ಸಮ್ಮತಿ ಸೂಚಿಸಿದ್ದಾರೆ.

ಮಾವೋವಾದಿ 1

ಈ ಬಗ್ಗೆ ಚಿಕ್ಕಮಗಳೂರು ಜಿಲ್ಲಾ ವರಿಷ್ಠಾಧಿಕಾರಿ ಡಾ.ವಿಕ್ರಮ್ ಅಮಟೆ ಮಾಹಿತಿ ನೀಡಿದ್ದಾರೆ. “ಚಿಕ್ಕಮಗಳೂರಿನ ಮುಂಡಗಾರು ಲತಾ, ವನಜಾಕ್ಷಿ, ದಕ್ಷಿಣ ಕನ್ನಡದ ಸುಂದರಿ, ಕೇರಳದ ಜೀಶ, ತಮಿಳುನಾಡಿನ ವಸಂತ ಕೆ ಮತ್ತು ಆಂದ್ರಪ್ರದೇಶದ ಮಾರೆಪ್ಪ ಅರೋಲಿ ಅವರು ಸರ್ಕಾರದ ಮುಂದೆ ಶರಣಾಗುವುದಾಗಿ ಒಪ್ಪಿಕೊಂಡಿದ್ದಾರೆ” ಎಂದು ತಿಳಿಸಿದ್ದಾರೆ.

Advertisements

“ಆರು ಮಂದಿ ನಕ್ಸಲ್ ಹೋರಾಟಗಾರರು ಬುಧವಾರ ಸರ್ಕಾರದ ಎದುರು ಶರಣಾಗಲಿದ್ದಾರೆ. ಅವರಿಗೆ ಸರ್ಕಾರವು ಶರಣಾಗತಿ ಮತ್ತು ಪುನರ್ವಸತಿಯ ವಿಶೇಷ ಪ್ಯಾಕೇಜ್ ಅಡಿಯಲ್ಲಿ ಸೌಲಭ್ಯಗಳನ್ನು ಒದಗಿಸಲಿದೆ” ಎಂದು ಸರ್ಕಾರ ತಿಳಿಸಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

ಏಷ್ಯನ್ ಶೂಟಿಂಗ್ ಚಾಂಪಿಯನ್‌ಶಿಪ್ಸ್: ಮಹಿಳೆಯರ 10ಮೀ ಏರ್ ರೈಫಲ್ ಸ್ಪರ್ಧೆಯಲ್ಲಿ ಭಾರತಕ್ಕೆ ಚಿನ್ನ

ಕಝಾಕಿಸ್ತಾನದ ಶಿಮ್ಕೆಂಟ್‌ನಲ್ಲಿ ನಡೆಯುತ್ತಿರುವ 16ನೇ ಏಷ್ಯನ್ ಶೂಟಿಂಗ್ ಚಾಂಪಿಯನ್‌ಶಿಪ್‌ನ ಮಹಿಳೆಯರ 10...

Download Eedina App Android / iOS

X