ಭೀಮಾ ಕೋರೆಗಾಂವ್ ಪ್ರಕರಣ | ಹೋರಾಟಗಾರ ರೋನಾ ವಿಲ್ಸನ್, ಸುಧೀರ್ ಧಾವಳೆಗೆ ಜಾಮೀನು

Date:

Advertisements

ಭೀಮಾ ಕೋರೆಗಾಂವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಯುಎಪಿಎ ಅಡಿಯಲ್ಲಿ ಬಂಧನಕ್ಕೊಳಗಾಗಿ ಹಲವು ವರ್ಷಗಳಿಂದ ಜೈಲಿನಲ್ಲಿದ್ದ ಮಾನವ ಹಕ್ಕುಗಳ ಹೋರಾಟಗಾರ ರೋನಾ ವಿಲ್ಸನ್ ಮತ್ತು ಸುಧೀರ್ ಧವಳೆ ಅವರಿಗೆ ಬಾಂಬೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.

ವಿಲ್ಸನ್ ಮತ್ತು ಸುಧೀರ್ ಧವಳೆ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ನಡೆಸಿರುವ ಬಾಂಬೆ ಹೈಕೋರ್ಟ್‌ ನ್ಯಾಯಮೂರ್ತಿ ಎಎಸ್ ಗಡ್ಕರಿ ಮತ್ತು ನ್ಯಾಯಮೂರ್ತಿ ಕಮಲ್ ಖಾತಾ ಅವರಿದ್ದ ಪೀಠವು ದೀರ್ಘಕಾಲದ ಸೆರೆವಾಸ, ಅಂತಿಮ ಚಾರ್ಜ್‌ಶೀಟ್ ಸಲ್ಲಿಸುವಲ್ಲಿ ತನಿಖಾಧಿಕಾರಿಗಳ ವೈಫಲ್ಯ ಹಾಗೂ 300ಕ್ಕೂ ಹೆಚ್ಚು ಸಾಕ್ಷಿಗಳನ್ನು ವಿಚಾರಣೆಯ ಅಂಶಗಳನ್ನು ಪರಿಗಣಿಸಿ ಜಾಮೀನು ನೀಡಿದೆ. ಪ್ರತಿ ಸೋಮವಾರ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಮುಂದೆ ಹಾಜರಾಗಬೇಕು ಎಂದು ಷರತ್ತು ವಿಧಿಸಿದೆ.

2018ರ ಜನವರಿ 1ರಂದು ಭೀಮಾ ಕೋರೆಗಾಂವ್ ಯುದ್ಧದ 200ನೇ ವಾರ್ಷಿಕೋತ್ಸವ ಸಂಭ್ರಮಾಚರಣೆಗಾಗಿ ‘ಎಲ್ಗರ್ ಪರಿಷತ್’ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ವೇಳೆ, ಕೆಲವು ದುಷ್ಕರ್ಮಿಗಳು ಹಿಂಸಾಚಾರ ನಡೆಸಿದ್ದರು. ಆದರೆ, ಕಾರ್ಯಕ್ರಮವನ್ನು ಆಯೋಜಿಸಿದ್ದವರ ವಿರುದ್ಧವೇ ಕಠಿಣ ಎಯುಪಿಎ ಕಾಯ್ದೆಯಲ್ಲಿ ಪ್ರಕರಣ ದಾಖಲಿಸಿ, ಬಂಧಿಸಲಾಗಿತ್ತು. ವಿಲ್ಸನ್ ಮತ್ತು ಧವಳೆ ಸೇರಿದಂತೆ 16 ಕಾರ್ಯಕರ್ತರು ಜೈಲು ಪಾಲಾಗಿದ್ದರು. ಅವರಲ್ಲಿ, ಹಿರಿಯ ಹೋರಾಟಗಾರ ಸ್ಟ್ಯಾನ್‌ ಸ್ವಾಮಿ ಅವರು ಜೈಲಿನಲ್ಲಿ ಸರಿಯಾದ ಮೂಲಸೌಕರ್ಯಗಳು ಹಾಗೂ ಆರೋಗ್ಯ ಸೌಲಭ್ಯ ದೊರೆಯದೆ 2021ರ ಜುಲೈ 5ರಂದು ಜೈಲಿನಲ್ಲಿಯೇ ಸಾವನ್ನಪ್ಪಿದ್ದರು.

Advertisements

ಎಲ್ಗರ್ ಪರಿಷತ್‌ ವೇಳೆ ನಡೆದ ಗಲಭೆ ಪ್ರಕರಣದಲ್ಲಿ ಕಾರ್ಯಕ್ರಮದ ಆಯೋಜಕರಾಗಿದ್ದ ಸುಧಾ ಭಾರದ್ವಾಜ್, ಅರುಣ್ ಫೆರೇರಾ, ಸುರೇಂದ್ರ ಗಡ್ಲಿಂಗ್, ಮಹೇಶ್ ರಾವುತ್, ಶೋಮಾ ಸೇನ್, ರೋನಾ ವಿಲ್ಸನ್, ಸುಧೀರ್ ಧವಳೆ, ವೆರ್ನಾನ್ ಗೊನ್ಸಾಲ್ವಿಸ್, ವರವರ ರಾವ್, ಗೌತಮ್ ನವ್ಲಾಖಾ, ಆನಂದ್ ತೇಲ್ತುಂಬ್ಡೆ, ಹನಿ ಬಾಬು, ಸ್ಟ್ಯಾನ್‌ ಸ್ವಾಮಿ, ಸಾಗರ್ ತಾತ್ಯಾರಾವ್ ಗೋರಖೆ, ರಮೇಶ್ ಮುರಳೀಧರ್ ಗೈಚೋರ್ ಅವರ ವಿರುದ್ಧ ಎಫ್‌ಐಆರ್ ದಾಖಲಿಸಿ, ಬಂಧಿಸಲಾಗಿತ್ತು.

ರೋನಾ ವಿಲ್ಸನ್‌ ಅವರು ರಾಜಕೀಯ ಖೈದಿಗಳ ಬಿಡುಗಡೆ ಸಮಿತಿಯ ಸದಸ್ಯರಾಗಿದ್ದರು. ಅವರನ್ನು ಎಲ್ಗರ್ ಪರಿಷತ್‌ ವೇಳೆ ನಡೆದ ಗಲಭೆ ಪ್ರಕರಣದಲ್ಲಿ 2018ರ ಜೂನ್‌ 6ರಂದು ಬಂಧಿಸಲಾಗಿತ್ತು. ಬಳಿಕ, ಅವರು ಮಾವೋವಾದಿ ಹೋರಾಟಗಾರರೊಂದಿಗೆ ಸಂಬಂಧ ಹೊಂದಿದ್ದಾರೆ. ಪ್ರಧಾನಿ ಮೋದಿಯ ಹತ್ಯೆಗೆ ಸಂಚು ಎಣೆಯುವಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಮತ್ತೊಂದು ಪ್ರಕರಣ ದಾಖಲಿಸಲಾಗಿತ್ತು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

‘ನನ್ನ ಜೀವಕ್ಕೆ ಅಪಾಯವಾದರೆ ಸರ್ಕಾರವೇ ಹೊಣೆ’ ಎಂದು ಹೇಳಿ ಠಾಣೆಗೆ ತೆರಳಿದ ಮಹೇಶ್ ಶೆಟ್ಟಿ ತಿಮರೋಡಿ

ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್‌ ಅವರ ತೇಜೋವಧೆ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

Download Eedina App Android / iOS

X