ಶಿವಮೊಗ್ಗ | ಸಂವಿಧಾನದ ರಕ್ಷಣೆ ಪ್ರತಿಯೊಬ್ಬ ಭಾರತೀಯರ ಹೊಣೆ: ನಿವೃತ್ತ ಪ್ರಾಂಶುಪಾಲ ಪ್ರೊ ಎಚ್. ರಾಚಪ್ಪ

Date:

Advertisements

ಸಂವಿಧಾನವನ್ನು ರಕ್ಷಣೆ ಮಾಡುವುದು ಪ್ರತಿಯೊಬ್ಬ ಭಾರತೀಯನ ಹೊಣೆ ಎಂದು ನಿವೃತ್ತ ಪ್ರಾಂಶುಪಾಲ ಪ್ರೊ ಎಚ್. ರಾಚಪ್ಪ ಅಭಿಪ್ರಾಯಪಟ್ಟರು.

ದಿ. 01-01-2025 ರಂದು ಶಿವಮೊಗ್ಗದ ಕರ್ನಾಟಕ ದಲಿತ ಸಂಘರ್ಷ ಜಿಲ್ಲಾ ಸಮಿತಿಯ ವತಿಯಿಂದ ಆಯೋಜಿಸಿದ್ದ ʼಭೀಮ ಕೋರೆಗಾಂವ್ ವಿಜಯದ ದಿನʼ ಕಾರ್ಯಕ್ರಮವನ್ನು ಉದ್ಗಾಟಿಸಿ ಮಾತನಾಡಿದ ಅವರು, ʼಭಾರತೀಯರ ಸ್ವಾಭಿಮಾನವೇ ಸಂವಿಧಾನವಾಗಿ ರೂಪುಗೊಂಡಿದೆ. ನಮ್ಮ ಎಲ್ಲಾ ಹೋರಾಟದ ಹಿರಿಯ ಸಮಾಜ ಸುಧಾರಕರ ಹೋರಾಟದ ಪ್ರತಿಫಲವಾಗಿ ಬೃಹತ್‌ ಸಂವಿಧಾನವನ್ನು ಪಡೆದಿದ್ದೇವೆ. ಸಂವಿಧಾನ ರಕ್ಷಣೆ ನಮ್ಮೆಲ್ಲರ ಕರ್ತವ್ಯ ಎಂದರು.

WhatsApp Image 2025 01 07 at 1.34.15 PM

“ದೇಶದ ಇತಿಹಾಸದಲ್ಲೇ ಶೂದ್ರ ಸಮುದಾಯವನ್ನು ಅತ್ಯಂತ ಕ್ರೂರವಾಗಿ ನಡೆಸಿಕೊಂಡಿದ್ದ ಪೇಶ್ವೆಗಳ ಆಡಳಿತವನ್ನು ಖಂಡಿಸಿ ಕೋರೆಗಾಂವ್ ನಲ್ಲಿ ಮಹರ್ ರೆಜಿಮೆಂಟಿನ ನಾಯಕ ಸಿದ್ದನಾಯಕರ ನೇತೃತ್ವದಲ್ಲಿ ಯುದ್ಧ ಮಾಡಲಾಯಿತು.  ಭಾರತದ ಮೂಲನಿವಾಸಿಗಳ, ಶೋಷಿತ ಸಮುದಾಯಗಳ ವಿಮೋಚನೆಗಾಗಿ, ಅವರ ಸ್ವಾಭಿಮಾನಕ್ಕಾಗಿ 29 ಸಾವಿರ ಪೇಶ್ವೆ ಸೈನಿಕರ ವಿರುದ್ಧ ಹೋರಾಡಿ ಹುತಾತ್ಮರಾದ ರೆಜಿಮೆಂಟಿನ 28 ಮಹಾ ಸೈನಿಕರ ನೆನಪಿಗಾಗಿ 65 ಅಡಿ ಸ್ಮಾರಕವನ್ನು ಕೋರೆಗಾಂವ್‌ ನಲ್ಲಿ ನಿರ್ಮಿಸಲಾಗಿದೆ. ಅವರ ತ್ಯಾಗ ಬಲಿದಾನವನ್ನು ಸ್ಮರಿಸುವ ಸಲುವಾಗಿ ʼಭೀಮ ಕೋರೆಗಾಂವ್ ವಿಜಯದ ದಿನʼವನ್ನು ಆಚರಿಸಲಾಗುತ್ತದೆ. ಅವರು ತಂದುಕೊಟ್ಟ ಸ್ವಾಭಿಮಾನದ ಮೊದಲ ಸ್ವಾತಂತ್ರ್ಯ ಹಾಗೂ ಸಮಾನತೆಯ ಪ್ರತೀಕವಾದ ಸಂವಿಧಾನ ಸದ್ಯ ಅಪಾಯದಲ್ಲಿದೆ. ನಾವೆಲ್ಲರೂ ಇದರ ರಕ್ಷಣೆಗೆ ಕೈಜೋಡಿಸಬೇಕು ಎಂದು ತಿಳಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಸರ್ಕಾರಿ ಶಾಲೆ ಶಿಕ್ಷಕಿ ನಿವೃತ್ತಿ; ಅಂಬೇಡ್ಕರ್ ಫೋಟೋ ನೀಡಿ, ಹಳೆ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ

ಕಾರ್ಯಕ್ರಮದಲ್ಲಿ ಡಿಎಸ್ಎಸ್ ಜಿಲ್ಲಾ ಪ್ರಧಾನ ಸಂಚಾಲಕ ಹಾಲೇಶಪ್ಪ, ವಕೀಲ ಎಸ್.ಎಚ್.ಧನಂಜಯ್, ಎ.ಡಿ.ಆನಂದಪ್ಪ, ಎಂ.ಮಂಜುನಾಥ, ಸಂತೆಕಡೂರು ಪರಮೇಶ್, ಹುಣಸೋಡು ಶೇಷಪ್ಪ, ಸೂಗೂರು ಪರಮೇಶ್, ಶ್ರೀಮತಿ ಲತಾ ಹರೀಶ್ ಹಾಗೂ ಕಲ್ಲಿಹಾಳ್ ಹನುಮಂತಪ್ಪ ಉಪಸ್ಥಿತರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X