ಮಂಗಳೂರು | ಜ. 9ರಂದು ಪತ್ರಕರ್ತ ಮೊಹಮ್ಮದ್‌ ಝುಬೇರ್‌ ನಗರಕ್ಕೆ

Date:

Advertisements

ರಾಜ್ಯಕ್ಕೆ ಕರ್ನಾಟಕವೆಂದು ಹೆಸರಾಗಿ 50 ವರ್ಷಗಳು ಕಳೆದಿರುವ ಹಿನ್ನೆಲೆಯಲ್ಲಿ ಈದಿನ.ಕಾಮ್‌ ಡಿಜಿಟಲ್‌ ಮಾಧ್ಯಮ ಸಂಸ್ಥೆಯು ಪ್ರಕಟಿಸಿರುವ ʼನಮ್ಮ ಕರ್ನಾಟಕ–ನಡೆದ 50 ಹೆಜ್ಜೆ… ಮುಂದಿನ ದಿಕ್ಕುʼ ಎಂಬ ವಿಶೇಷ ಸಂಚಿಕೆ ಮತ್ತು ಈದಿನ ನ್ಯೂಸ್‌ ಆ್ಯಪ್‌ ಬಿಡುಗಡೆ ಸಮಾರಂಭಕ್ಕೆ ಪತ್ರಕರ್ತ ಮೊಹಮ್ಮದ್‌ ಝುಬೇರ್‌ ಆಗಮಿಸುತ್ತಿದ್ದಾರೆ.

ಮಂಗಳೂರು ನಗರದ ಬಲ್ಮಠದ ಕರ್ನಾಟಕ ಥಿಯೋಲಾಜಿಕಲ್‌ ಕಾಲೇಜು ಆವರಣದಲ್ಲಿರುವ ಬಿಷಪ್‌ ಜತ್ತನ್ನ ಸಭಾಂಗಣದಲ್ಲಿ ಜನವರಿ 9ರ ಗುರುವಾರ ಸಾಯಂಕಾಲ 4ಕ್ಕೆ ನಡೆಯಲಿರುವ ವಿಶೇಷ ಸಂಚಿಕೆ ಮತ್ತು ಈದಿನ ನ್ಯೂಸ್‌ ಆ್ಯಪ್‌ ಬಿಡುಗಡೆ ಸಮಾರಂಭದಲ್ಲಿ, ಆಲ್ಟ್‌ ನ್ಯೂಸ್‌ನ ಸಹ ಸಂಸ್ಥಾಪಕ, ಪತ್ರಕರ್ತ ಮೊಹಮ್ಮದ್‌ ಝುಬೇರ್‌ ವಿಶೇಷ ಸಂಚಿಕೆ ಬಿಡುಗಡೆ ಮಾಡಲಿದ್ದಾರೆ.

ವಿಶೇಷ ಸಂಚಿಕೆ

ಕರ್ನಾಟಕ ಥಿಯೋಲಾಜಿಕಲ್‌ ಕಾಲೇಜಿನ ಪ್ರಾಶುಪಾಲ ರೆ. ಡಾ. ಎಚ್ ಎಂ ವಾಟ್ಸನ್‌ ಈದಿನ ನ್ಯೂಸ್‌ ಆ್ಯಪ್‌ ಬಿಡುಗಡೆ ಮಾಡಲಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ವಿಜಯಪುರ | ಜ.9ರಂದು ಅಕ್ಕಮಹಾದೇವಿ ಮಹಿಳಾ ವಿವಿಯ 16ನೇ ಘಟಿಕೋತ್ಸವ

ಈದಿನ ಸಂಸ್ಥೆಯ ಸಮುದಾಯ ವಿಭಾಗದ ಮುಖ್ಯಸ್ಥ ಡಾ. ವಾಸು ಹೆಚ್ ವಿಯವರ ಅಧ್ಯಕ್ಷತೆಯಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಘಟನಾ ಸಂಚಾಲಕ ಎಂ ದೇವದಾಸ್, ಸಾಮಾಜಿಕ ಕಾರ್ಯಕರ್ತೆ ವಿದ್ಯಾ ದಿನಕರ್‌, ಅನುಪಮ ಮಹಿಳಾ ಮಾಸಿಕದ ಸಂಪಾದಕಿ ಶಹನಾಝ್‌ ಎಂ ಮತ್ತು ಡೀಡ್ಸ್‌ ಸಂಸ್ಥೆಯ ಸಮಾಜ ಸೇವಕಿ ಜೆಸಿಂತಾ ಪಿರೇರಾ ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X