ಒಳಮೀಸಲಾತಿ | ನ್ಯಾ.ನಾಗಮೋಹನ ದಾಸ್ ಜೊತೆ ಬಿಜೆಪಿ ನಿಯೋಗ ಚರ್ಚೆ

Date:

Advertisements

ಬಿಜೆಪಿ ನಾಯಕರಾದ ಸಂಸದ ಗೋವಿಂದ ಕಾರಜೋಳ ಮತ್ತು ಮಾಜಿ ಕೇಂದ್ರ ಸಚಿವರಾದ ಅನೇಕಲ್ ನಾರಾಯಣಸ್ವಾಮಿ ನೇತೃತ್ವದಲ್ಲಿ ಮಂಗಳವಾರ ಒಳಮೀಸಲಾತಿ ಹೋರಾಟಗಾರರ ನಿಯೋಗ ನ್ಯಾ.ನಾಗಮೋಹನದಾಸ್ ಅವರನ್ನು ಅವರ ಏಕ ಸದಸ್ಯ ಆಯೋಗದ ಕಚೇರಿಯಲ್ಲಿ ಭೇಟಿಯಾಗಿ ಚರ್ಚೆ ನಡೆಸಿತು.

ಸುಪ್ರೀಂಕೋರ್ಟ್ ತೀರ್ಪಿನ ತರುವಾಯ ಒಳ ಮೀಸಲಾತಿ ಜಾರಿ ತ್ವರಿತವಾಗಿ ಆಗಬೇಕಾದ ಅಗತ್ಯ, ಆದಿ ಕರ್ನಾಟಕ, ಆದಿದ್ರಾವಿಡ ವಿಷಯದಲ್ಲಿನ ದತ್ತಾಂಶಗಳ ನಿಖರತೆ ಬಗ್ಗೆ ಹಲವು ಆಯಾಮದ ಚರ್ಚೆ ನಡೆಸಲಾಯಿತು. ನ್ಯಾ ನಾಗಮೋಹನ್ ದಾಸ್ ಅವರ ಶಿಫಾರಸಿನ ಅನ್ವಯ ಹಿಂದಿನ ಬಿಜೆಪಿ ಸರ್ಕಾರ ಎಸ್ಸಿ, ಎಸ್ಟಿ ಮೀಸಲಾತಿಯನ್ನು ಹೆಚ್ಚಳ ಮಾಡಿರುವುದು ಮತ್ತು 2011ರ ಜನಗಣತಿಯ ದತ್ತಾಂಶಗಳ ಆಧಾರದಲ್ಲಿ ಮಾಧುಸ್ವಾಮಿ ವರದಿ ಮಾಡಿದ ವರ್ಗೀಕರಣದ ವಿವರಗಳನ್ನು ಸಮಿತಿಯ ಸದಸ್ಯರೂ ಆಗಿದ್ದ ಸಂಸದ ಮತ್ತು ಮಾಜಿ ಡಿಸಿಎಂ ಗೋವಿಂದ ಕಾರಜೋಳ ಅವರು ವಿವರಿಸಿದರು.

ಆದಿದ್ರಾವಿಡ, ಆದಿಕರ್ನಾಟಕ ಗೊಂದಲ ಸರಿಪಡಿಸಲು ಮಾಧುಸ್ವಾಮಿ ಸಮಿತಿ ತಾಲೂಕು, ಜಿಲ್ಲೆಗಳ ದತ್ತಾಂಶ ಬಳಸಿರುವ ವಿವರಗಳನ್ನು ಅನೇಕಲ್ ನಾರಾಯಣಸ್ವಾಮಿ ನೀಡಿದರು. ಈ ನಿಯೋಗದಲ್ಲಿ ಒಳ ಮೀಸಲಾತಿ ಹೋರಾಟಗಾರರಾದ ಎಮ್.ಶಂಕರಪ್ಪ, ಬಳ್ಳಾರಿ ಹನುಮಂತಪ್ಪ, ರಾಯಚೂರಿನ ನರಸಪ್ಪ, ಬೀದರ್‍ನ ಫನಾರ್ಂಡೀಸ್ ಹಿಪ್ಪಳಗಾವ್, ಮೈಸೂರಿನ ಡಾ. ಅನಂದಕುಮಾರ್, ಶಾಸಕರಾದ ದುರ್ಯೋಧನ ಐಹೊಳೆ, ಬಸವರಾಜ ಮತ್ತಿಮೋಡ್, ಮಾಜಿ ಶಾಸಕರಾದ ಬಸವರಾಜ್ ಧಡೇಸುಗೂರು, ಬಿಜೆಪಿ ಪ್ರಮುಖರಾದ ಬಿ.ಹೆಚ್.ಅನಿಲ್ ಕುಮಾರ್, ಲಕ್ಷ್ಮಿನಾರಾಯಣ, ವೆಂಕಟೇಶ ದೊಡ್ಡೇರಿ, ಬಳ್ಳಾಹುಣ್ಸಿ ರಾಮಣ್ಣ, ಗವಿಸಿದ್ದಪ್ಪ ದ್ಯಾಮಣ್ಣನವರ್, ಸಾಮಾಜಿಕ ಕಾರ್ಯಕರ್ತ ವಾದಿರಾಜ್ ಇದ್ದರು.

Advertisements

ನ್ಯಾ.ನಾಗಮೋಹನ್ ದಾಸ್ ಒಂದು ತಾಸು ನೆಡೆದ ಚರ್ಚೆಯಲ್ಲಿ ಭಾಗವಹಿಸಿ ತ್ವರಿತವಾಗಿ, ಸಮರ್ಪಕವಾಗಿ ವರದಿ ಸಿದ್ಧಪಡಿಸಿ ಮಾದಿಗ ಸಮಾಜಕ್ಕೆ ಮತ್ತು ಎಲ್ಲ ನೂರೊಂದು ಜಾತಿಗಳಿಗೆ ಸಾಮಾಜಿಕ ನ್ಯಾಯ ಒದಗಿಸುವ ಭರವಸೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ ಕೃಷಿ ಇಲಾಖೆಯಿಂದ ರೈತರಿಗೆ ಡಿಜಿಟಲ್ ಬಲ: ಬಿಇಎಲ್ ಜೊತೆ ಒಡಂಬಡಿಕೆ

ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

Download Eedina App Android / iOS

X