ಬಂಡೀಪುರದಲ್ಲಿ ರಾತ್ರಿ ಸಂಚಾರಕ್ಕೆ ಯಾವುದೇ ಹೊಸ ಅನುಮತಿ ನೀಡಿಲ್ಲ: ಸಚಿವ ಈಶ್ವರ ಖಂಡ್ರೆ

Date:

Advertisements

ನಾನು ಸಚಿವನಾದ ಮೇಲೆ ಬಂಡೀಪುರದಲ್ಲಿ ರಾತ್ರಿ ಸಂಚಾರಕ್ಕೆ ಯಾವುದೇ ಹೊಸ ಅನುಮತಿ ನೀಡಿಲ್ಲ. ಹಲವು ವರ್ಷಗಳಿಂದ ಬಂಡೀಪುರ ಮತ್ತು ವಯನಾಡು ನಡುವೆ ರಾತ್ರಿ ಬಸ್ ಸಂಚಾರ ನಡೆಯುತ್ತಿದೆ. ಬಿಜೆಪಿಗರಿಗೆ ಕಾಂಗ್ರೆಸ್ ವಿರುದ್ಧ ಆರೋಪ ಮಾಡಲು ಯಾವುದೇ ವಿಷಯ ಇಲ್ಲ, ಹೀಗಾಗಿ ಸುಳ್ಳು ಹೇಳುತ್ತಿದ್ದಾರೆ ಎಂದು ಸಚಿವ ಈಶ್ವರ ಖಂಡ್ರೆ ಹೇಳಿದರು.

ಗರುಡಾಕ್ಷಿ- ಆನ್‌ಲೈನ್‌ ಎಫ್ಐಆರ್ ಉದ್ಘಾಟನೆ ವೇಳೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿ, “ಬಂಡಿಪುರದಲ್ಲಿ ಈಗಾಗಲೇ ರಾತ್ರಿ 9 ರವರೆಗೆ ಸಂಚಾರಕ್ಕೆ ಅವಕಾಶವಿದೆ. ಇದರ ಜೊತೆಗೆ ಎರಡು ರಾಜ್ಯಗಳ ಎರಡು ಬಸ್ ಸಂಚಾರಕ್ಕೆ ಹಿಂದಿನಿಂದಲೂ ಅವಕಾಶವಿದೆ. ಇದಲ್ಲದೆ ಆಂಬುಲೆನ್ಸ್ ಹಾಗೂ ಆರೋಗ್ಯ ನಿಮಿತ್ತ ತುರ್ತು ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ” ಎಂದರು.

“ಬಿಜೆಪಿಯವರು ಇಲ್ಲ ಸಲ್ಲದ ಆರೋಪ ಮಾಡಿ ಟ್ವೀಟ್ ಮಾಡಿರುವುದು ಅಕ್ಷಮ್ಯ. ಅವರ ಕಾಲದಲ್ಲೂ ರಾತ್ರಿ ಬಸ್ ಸೇವೆ ಇತ್ತು. ನನ್ನನ್ನು ಕರ್ನಾಟಕದ ಅರಣ್ಯ ಸಚಿವರೋ? ಕೇರಳದ ಅರಣ್ಯ ಸಚಿವರೋ? ಎಂದು ಬಿಜೆಪಿಗರು ಪ್ರಶ್ನಿಸಿದ್ದಾರೆ. ಕರ್ನಾಟಕದ ಜನತೆಯೆ ಈ ಪ್ರಶ್ನೆಗೆ ತಕ್ಕ ಉತ್ತರ ನೀಡುತ್ತಾರೆ. ಸುಳ್ಳು ಸುದ್ದಿ ಹಬ್ಬಿಸುವುದೆ ಬಿಜೆಪಿಗರ ಚಾಳಿ” ಎಂದು ವಾಗ್ದಾಳಿ ನಡೆಸಿದರು.

Advertisements

“ವನ್ಯಜೀವಿ ಸಂರಕ್ಷಣೆಗೆ ಕಾಯಿದೆ ತಂದಿದ್ದು ಇಂದಿರಾ ಗಾಂಧಿ ಅವರು. ನಾವು ಅದನ್ನು ಕಟ್ಟುನಿಟ್ಟಾಗಿ ಜಾರಿ ಮಾಡುತ್ತಿದ್ದೇವೆ.
ದೇವರು ಎಂದು ಪೂಜಿಸುವ ಗಣೇಶನ ಪ್ರತಿರೂಪವಾದ ಆನೆಗಳನ್ನು ಗುಂಡಿಟ್ಟು ಕೊಲ್ಲಲು ಅನುಮತಿ ಕೊಡಿ ಎಂದು ಬಿಜೆಪಿ ಶಾಸಕರು ಸದನದಲ್ಲಿ ಹೇಳುತ್ತಾರೆ. ಇವರು ಈಗ ವನ್ಯಜೀವಿ ಸಂರಕ್ಷಣೆ ಬಗ್ಗೆ ಮಾತನಾಡುತ್ತಾರೆ. ಬಿಜೆಪಿಗರ ಇಂತ ಮಾತು ಭೂತದ ಬಾಯಲ್ಲಿ ಭಗವದ್ಗೀತೆಯಂತೆ” ಎಂದು ತಿರುಗೇಟು ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X