ಅಸ್ಸಾಂ | ಕಲ್ಲಿದ್ದಲು ಗಣಿಯಲ್ಲಿ ಸಿಲುಕಿದ 9 ಕಾರ್ಮಿಕರ ಪೈಕಿ ಒಬ್ಬರ ಮೃತದೇಹ ಪತ್ತೆ

Date:

Advertisements

ಅಸ್ಸಾಂನ ದಿಮಾ ಹಸಾವೊ ಜಿಲ್ಲೆಯಲ್ಲಿರುವ ಕಲ್ಲಿದ್ದಲು ಗಣಿಯಲ್ಲಿ ಪ್ರವಾಹ ಉಂಟಾಗಿ ಗಣಿಯಲ್ಲಿ ಸಿಲುಕಿರುವ ಒಟ್ಟು ಒಂಬತ್ತು ಕಾರ್ಮಿಕರ ಪೈಕಿ ಓರ್ವ ಕಾರ್ಮಿಕರ ಮೃತದೇಹ ಪತ್ತೆಯಾಗಿದೆ. ಇನ್ನು ಈಗಾಗಲೇ ಮೂವರ ಮೃತದೇಹವನ್ನು ರಕ್ಷಣಾ ತಂಡ ನೋಡಿರುವುದಾಗಿ, ಆದರೆ ಮೇಲೆತ್ತಲು ಸಾಧ್ಯವಾಗದಿರುವುದಾಗಿ ವರದಿಯಾಗಿದೆ.

ಈ ದುರ್ಘಟನೆ ನಡೆದು ಮೂರು ದಿನವಾದ ಬಳಿಕ ಬುಧವಾರ ಮೃತದೇಹವನ್ನು ಮೇಲಕ್ಕೆತ್ತಲಾಗಿದೆ. ನೌಕಾಪಡೆ, ಸೇನೆ, ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ಸಿಬ್ಬಂದಿಯ ತಂಡ ಗಣಿಗಾರರನ್ನು ರಕ್ಷಿಸುವ ಪ್ರಯತ್ನವನ್ನು ಮಾಡುತ್ತಿದ್ದಾರೆ. ಒಟ್ಟು ಎಂಟು ಮಂದಿ ಬದುಕುಳಿಯುವ ಸಾಧ್ಯತೆ ಕಡಿಮೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಅಸ್ಸಾಂ ಗಣಿ ಪ್ರವಾಹದಲ್ಲಿ ಸಿಲುಕಿದ 9 ಕಾರ್ಮಿಕರು; ಮೂವರ ಸಾವು ಶಂಕೆ

Advertisements

ಮುಂಜಾನೆಯೇ ಈಜು ತಜ್ಞರು ಮೃತದೇಹವನ್ನು ಗಣಿಯಲ್ಲಿ ಪತ್ತೆ ಹಚ್ಚಿದ್ದು, ಅದರ ಗುರುತು ಇನ್ನೂ ಪತ್ತೆಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅದಾದ ಬಳಿಕ 21 ಪ್ಯಾರಾ ಡೈವರ್‌ಗಳು ತಳದಿಂದ ದೇಹವನ್ನು ಹೊರತೆಗೆದಿದ್ದಾರೆ ಎನ್ನಲಾಗಿದೆ.

ಇನ್ನು ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ, “ದುಃಖಿತ ಕುಟುಂಬಕ್ಕೆ ನಮ್ಮ ಸಂತಾಪ ಮತ್ತು ಪ್ರಾರ್ಥನೆ ಸಲ್ಲಿಸುತ್ತೇವೆ. ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ಸೇನೆ ಮತ್ತು ಎನ್‌ಡಿಆರ್‌ಎಫ್‌ನ ಡೈವರ್‌ಗಳು ಈಗಾಗಲೇ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ” ಎಂದು ಹೇಳಿದ್ದಾರೆ.

ರಕ್ಷಣಾ ತಂಡಗಳು ರಾತ್ರಿಯಿಡೀ ಕಾರ್ಮಿಕರ ರಕ್ಷಣೆ ಕಾರ್ಯಾಚರಣೆ ನಡೆಸಿದ್ದು, ಕಾರ್ಯಾಚರಣೆ ಮುಂದುವರೆದಿದೆ. ಮೂರು ಮೃತದೇಹಗಳನ್ನು ರಕ್ಷಣಾ ತಂಡಗಳು ಗುರುತಿಸಿವೆ. ಆದರೆ ಇನ್ನೂ ಗಣಿಯಿಂದ ಹೊರತರಲು ಸಾಧ್ಯವಾಗಿಲ್ಲ ಎಂದು ಸ್ಥಳೀಯ ಆಡಳಿತ ಹೇಳಿಕೆಯಲ್ಲಿ ತಿಳಿಸಿದೆ.

ಗಣಿಯಲ್ಲಿ ಕಾರ್ಮಿಕರಿಗೆ ಯಾವುದೇ ರಕ್ಷಣೆ ಇಲ್ಲದೆ ಸಾವನ್ನಪ್ಪಿರುವ ಘಟನೆಗಳು ನಡೆಯುತ್ತಲೇ ಇವೆ. ಅದರಲ್ಲೂ ಅದೆಷ್ಟೋ ಅಕ್ರಮ ಗಣಿಯಲ್ಲಿ ಸಿಲುಕಿ ಜೀವ ಕಳೆದುಕೊಂಡಿರುವ ಕಾರ್ಮಿಕರ ಲೆಕ್ಕವೇ ಇಲ್ಲದಂತಾಗಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X