ಡಿಜೆ, ಮದ್ಯ ಮುಕ್ತ ವಿವಾಹ ಸಮಾರಂಭ ನಡೆಸಿದರೆ 21 ಸಾವಿರ ರೂಪಾಯಿ ಬಹುಮಾನ!

Date:

Advertisements

ಪಂಜಾಬ್‌ನ ಬಟಿಂಡಾ ಜಿಲ್ಲೆಯ ಗ್ರಾಮ ಪಂಚಾಯತಿಯೊಂದು ಡಿಜೆ ಮತ್ತು ಮದ್ಯಪಾನವಿಲ್ಲದ ವಿವಾಹಕ್ಕೆ ಉತ್ತೇಜನ ನೀಡಲು ನಿರ್ಧರಿಸಿದೆ. ಇದಕ್ಕಾಗಿ ಮದ್ಯಪಾನ ಮುಕ್ತ ಮತ್ತು ಡಿಜೆ (ಸಂಗೀತ) ಇಲ್ಲದ ವಿವಾಹ ಸಮಾರಂಭವನ್ನು ನಡೆಸಿದರೆ ಕುಟುಂಬಕ್ಕೆ 21,000 ರೂಪಾಯಿಗಳ ನಗದು ಬಹುಮಾನವನ್ನು ನೀಡಲಾಗುವುದು ಎಂದು ಘೋಷಿಸಿದೆ.

ಮದುವೆ ಸಮಾರಂಭಗಳಲ್ಲಿ ದುಂದು ವೆಚ್ಚ ಮಾಡದಂತೆ ಗ್ರಾಮಸ್ಥರನ್ನು ಉತ್ತೇಜಿಸಲು ಮತ್ತು ಮದ್ಯದ ದುರುಪಯೋಗವನ್ನು ತಡೆಯಲು ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಲ್ಲೊ ಗ್ರಾಮದ ಸರಪಂಚ್ ಅಮರ್ಜಿತ್ ಕೌರ್ ಮಂಗಳವಾರ ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಬಳ್ಳಾರಿ | ಮದ್ಯಪಾನ ಮಾಡಿ ಆಸ್ಪತ್ರೆಗೆ ಬಂದಿದ್ದ ವೈದ್ಯಾಧಿಕಾರಿ ‘ಸಸ್ಪೆಂಡ್’

Advertisements

ಸಾಮಾನ್ಯವಾಗಿ ಹಳ್ಳಿಗಳಲ್ಲಿ ಡಿಜೆ, ಮದ್ಯ ಸೇವಿಸುವ ಕಾರ್ಯಕ್ರಮಗಳಲ್ಲಿ ಗಲಾಟೆಯಾಗುತ್ತದೆ. ಜೋರಾದ ಹಾಡಿನಿಂದ ಇತರರಿಗೆ ತೊಂದರೆಯಾಗುತ್ತದೆ. ವಿದ್ಯಾರ್ಥಿಗಳ ಅಧ್ಯಯನಕ್ಕೂ ಇದು ತೊಂದರೆ ಉಂಡು ಮಾಡುತ್ತದೆ ಎಂದು ಹೇಳಿದರು.

“ಮದುವೆ ಸಮಾರಂಭಗಳಲ್ಲಿ ವ್ಯರ್ಥ ಖರ್ಚು ಮಾಡದಂತೆ ಜನರನ್ನು ಪ್ರೋತ್ಸಾಹಿಸಲು ನಾವು ಬಯಸುತ್ತೇವೆ. ಆದ್ದರಿಂದ ಮದ್ಯ ಇಲ್ಲದ, ಡಿಜೆ ಇಲ್ಲದೆ ವಿವಾಹ ನಡೆಸಿದರೆ ಆ ಕುಟುಂಬಕ್ಕೆ ಪ್ರೋತ್ಸಾಹವಾಗಿ 21 ಸಾವಿರ ರೂಪಾಯಿ ನಾವು ನೀಡುತ್ತೇವೆ. ಪಂಚಾಯತ್‌ನಲ್ಲಿ ಈ ನಿರ್ಣಯ ಅಂಗೀಕಾರವಾಗಿದೆ” ಎಂದು ಗ್ರಾಮದ ಸರಪಂಚ್ ಹೇಳಿದರು.

ಬಲ್ಲೊ ಗ್ರಾಮವು ಸುಮಾರು 5,000 ಜನಸಂಖ್ಯೆಯನ್ನು ಹೊಂದಿದೆ. ಇನ್ನು ಗ್ರಾಮದಲ್ಲಿ ಜೈವಿಕ ಅನಿಲ ಘಟಕ ಸ್ಥಾಪಿಸಲೂ ಕೂಡಾ ಪಂಚಾಯಿತಿ ಮುಂದಾಗಿದೆ. ಸಾವಯವ ಕೃಷಿ ಆಯ್ಕೆ ಮಾಡುವ ರೈತರಿಗೆ ಉಚಿತ ಬೀಜಗಳನ್ನು ನೀಡಲಾಗುವುದು ಎಂದು ಪಂಚಾಯತ್ ತಿಳಿಸಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X