ಯಾದಗಿರಿ | ಜಿಲ್ಲಾಡಳಿತ ಭವನದ ಎದುರು ಕಲುಷಿತ ನೀರು; ಕ್ರಮ ಕೈಗೊಳ್ಳದ ಜಿಲ್ಲಾಧಿಕಾರಿ

Date:

Advertisements

ಯಾದಗಿರಿ ಜಿಲ್ಲಾಡಳಿತ ಭವನದ ಎದುರು ಕಲುಷಿತ ನೀರು ನಿಂತಿದ್ದು, ಚರಂಡಿಗಳು ಗಬ್ಬು ನಾರುತ್ತಿವೆ. ಚರಂಡಿಯಲ್ಲಿ ಬಿದ್ದಿರುವ ಮದ್ಯ ಬಾಟಲಿ, ಕಸಕಡ್ಡಿಯನ್ನು ಕೂಡಲೇ ಸ್ವಚ್ಛಗೊಳಿಸಬೇಕು ಎಂದು ಸಾಮಜಿಕ ಹೋರಾಟಗಾರ ಉಮೇಶ್ ಮುದ್ನಾಳ್ ಆಗ್ರಹಿಸಿದ್ದಾರೆ.

“ಬೇಸಿಗೆ ಸಮಯದಲ್ಲಿ ಶೇ.45ರಷ್ಟು ತಾಪಮಾನ ಇದ್ದರೂ ಕೂಡಾ ಜಿಲ್ಲಾಡಳಿತ ಭವನದ ಎದುರು ಕಲುಷಿತ ನೀರಿನಿಂದ ತುಂಬಿದ್ದು, ಗಬ್ಬೆದ್ದು ನಾರುತ್ತಿದೆ. ಅಲ್ಲಿ ವಿಷ ಜಂತುಗಳು, ಮದ್ಯದ ಬಾಟಲಿಗಳು ರಾರಾಜಿಸುತ್ತಿವೆ. ಜಿಲ್ಲಾಡಳಿತ ಭವನದ ಆವರಣದ ಕಸ ಕಡ್ಡಿಗಳನ್ನು ಪ್ರತಿಭಟನಾ ಸ್ಥಳದಲ್ಲಿ ಹಾಕಿ ಬೆಂಕಿ ಹಚ್ಚಿದ್ದರಿಂದ ಅಲ್ಲಿ ಗಿಡ-ಗಂಟಿಗಳು, ಸರ್ಕಾರದ ನಾಮಫಲಕಗಳಿಗೆ ಹಾನಿಯಾಗಿದ್ದು, ಜಾಲಿ ಗಿಡ-ಗಂಟಿಗಳು ಬೆಳೆದು ನಿಂತಿವೆ” ಎಂದರು.

“ಒಂದು ದಿನದ ಒಳಗಾಗಿ ಪ್ರತಿಭಟನಾ ಸ್ಥಳವನ್ನು ಸ್ವಚ್ಛಗೊಳಿಸಿ, ಪ್ರತಿಭಟನಾಕಾರರಿಗೆ ವಿದ್ಯುತ್‌ ಮತ್ತು ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು” ಎಂದು ಆಗ್ರಹಿಸಿದರು.

Advertisements

“ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪಂಚಾಯತ್‌ ಸಿಇಒ ಕಲುಷಿತ ಪ್ರದೇಶದ ಮುಂದೇಯೇ ಓಡಾಡುತ್ತಾರೆ. ಆದರೂ ಗಮನ ಹರಿಸದೆ ಜಾಣ ಕುರುಡು ಪ್ರದರ್ಶಿಸಿದ್ದು, ನಿರ್ಲಕ್ಷ್ಯ ವಹಿಸಿದ್ದಾರೆ. ಇದೇ ಪ್ರದೇಶದಲ್ಲಿ ಖಾನಾವಳಿ, ಚಹಾದ ಅಂಗಡಿ, ಪಾನಿಪುರಿ ಅಂಗಡಿ ಮತ್ತು ಹಣ್ಣಿನ ಅಂಗಡಿಗಳು ಇವೆ. ಇಂತಹ ಕಲುಷಿತ ವಾತಾವರಣದಲ್ಲಿ ಜನಸಾಮಾನ್ಯರು ಆಹಾರ ಸೇವಿಸುವುದರಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ. ಇವೆಲ್ಲ ಗೊತ್ತಿದ್ದರೂ ಜಿಲ್ಲಾಡಳಿತ ನಿರ್ಲಕ್ಷ್ಯ ವಹಿಸಿದೆ” ಎಂದು ಆರೋಪಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಕಸ ವಿಲೇವಾರಿ ಕ್ರಮ ಕೈಗೊಳ್ಳದ ಪಿಡಿಒ; ಪಂಚಾಯತಿ ಎದರು ಕಸದ ರಾಶಿ

“ಜಿಲ್ಲಾಡಳಿತ ಭವನದ ಮುಂದೆಯೇ ಕಲುಷಿತ ಪರಿಸ್ಥಿತಿ ಇರುವಾಗ ಗ್ರಾಮೀಣ, ನಗರ ಪ್ರದೇಶದಲ್ಲಿ ಹೇಗೆ ಇರಬಹುದು. ಜನರು ಸಾಂಕ್ರಾಮಿಕ ರೋಗದಿಂದ ಬಳಲಿ ಆಸ್ಪತ್ರೆ ಸೇರುವಂಥ ಪರಿಸ್ಥಿತಿ ನಿರ್ಮಾಣವಾಗಿದೆ. ಹಾಗಾಗಿ ಜಿಲ್ಲಾಡಳಿತ ಭವನ ಕೂಡಲೇ ಪ್ರತಿಭಟನಾ ಸ್ಥಳದಲ್ಲಿ ಸ್ವಚ್ಛತೆ, ವಿದ್ಯುತ್, ನೀರಿನ ವ್ಯವಸ್ಥೆ ಮಾಡಿಕೊಡಬೇಕು” ಎಂದು ಸ್ಥಳೀಯ ನಿವಾಸಿ ಪ್ರಭು ಆಗ್ರಹಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X