ಹುಬ್ಬಳ್ಳಿ | ಈದಿನ ವರದಿಗೆ ಎಚ್ಚೆತ್ತು ಪೌರಕಾರ್ಮಿಕರ ಬೇಡಿಕೆಗಳ ಈಡೇರಿಸಿದ ಮಹಾನಗರ ಪಾಲಿಕೆ

Date:

Advertisements

ಹುಬ್ಬಳ್ಳಿ ಧಾರವಾಡ ಪೌರಕಾರ್ಮಿಕರ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ನಡೆಸಿದ ಆಮರಣ ಉಪವಾಸ ಸತ್ಯಾಗ್ರಹ ಹೋರಾಟಕ್ಕೆ ಇಂದು ಪೂರ್ಣವಿರಾಮ‌ ಇರಿಸಿದ್ದಾರೆ. ಹೋರಾಟ ಯಶಸ್ವಿಯಾದ ಹಿನ್ನೆಲೆಯಲ್ಲಿ ಪೌರಕಾರ್ಮಿಕರು ಪರಸ್ಪರ ಬಣ್ಣ ಹಚ್ಚಿ, ಸಿಹಿ ಹಂಚಿ, ಮೆರವಣಿಗೆಯ ಮೂಲಕ ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದರು.

ಕಳೆದ 28 ದಿನಗಳಿಂದ ಹುಬ್ಬಳ್ಳಿ ಮಹಾನಗರ ಪಾಲಿಕೆ ಎದುರು ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಪೌರಕಾರ್ಮಿಕರು ಆಮರಣ ಉಪವಾಸ ಸತ್ಯಾಗ್ರಹ ಹೋರಾಟ ನಡೆಸಿದ್ದರು. ಈ ಕುರಿತು ಈದಿನ.ಕಾಮ್ ವರದಿಯನ್ನು ಮಾಡಿತ್ತು. ವಿಡಿಯೋ ಸುದ್ದಿ ಪ್ರಕಟಿಸಿತ್ತು. ಪೌರಕಾರ್ಮಿಕರ ನಿರಂತರ ಹೋರಾಟ ಮತ್ತು ಈದಿನ ವರದಿಗೆ ಎಚ್ಚೆತ್ತ ಪಾಲಿಕೆ ಅಡಳಿತವು ಪೌರಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಿ, ಮಹಾಪೌರರು ವತಿಯಿಂದ ನೇರ ನೇಮಕಾತಿ ಆದೇಶ ಪತ್ರಗಳನ್ನು ನೀಡಿದರು.

ಈ ಸಂದರ್ಭದಲ್ಲಿ ಮಹಾಪೌರರಾದ ರಾಮಣ್ಣ ಬಡಿಗೇರ ಮಾತನಾಡಿ, 2-3 ದಿನಗಳಲ್ಲಿ 252 ಪೌರಕಾರ್ಮಿಕರ ನೇಮಕಾತಿ ಅಧಿಸೂಚನೆ ಹೊರಡಿಸಲಾಗುವುದು. ಅಲ್ಲದೇ 799 ಗುತ್ತಿಗೆ ಪೌರಕಾರ್ಮಿಕರಿಗೆ ನೇರ ವೇತನ ಪಾವತಿಸುವಂತೆ 1 ತಿಂಗಳಿನಲ್ಲಿ ಅನುಮೋದನೆ ಪಡೆದು ನೇರ ವೇತನ ಪಾವತಿಸುವಂತೆ ಕ್ರಮ ಜರುಗಿಸಲಾಗುವುದು ಎಂದರು. ಧಾರವಾಡ ಜಿಲ್ಲಾ ಪರಿಶಿಷ್ಟ ಜಾತಿ /ಪರಿಶಿಷ್ಟ ಪಂಗಡಗಳ ಪೌರಕಾರ್ಮಿಕರ ಮತ್ತು ನೌಕರರ ಸಂಘಕ್ಕೆ ಕೊಠಡಿ ನೀಡಿದರು. 5 ತಿಂಗಳಿನ ಸಂಕಷ್ಟ ಬತ್ತೆ ಒಟ್ಟು ರೂ 10,000/- ಪೌರಕಾರ್ಮಿಕರಿಗೆ ಪಾವತಿಸಿದರು. 868 ಮಹಿಳಾ ಪೌರಕಾರ್ಮಿಕರಿಗೆ ರೂ 2500/-ರಂತೆ ಒಟ್ಟು ರೂ 21.70 ಲಕ್ಷ ಮೆಡಿಕಲ್ ಬೋನಸ್ ಹಣ ಪಾವತಿಸುವ ಬಗ್ಗೆ, ಇನ್ನುಳಿದ ಬೇಡಿಕೆಗಳ ಬಗ್ಗೆ ಜಂಟಿ ಸಭೆಯನ್ನು ನಡೆಸಿ ಲಿಖಿತ ನಡಾವಳಿ ಮೂಲಕ ನಿಗದಿತ ಸಮಯದಲ್ಲಿ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದರು.

Advertisements

ಇದೇ ಸಂದರ್ಭದಲ್ಲಿ ಮಹಾಪೌರರಾದ ರಾಮಣ್ಣ ಬಡಿಗೇರ, ಉಪ ಮಹಾಪೌರರಾದ ದುರಗಮ್ಮ ಬಿಜವಾಡ, ಸಭಾ ನಾಯಕ ವೀರಣ್ಣ ಸವಡಿ, ರಾಜಣ್ಣ ಕೊರವಿ ಉಪಸ್ಥಿತರಿದ್ದರು. ಪೌರಕಾರ್ಮಿಕರ ಸಂಘದ ಧಾರವಾಡ ಜಿಲ್ಲಾಧ್ಯಕ್ಷ ಡಾ. ವಿಜಯ ಗುಂಟ್ರಾಳ, ಬಸಪ್ಪ ಮಾದರ, ಆನಂದ ಬೆನಸಮಟ್ಟಿ, ಗುರುಶಾಂತಪ್ಪ ಚಂದಾಪುರ, ಮರಿಯಪ್ಪ ರಾಮಯ್ಯನವರ, ಗಾಳೆಪ್ಪ ದ್ವಾಸಲಕೇರಿ, ಗಂಗಮ್ಮ ಸಿದ್ರಾಮಪುರ, ದತಪ್ಪ ಆಪುಸಪೇಟ್, ಲಕ್ಷ್ಮೀ ಬೆಳ್ಳಾರಿ, ಅನಿತಾ ಈನಗೊಂಡ, ಲಕ್ಷ್ಮೀ ವಾಲಿ, ಮಂಜುಳಾ ವಜ್ಜಣ್ಣವರ, ಶಾಂತವ್ವ ಮಾದರ, ಪಾರವ್ವ ಹೊಸಮನಿ, ರೇಣುಕಾ ನಾಗರಾಳ, ಫಕೀರವ್ವ ಕಡಕೋಳ, ರೇಣುಕಾ ಸಾಂಬ್ರಾಣಿ, ಕನಕಪ್ಪ ಕೋಟಬಾಗಿ, ಭಾಗ್ಯಲಕ್ಷ್ಮೀ ಮಾದರ, ಅನ್ನಪೂರ್ಣ ಕೋಟಬಾಗಿ, ಸುನೀಲ್ ದೊಡ್ಡಮನಿ, ನಾಗೇಶ ಚುರಮುರಿ, ಪರಶುರಾಮ ಶಿಕ್ಕಲಗಾರ, ಗಾಳೆಪ್ಪ ರಣತುರ, ಲಕ್ಷ್ಮೀ ತೂರಿಹಾಲ್, ಕಸ್ತೂರಿ ತಮದಡ್ಡಿ, ಹುಲಿಗೆಮ್ಮ ಚಿಕ್ಕತುoಬಳ, ಯಲಪ್ಪ ಪಾಳೇದ, ಸಣ್ಣ ವೆಂಕಟೇಶ ಪಾಲವಾಯಿ ಮುಂತಾದ ಪೌರಕಾರ್ಮಿಕರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X