ಅಮಿತ್ ಶಾ ಹೇಳಿಕೆಗೆ ಖಂಡನೆ; ಜ. 9 ರಂದು ಹುಬ್ಬಳ್ಳಿ-ಧಾರವಾಡ ಬಂದ್

Date:

Advertisements

ಕೇಂದ್ರ ಗೃಹಸಚಿವ ಅಮಿತ್ ಶಾ ಅಂಬೇಡ್ಕರ್ ಕುರಿತು ಅಪಮಾನಕರ ಹೇಳಿಕೆ ನೀಡಿರುವ ಹಿನ್ನೆಲೆ ಕರ್ನಾಟಕದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಈಗಾಗಲೇ ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಂದ್ ಯಶಸ್ವಿ ಆಗಿದೆ. ಅದರಂತೆ ನಾಳೆ ಜನೆವರಿ 8ರಂದು ಹುಬ್ಬಳ್ಳಿ ಮತ್ತು ಧಾರವಾಡದಲ್ಲಿ ದಲಿತ ಸಂಘಟನೆಗಳು ಮತ್ತು ವಿವಿಧ ಸಂಘಟನೆಗಳ ವತಿಯಿಂದ ಬಂದ್ ಗೆ ಕರೆ ನೀಡಿದ್ದಾರೆ.

ಈಗಾಗಲೇ ದಲಿತಪರ ಸಂಘಟಕರು ಹುಬ್ಬಳ್ಳಿಯ ಜನತಾ ಬಜಾರ್ ಮಾರುಕಟ್ಟೆಯಲ್ಲಿ ಬೀದಿ ಬದಿ ವ್ಯಾಪಾರಿಗಳು, ಕಿರಾಣಿ ಅಂಗಡಿಗಳ ಮಾಲೀಕರಿಗೆ ಗುಲಾಬಿ ಹೂ ನೀಡಿ ಬಂದ್‌’ಗೆ ಸಹಕರಿಸುವಂತೆ ವಿನಂತಿಸಿದ್ದಾರೆ. ಬಂದ್’ಗೆ ಬಿಜೆಪಿಯಿಂದ ವಿರೋಧ ವ್ಯಕ್ತವಾಗಿದೆ. ಈ ಕುರಿತು ಹುಬ್ಬಳ್ಳಿ-ಧಾರವಾಡ ಪೊಲೀಸರು ಮುನ್ನೆಚ್ಚರಿಕೆ ಕ್ರಮವಾಗಿ ನಾಳೆಯ ಬಿಗಿ ಬಂದೋಬಸ್ತ’ಗೆ ತಯಾರಿ ನಡೆಸಿದ್ದಾರೆ.

ಅಮಿತ್‌ ಶಾ ವಜಾಕ್ಕೆ ಆಗ್ರಹಿಸಿ ಜನವರಿ 9 ರಂದು ಬೆಳಗ್ಗೆ 6 ರಿಂದ ಸಂಜೆ 6 ರ ವರೆಗೆ ಹುಬ್ಬಳ್ಳಿ – ಧಾರವಾಡ ಬಂದ್‌ಗೆ ಕರೆ ನೀಡಲಾಗಿದೆ. ಬಂದ್‌’ಗೆ 102 ಕ್ಕೂ ಹೆಚ್ಚು ವಿವಿಧ ದಲಿತ ಹಾಗೂ ಪ್ರಗತಿಪರ ಸಂಘಟನೆಗಳು ಬೆಂಬಲ ಸೂಚಿಸಿದ್ದು, ಶಾಂತಿಯುತವಾಗಿ ಬಂದ್‌ ಆಚರಣೆ ನಡೆಯಲಿದೆ. ಸಂವಿಧಾನ ಮತ್ತು ಸಂವಿಧಾನ ಶಿಲ್ಪಿಯನ್ನು ಗೌರವಿಸುವ ಎಲ್ಲ ಸಮುದಾಯಗಳು ಆಯಾ ಬಡಾವಣೆಗಳಿಂದ ಮೆರವಣಿಗೆ ಮೂಲಕ ಹುಬ್ಬಳ್ಳಿಯ ಚನ್ನಮ್ಮ ವೃತ್ತಕ್ಕೆ ಮತ್ತು ಧಾರವಾಡ ಜುಬ್ಲಿ ವೃತ್ತಕ್ಕೆ ಆಗಮಿಸಲಿವೆ ಎಂದು ದಲಿತಪರ ಸಂಘಟನೆ ಮುಖಂಡ ಗುರುನಾಥ ಉಳ್ಳಿಕಾಶಿ ಹೇಳಿದ್ದಾರೆ.

Advertisements

ಈ ವರದಿ ಓದಿದ್ದೀರಾ? ಹುಬ್ಬಳ್ಳಿ | ಪ್ಲಾಸ್ಟಿಕ್ ಚೀಲದಲ್ಲಿ ನವಜಾತ ಶಿಶು ಪತ್ತೆ

ಈ ಕುರಿತು ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ಪ್ರತಿಕ್ರಿಯೆ ನೀಡಿದ್ದು, ಬಂದ್ ಮಾಡುವ ಪ್ರತಿಭಟನಾಕಾರರು ಶಾಂತಿಯುತವಾಗಿ ತಮ್ಮ ಹೋರಾಟ ನಡೆಸಬಹುದು. ಬಲವಂತವಾಗಿ ಬಂದ್ ಮಾಡಿಸಿದರೆ ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ. ಅಹಿತಕರ ಘಟನೆಗಳ‌ ಮುಂಜಾಗೃತಿಗೆ 1500 ಸಿಬ್ಬಂದಿಯನ್ನು ಭದ್ರತೆಗೆ ನಿಯೋಜನೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ರೈತನ ಕೃಷಿ ಚಟುವಟಿಕೆಗೆ ಜೇನು ಸಾಕಾಣಿಕೆ ವರದಾನ : ಪುಷ್ಪಲತಾ

ರೈತರು ತಮ್ಮ ಕೃಷಿ ಚಟುವಟಿಕೆಯಲ್ಲಿ ಪ್ರಮುಖ ಘಟವಾದ ಪರಾಗಸ್ಪರ್ಶ ಕ್ರಿಯೆಗೆ...

ಮಂಗಳೂರು | ಆ. 23: ಅಲ್ ವಫಾ ಚಾರಿಟೇಬಲ್ ಟ್ರಸ್ಟ್‌ನಿಂದ 15 ಜೋಡಿಗಳ ಸರಳ ಸಾಮೂಹಿಕ ವಿವಾಹ

ಮಂಗಳೂರು ಭಾಗದಲ್ಲಿ ಸಮಾಜ ಸೇವೆಯಲ್ಲಿ ಗುರುತಿಸಿಕೊಂಡಿರುವ ಅಲ್ ವಫಾ ಚಾರಿಟೆಬಲ್ ಟ್ರಸ್ಟ್...

ಗುಬ್ಬಿ | ಎಂ.ಎನ್.ಕೋಟೆ ಗ್ರಾಪಂ ಉಪಾಧ್ಯಕ್ಷರಾಗಿ ಸಿದ್ದಗಂಗಮ್ಮ ಅವಿರೋಧ ಆಯ್ಕೆ

ಗುಬ್ಬಿ ತಾಲ್ಲೂಕಿನ ನಿಟ್ಟೂರು ಹೋಬಳಿ ಎಂ.ಎನ್.ಕೋಟೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸ್ಥಾನಕ್ಕೆ...

ಕೋಲಾರ | ಐಎಎಸ್, ಐಪಿಎಸ್ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ; ಅ.ಮು ಲಕ್ಷ್ಮೀನಾರಾಯಣ ಭರವಸೆ

ಕೆಎಎಸ್, ಐಎಎಸ್ ಮತ್ತು ಐಪಿಎಸ್ ಓದಲು ಆಸಕ್ತಿ ಇರುವ ವಿದ್ಯಾರ್ಥಿಗಳಿಗೆ ಉಚಿತ...

Download Eedina App Android / iOS

X