ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ; ಕೃತ್ಯವನ್ನು ವೀಕ್ಷಿಸುತ್ತಿದ್ದ ಸಂತ್ರಸ್ತೆಯ ವಿಕೃತ ಪತಿ

Date:

Advertisements

ತನ್ನ ಮೇಲೆ ತನ್ನ ಪತಿಯ ಸ್ನೇಹಿತರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಆ ಕೃತ್ಯವನ್ನು ತನ್ನ ಪತಿ ಸೌದಿಯಿಂದ ಆನ್‌ಲೈನ್‌ನಲ್ಲಿ ನೋಡುತ್ತಿದ್ದನು ಎಂದು ಉತ್ತರ ಪ್ರದೇಶದ ಮಹಿಳೆಯೊಬ್ಬರು ಆರೋಪಿಸಿದ್ದಾರೆ.

ಉತ್ತರ ಪ್ರದೇಶದ ಬುಲಂದ್‌ಶಹರ್‌ನ ಮಹಿಳೆಯು ತನ್ನ ಮೇಲಾದ ಲೈಂಗಿಕ ದೌರ್ಜನ್ಯದ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾರೆ. ತನ್ನ ಪತಿಯೇ ಪ್ರಮುಖ ಆರೋಪಿಯೆಂದು ಉಲ್ಲೇಖಿಸಿದ್ದಾರೆ. ತನ್ನ ಪತಿ ಸೌದಿ ಅರೆಬಿಯಾದಲ್ಲಿದ್ದು, ತನ್ನ ಮೇಲೆ ಅತ್ಯಾಚಾರ ಎಸಗಲು ಆತನ ಸ್ನೇಹಿತರಿಗೆ ಆತನೇ ಅವಕಾಶ ಮಾಡಿಕೊಟ್ಟಿದ್ದಾನೆ ಎಂದು ಆರೋಪಿಸಿದ್ದಾರೆ.

“ನನ್ನ ಮೇಲೆ ಪತಿಯ ಸ್ನೇಹಿತರು ಮೂರು ವರ್ಷಗಳಿಂದ ನಿರಂತರ ಅತ್ಯಾಚಾರ ಎಸಗಿದ್ದಾರೆ. ನನ್ನ ಪತಿ ಹಣಕ್ಕಾಗಿ ನನ್ನ ಮೇಲೆ ಅತ್ಯಾಚಾರ ಎಸಗಲು ತನ್ನ ಸ್ನೇಹಿತರಿಗೆ ಅವಕಾಶ ನೀಡುತ್ತಿದ್ಧಾನೆ. ಅಲ್ಲದೆ, ನನ್ನ ಮೇಲಾಗುವ ಅತ್ಯಾಚಾರ ಕೃತ್ಯವನ್ನು ಸೌದಿ ಅರೇಬಿಯಾದಿಂದ ಆನ್‌ಲೈನ್‌ನಲ್ಲಿ ವೀಕ್ಷಿಸಿದ್ದಾನೆ” ಎಂದು ಸಂತ್ರಸ್ತ ಮಹಿಳೆ ದೂರಿನಲ್ಲಿ ವಿವರಿಸಿದ್ದಾರೆ.

Advertisements

ಈ ವರದಿ ಓದಿದ್ದೀರಾ?: ಮಣಿಪುರ ಹೊತ್ತಿ ಉರಿದಿದ್ದಕ್ಕೆ ಪ್ರಧಾನಿ ಮೋದಿ ಏಕೆ ಕ್ಷಮೆ ಕೇಳಬೇಕು?

ಸಂತ್ರಸ್ತೆಯು 2010ರಲ್ಲಿ ಬುಲಂದ್‌ಶಹರ್‌ನ ಗುಲಾತಿ ಮೂಲದ ವ್ಯಕ್ತಿಯನ್ನು ವಿವಾಹವಾಗಿದ್ದರು. ಆರಂಭದಲ್ಲಿ ದಾಂಪತ್ಯ ಜೀವನ ಚೆನ್ನಾಗಿತ್ತು. ದಂಪತಿಗಳು ನಾಲ್ಕು ಮಕ್ಕಳನ್ನು ಮಾಡಿಕೊಂಡಿದ್ದರು. ಮಹಿಳೆಯ ಪತಿ ಸೌದಿ ಅರೇಬಿಯಾದಲ್ಲಿ ಆಟೋಮೊಬೈಲ್ ಮೆಕ್ಯಾನಿಕ್ ಆಗಿ ಕೆಲಸ ಮಾಡುತ್ತಿದ್ದಾರೆ ಎಂದು ‘ಟೈಮ್ಸ್ ಆಫ್ ಇಂಡಿಯಾ’ ವರದಿ ಮಾಡಿದೆ.

ಆದರೆ, ಎರಡು ವರ್ಷಗಳ ಹಿಂದೆ ತನ್ನ ಪತಿ ಇಬ್ಬರು ಸ್ನೇಹಿತರೊಂದಿಗೆ ಮನೆಗೆ ಬಂದಿದ್ದನು. ಅವರಿಗೆ ತನ್ನ ಮೇಲೆ ಅತ್ಯಾಚಾರ ಎಸಗಲು ಆಕೆಯ ಪತಿಯೇ ಅವಕಾಶ ನೀಡಿದ್ದಾನೆ ಎಂದು ಸಂತ್ರಸ್ತೆ ಆರೋಪಿಸಿದ್ದಾರೆ. ತನ್ನ ಪತಿಯ ಆ ಇಬ್ಬರೂ ಪುರುಷರು ತಾನು ವಾಸವಾಗಿರುವ ಪ್ರದೇಶದಲ್ಲಿಯೇ ನೆಲೆಸಿದ್ದು, ಆಗ್ಗಾಗ್ಗೆ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ. ಈ ಕೃತ್ಯದಲ್ಲಿ ತನ್ನ ಪತಿಯ ಕುಮ್ಮಕ್ಕು ಇದೆ ಎಂದು ಸಂತ್ರಸ್ತೆ ವಿವರಿಸಿದ್ದಾರೆ.

ಸಂತ್ರಸ್ತೆಯ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X