2ನೇ ದಿನವೂ ಮುಂದುವರೆದ ಆಶಾ ಹೋರಾಟ; ಫ್ರೀಡಂ ಪಾರ್ಕ್‌ ರಸ್ತೆಗಳಲ್ಲಿ ಮಲಗಿದ್ದ ಕಾರ್ಯಕರ್ತೆಯರು

Date:

Advertisements

ಗೌರವಧನವನ್ನು 15,000 ರೂ.ಗೆ ಏರಿಕೆ ಮಾಡಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ರಾಜ್ಯದ ಎಲ್ಲ ಭಾಗಗಳ ಆಶಾ ಕಾರ್ಯಕರ್ತೆಯರು ರಾಜ್ಯ ರಾಜಧಾನಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಮಂಗಳವಾರದಿಂದ ಅನಿರ್ಧಿಷ್ಟಾವಧಿ ಧರಣಿ ನಡೆಸುತ್ತಿದ್ದಾರೆ. ಅವರ ಧರಣಿ ಎರಡನೇ ದಿನಕ್ಕೆ ಕಾಲಿಟ್ಟಿದೆ. ಅವರ ಹೋರಾಟಕ್ಕೆ ಸರ್ಕಾರದಿಂದ ಪ್ರತಿಕ್ರಿಯೆ ಬಾರದ ಹಿನ್ನೆಲೆ ಹೋರಾಟ ಮುಂದುವರೆಸಿದ್ದಾರೆ. ಸಾವಿರಾರು ಆಶಾ ಕಾರ್ಯಕರ್ತೆಯರು ಮಂಗಳವಾರ ರಾತ್ರಿ ಫ್ರೀಡಂ ಪಾರ್ಕ್‌ನ ಆವರಣ ಮತ್ತು ರಸ್ತೆಗಳಲ್ಲಿಯೇ ಮಲಗಿದ್ದರು. ಗ್ರಾಮೀಣ ಭಾಗದಲ್ಲಿ ಆರೋಗ್ಯ ಸೇವೆ ಒದಗಿಸುವ ಆಶಾ ಕಾರ್ಯಕರ್ತೆಯರು ರಸ್ತೆಗಳಲ್ಲಿ ಮಲಗಿದ್ದ ಆ ದೃಶ್ಯಗಳು ಮನಕಲಕುವಂತಿದ್ದವು. ಆದರೆ, ಸರ್ಕಾರ ಹೃದಯ ಇನ್ನೂ ಕರಗಿಲ್ಲ.

ಆಶಾ ಕಾರ್ಯಕರ್ತೆಯರ ಹೋರಾಟ ಬುಧವಾರ 2ನೇ ದಿನಕ್ಕೆ ಕಾಲಿಟ್ಟಿದೆ. ತಮ್ಮ ಬೇಡಿಕೆ ಈಡೇರುವವರೆಗೂ ವಾಪಸ್‌ ಹೋಗುವುದಿಲ್ಲ ಎಂದು ಆಶಾ ಕಾರ್ಯಕರ್ತೆಯರು ಪಟ್ಟು ಹಿಡಿದಿದ್ದಾರೆ. ಆಹೋರಾತ್ರಿ ಹೋರಾಟ ನಡೆಸುತ್ತಿದ್ದಾರೆ. ರಾತ್ರಿಯ ಚಳಿ-ಬೆಳಗಿನ ಬಿಸಿಲಿನ ನಡುವೆಯೂ ಆಶಾ ಕಾರ್ಯಕರ್ತೆಯರು ಸ್ವಾತಂತ್ರ್ಯ ಉದ್ಯಾನವನದಲ್ಲೇ ಹೋರಾಟ ನಡೆಸುತ್ತಿದ್ದಾರೆ. ರಾತ್ರಿ ಕೊರೆವ ಚಳಿಯಲ್ಲಿಯೂ ಬಯಲು ಹಾಗೂ ರಸ್ತೆಯಲ್ಲಿ ಆಶಾಗಳು ಮಲಗಿರುವ ದೃಶ್ಯಗಳು ಫ್ರೀಡಂ ಪಾರ್ಕ್‌ನ ಸುತ್ತ ಕಂಡುಬಂದಿವೆ.

ಆಶಾ ಕಾರ್ಯಕರ್ತೆಯರು, ಗೌರವಧನ, ಫ್ರೀಡಂ ಪಾರ್ಕ್‌,
ASHA workers, Honorarium, Freedom Park,

ಬುಧವಾರ, ಧರಣಿ ಸ್ಥಳಕ್ಕೆ ಆರೋಗ್ಯ ಇಲಾಖೆಯ ನಿರ್ದೇಶಕಿ ಡಾ. ತ್ರಿವೇಣಿ ಮತ್ತು ಆಶಾ ಕಾರ್ಯಕ್ರಮದ ಉಪ ನಿರ್ದೇಶಕರಾದ ಡಾ. ಪ್ರಭುಗೌಡ ಪಾಟೀಲ್ ಅವರು ಭೇಟಿ ನೀಡಿದ್ದು, ಆಶಾ ಕಾರ್ಯಕರ್ತೆಯರ ಬೇಡಿಕೆಗಳನ್ನು ಈಡೇರಿಸುವ ಪ್ರಕ್ರಿಯೆ ಚಾಲನೆಯಲ್ಲಿದೆ ಎಂದು ಭರವಸೆ ನೀಡಿದ್ದಾರೆ. ಆದರೆ, ಈಗಾಗಲೇ ಹಲವಾರು ಬಾರಿ ಇಂತಹ ಭರವಸೆಗಳನ್ನು ನೀಡಿ, ಸರ್ಕಾರ ಮೋಸ ಮಾಡಿದೆ. ಈ ಬಾರಿ ಮತ್ತೆ ಮೋಸಹೋಗುವ ಮಾತೇ ಇಲ್ಲ. ಭರವಸೆ ಈಡೇರಿದ ನಂತರವೇ ಧರಣಿಯನ್ನು ನಿಲ್ಲಿಸುತ್ತೇವೆಂದು ಹೋರಾಟಗಾರರು ಹೇಳಿದ್ದಾರೆ.

Advertisements
ಆಶಾ ಕಾರ್ಯಕರ್ತೆಯರು, ಗೌರವಧನ, ಫ್ರೀಡಂ ಪಾರ್ಕ್‌,
ASHA workers, Honorarium, Freedom Park,

ನಾವು ಎದುರಿಸುತ್ತಿರುವ ಸಮಸ್ಯೆಗಳ ವಿರುದ್ಧದ ಹೋರಾಟ ಇವತ್ತು-ನಿನ್ನೆಯದಲ್ಲ. ಕಳೆದ 15 ವರ್ಷದಿಂದ ಆಶಾ ಕಾರ್ಯಕರ್ತೆಯರು ಕೆಲಸ ಮಾಡುತ್ತಿದ್ದಾರೆ. ಆಶಾ ಕಾರ್ಯಕರ್ತೆಯರು ಕೆಲಸ ಆರಂಭಿಸಿದ ಆರು ತಿಂಗಳಲ್ಲಿಯೇ ಸಮಸ್ಯೆಗಳ ಬಗ್ಗೆ ಮೊದಲ ಹೋರಾಟ ನಡೆದಿತ್ತು. ಆಶಾ ಕಾರ್ಯಕರ್ತೆಯರನ್ನು ಸರ್ಕಾರ ನೇಮಿಸಿಕೊಂಡಿತ್ತಾದರೂ, ಅವರ ಬಗ್ಗೆ ಕೇಳುವವರು ಯಾರೂ ಇರಲಿಲ್ಲ. ಕೆಲಸ ಶುರು ಮಾಡಿದಾಗಿನಿಂದ ಈವರೆಗೆ ಹೋರಾಟದ ಮೂಲಕವೇ ಆಶಾ ಕಾರ್ಯಕರ್ತೆಯರು ಪ್ರತಿಯೊಂದು ಸೌಲಭ್ಯಗಳನ್ನು ಪಡೆದಿದ್ದಾರೆ. ಆಶಾ ಕಾರ್ಯಕರ್ತೆಯರಿಗೆ ಒಂದು ‘ಡ್ರೇಸ್ ಕೋಡ್’ ಬೇಕು ಎಂಬ ಹೋರಾಟದ ಮೂಲಕವೇ ಈ ‘ಪಿಂಕ್‌’ ಬಣ್ಣದ ಸೀರೆಯನ್ನು ಪಡೆದಿದ್ದೇವೆ. ಎಲ್ಲದಕ್ಕೂ ಹೋರಾಟ ಮಾಡಬೇಕಾದ ಅನಿವಾರ್ಹತೆ ಇದೆ. ಗೌರವಧನ ಹೆಚ್ಚಿಸುವವರೆಗೂ ನಾವು ನಮ್ಮೂರುಗಳಿಗೆ ಮರುಳುವುದಿಲ್ಲ ಎಂದು ಆಶಾ ಕಾರ್ಯಕರ್ತೆಯರು ಪಟ್ಟುಹಿಡಿದಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ: ಚಲನಚಿತ್ರ ನಿರ್ದೇಶಕಿ ಸುಮನ್ ಕಿತ್ತೂರು

ಪರಿಶಿಷ್ಟ ಜಾತಿ ಒಳಮೀಸಲಾತಿ ವಿಚಾರದಲ್ಲಿ ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ...

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

ಕರ್ನಾಟಕ ಕೃಷಿ ಇಲಾಖೆಯಿಂದ ರೈತರಿಗೆ ಡಿಜಿಟಲ್ ಬಲ: ಬಿಇಎಲ್ ಜೊತೆ ಒಡಂಬಡಿಕೆ

ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ...

Download Eedina App Android / iOS

X