ಉಡುಪಿ | ಜ 20ರವರೆಗೆ ಯುವನಿಧಿ: ವಿಶೇಷ ನೋಂದಣಿ ಅಭಿಯಾನ

Date:

Advertisements

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಯುವನಿಧಿ ಯೋಜನೆಯಲ್ಲಿ 2022-23 ಹಾಗೂ 2023-24 ರಲ್ಲಿ ಉತ್ತೀರ್ಣರಾದ ಪದವಿ, ಸ್ನಾತಕೋತರ ಪದವಿ ಮತ್ತು ಡಿಪ್ಲೋಮಾಗಳ ವಿಧ್ಯಾರ್ಥಿಗಳು ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸಲು ಜನವರಿ 6 ರಿಂದ 20 ರವರೆಗೆ ವಿಶೇಷ ನೋಂದಣಿ ಅಭಿಯಾನವನ್ನು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಸಂಕೀರ್ಣದ ಬಿ ಬ್ಲಾಕ್, ರೂ.ನಂ. 201 ರ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ ಇಲ್ಲಿ ಅಯೋಜಿಸಲಾಗಿದೆ.

ಜಿಲ್ಲೆಯ ಎಲ್ಲಾ ಪದವಿ ಕಾಲೇಜುಗಳು ಹಾಗೂ ಡಿಪ್ಲೋಮಾ ಕಾಲೇಜುಗಳಲ್ಲಿಯೂ ವಿಶೇಷ ನೋಂದಣಿ ಅಭಿಯಾನವನ್ನು ಆಯೋಜಿಸಲಾಗಿದ್ದು, ಆಯಾ ತಾಲೂಕಿನ ಅಭ್ಯರ್ಥಿಗಳು ಇದರ ಉಪಯೋಗವನ್ನು ಪಡೆದುಕೊಳ್ಳಬಹುದು. ಪ್ರತಿ ತಿಂಗಳು ಪದವಿಧರರಿಗೆ 3,000 ರೂ. ಹಾಗೂ ಡಿಪ್ಲೋಮಾದಾರರಿಗೆ 1,500 ರೂ. ಗಳನ್ನು ನಿರುದ್ಯೋಗ ಭತ್ಯೆಯ ಮೂಲಕ ನೀಡಲಾಗುವುದು. ಫಲಿತಾಂಶದ ನಂತರ ನಿರುದ್ಯೋಗಿಗಳಾಗಿ 180 ದಿವಸಗಳು ಪೊರೈಸಿದ ಅಭ್ಯರ್ಥಿಗಳು ಕೂಡ ಸೇವಾ ಸಿಂಧು ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಹತೆಗಳು: 2024-25 ರಲ್ಲಿ ಪದವಿ/ಡಿಪ್ಲೋಮಾ ಹಾಗೂ ಸ್ನಾತಕೋತರ ಉತ್ತಿರ್ಣರಾದ ವಿಧ್ಯಾರ್ಥಿಗಳು, ಪದವಿ/ಡಿಪ್ಲೋಮಾ ನಂತರ ಕನಿಷ್ಠ 6 ತಿಂಗಳ ಅವಧಿಯೊಳಗೆ ಸರ್ಕಾರಿ/ಖಾಸಗಿ ಉದ್ಯೋಗ ಹೊಂದಿಲ್ಲದವರು, ಸ್ವಯಂ ಉದ್ಯೋಗ ಹೊಂದಿಲ್ಲದವರು, ಉನ್ನತ ವಿಧ್ಯಾಭ್ಯಾಸ ಮುಂದುವರೆಸದೆ ಇರುವವರು ಹಾಗೂ ಕರ್ನಾಟಕದಲ್ಲಿ ವಾಸವಿರುವರು (ಕನಿಷ್ಠ 6 ವರ್ಷಗಳ ವರೆಗೆ ಪದವಿ/ಡಿಪ್ಲೋಮಾ ದವರೆಗೆ ಅಧ್ಯಯನ ಮಾಡಿದವರು) ಈ ಯೋಜನೆಯಡಿ ಅರ್ಜಿ ಸಲ್ಲಿಸಬಹುದಾಗಿದೆ.

Advertisements

ಅಭ್ಯರ್ಥಿಗಳು ಪ್ರತಿ ತಿಂಗಳು ಈ ಪ್ರಯೋಜನ ಪಡೆಯಬೇಕಿದ್ದರೆ, ಪ್ರತಿ ತಿಂಗಳಲ್ಲಿ ತಾನು ನಿರುದ್ಯೋಗಿಯೆಂದು, ವ್ಯಾಸಂಗ ಮುಂದುವರೆಸುತ್ತಿಲ್ಲವೆAದು ಹಾಗೂ ಸ್ವಯಂ ಉದ್ಯೋಗಿಯಲ್ಲ ವೆಂದು ಸ್ವಯಂ ಘೋಷಣೆ ಮಾಡಬೇಕಾಗಿರುತ್ತದೆ. ಪ್ರಸಕ್ತ ಪ್ರತೀ ಗ್ರಾಮದಲ್ಲಿ ಗ್ರಾಮ ಒನ್, ಕರ್ನಾಟಕ ಒನ್ ಹಾಗೂ ಬಾಪೂಜಿ ಸೇವಾ ಕೇಂದ್ರ ಲಭ್ಯವಿದ್ದು, ಅಭ್ಯರ್ಥಿಗಳು ನೋಂದಣಿಯನ್ನು ಮಾಡಿಕೊಳ್ಳಬಹುದು ಹಾಗೂ ಸ್ವಯಂ ಘೋಷಣೆಯನ್ನು ಪ್ರತೀ ತಿಂಗಳು 25ನೇ ತಾರೀಕಿನ ಒಳಗಾಗಿ ಸಲ್ಲಿಸಬೇಕು. ಪ್ರಯೋಜನ ಪಡೆಯುತ್ತಿರುವ ಅಭ್ಯರ್ಥಿಗಳು ಪ್ರತೀ ತಿಂಗಳು ಸ್ವಯಂ ಘೋಷಣೆ ಮಾಡದಿದ್ದಲ್ಲಿ ಅಂತಹ ಅಭ್ಯರ್ಥಿಗಳಿಗೆ ನೇರ ನಗದು ವರ್ಗಾವಣೆ ಮಾಡಲಾಗುವುದಿಲ್ಲ. ಪ್ರತೀ ತಿಂಗಳು ಪ್ರಯೋಜನ ಪಡೆದುಕೊಳ್ಳಲು ಸ್ವಯಂ ಘೋಷಣೆ ಮಾಡಬೇಕಾಗಿರುವ ಕುರಿತು ಎಸ್.ಎಂ.ಎಸ್ ಸಂದೇಶ ಅಭ್ಯರ್ಥಿಗಳಿಗೆ ರವಾನಿಸಲಾಗಿರುತ್ತದೆ. ಅಭ್ಯರ್ಥಿಗಳು ಕಡ್ಡಾಯವಾಗಿ ಆಧಾರ್ ಸೀಡೆಡ್ ಬ್ಯಾಂಕ್ ಖಾತೆಯನ್ನು ಹೊಂದಿರಬೇಕು.

ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ ಅಥವಾ ಯುವನಿಧಿ ಯೋಜನೆಯ ಟೋಲ್ ಪ್ರೀ ಸಹಾಯವಾಣಿ ಸಂಖ್ಯೆ 18005999918 ಅಥವಾ 18005997154 ಹಾಗೂ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ ಉಡುಪಿ ಮೊ.ನಂ: 9945856670, 8105774936 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾ ಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X