ಲೋಕಸಭೆಗೆ ಮಾತ್ರ ಮೈತ್ರಿ ಮಾಡಿದ್ದರೆ ಇಂಡಿಯಾ ಒಕ್ಕೂಟವನ್ನು ರದ್ದುಗೊಳಿಸಿ: ಒಮರ್ ಅಬ್ದುಲ್ಲಾ

Date:

Advertisements

ದೆಹಲಿ ವಿಧಾನಸಭಾ ಚುನಾವಣೆ ಮುನ್ನ ಇಂಡಿಯಾ ಒಕ್ಕೂಟದ ಅನಿಶ್ಚಿತ ಭವಿಷ್ಯದ ಬಗ್ಗೆ ತೀವ್ರ ಟೀಕೆ ವ್ಯಕ್ತಪಡಿಸಿದ ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು, “ಬರೀ ಲೋಕಸಭೆ ಚುನಾವಣೆಯ ಉದ್ದೇಶದಿಂದ ಈ ಮೈತ್ರಿಯನ್ನು ಮಾಡಿದ್ದರೆ ಇಂಡಿಯಾ ಒಕ್ಕೂಟವನ್ನು ರದ್ದುಗೊಳಿಸಿ” ಎಂದು ಹೇಳಿದ್ದಾರೆ.

ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಇಂಡಿಯಾ ಒಕ್ಕೂಟದ ಭಾಗವಾಗಿರುವ ಎಎಪಿ ಮತ್ತು ಕಾಂಗ್ರೆಸ್ ಪರಸ್ಪರ ಎದುರಾಳಿಯಾಗಿ ಸ್ಪರ್ಧಿಸುತ್ತಿದೆ. ಇಂಡಿಯಾ ಒಕ್ಕೂಟದ ಕೆಲವು ಮಿತ್ರಪಕ್ಷಗಳು ಎಎಪಿಗೆ ಬೆಂಬಲ ಸೂಚಿಸಿದೆ. ಈ ನಡುವೆ “ಮೈತ್ರಿಕೂಟ ಇನ್ನೂ ಕೂಡಾ ಉಳಿಯಬೇಕೇ” ಎಂದು ಒಮರ್ ಅಬ್ದುಲ್ಲಾ ಪ್ರಶ್ನಿಸಿದ್ದಾರೆ.

ಇದನ್ನು ಓದಿದ್ದೀರಾ? ಜಮ್ಮು ಕಾಶ್ಮೀರ ಕೇಂದ್ರಾಡಳಿತ ಪ್ರದೇಶ ದಿನಾಚರಣೆಗೆ ಸಿಎಂ ಒಮರ್ ಅಬ್ದುಲ್ಲಾ ಗೈರು

Advertisements

“ಈ ಮೈತ್ರಿಕೂಟವು ಸಂಸತ್ತಿನ ಚುನಾವಣೆಗೆ ಮಾತ್ರವಾಗಿದ್ದರೆ, ಅದನ್ನು ರದ್ದುಗೊಳಿಸಿ, ಪ್ರತ್ಯೇಕವಾಗಿ ಕಾರ್ಯನಿರ್ವಹಿಸುತ್ತೇವೆ. ಆದರೆ ಈ ಮೈತ್ರಿ ವಿಧಾನಸಭೆ ಚುನಾವಣೆಗೂ ಅನ್ವಯವಾಗುವುದಾದರೆ ನಾವು ಒಟ್ಟಿಗೆ ಕುಳಿತು ಸಾಮೂಹಿಕವಾಗಿ ಕೆಲಸ ಮಾಡಬೇಕಾಗುತ್ತದೆ” ಎಂದು ಅಭಿಪ್ರಾಯಿಸಿದ್ದಾರೆ.

ಕಳೆದ ವರ್ಷದ ಲೋಕಸಭೆ ಚುನಾವಣೆಗಾಗಿ ಮಾತ್ರ ಮೈತ್ರಿಕೂಟ ರಚಿಸಲಾಗಿದೆ ಎಂಬರ್ಥದಲ್ಲಿ ಆರ್‌ಜೆಡಿ ನಾಯಕ ಸೇರಿದಂತೆ ಇತರ ಬಣ ಸದಸ್ಯರ ಹೇಳಿಕೆಯಿಂದಾಗಿ ಇಂಡಿಯಾ ಒಕ್ಕೂಟ ಬರ್ಕಾಸ್ತು ಮಾಡುವ ಬಗ್ಗೆ ಊಹಾಪೋಹಗಳು ಹರಡುತ್ತಿದೆ.

ಈ ನಡುವೆ ಒಮರ್ ಮಾಧ್ಯಮಕ್ಕೆ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, “ನನಗೆ ನೆನಪಿರುವಂತೆ, ಇಂಡಿಯಾ ಒಕ್ಕೂಟಕ್ಕೆ ಯಾವುದೇ ಸಮಯ ಮಿತಿಯನ್ನು ನಿಗದಿಪಡಿಸಲಾಗಿಲ್ಲ. ಇಂಡಿಯಾ ಒಕ್ಕೂಟದ ಯಾವುದೇ ಸಭೆಯನ್ನು ಕರೆಯದಿರುವುದೇ ಸಮಸ್ಯೆಯಾಗಿದೆ” ಎಂದು ಅಭಿಪ್ರಾಯಿಸಿದ್ದಾರೆ. ಹಾಗೆಯೇ ನಾಯಕತ್ವ ಮತ್ತು ಒಗ್ಗಟ್ಟಿನ ಕೊರತೆಗೆ ವಿಷಾದ ವ್ಯಕ್ತಪಡಿಸಿದ್ದಾರೆ.

ದೆಹಲಿ ವಿಧಾನಸಭಾ ಚುನಾವಣೆಯ ನಂತರ ಮೈತ್ರಿಕೂಟದ ಸಭೆಯನ್ನು ಕರೆಯಬಹುದು ಎಂದು ಹೇಳಿರುವ ಒಮರ್, ಸಭೆಗೆ ವಿಳಂಬ ಮಾಡುತ್ತಿರುವುದನ್ನು ಟೀಕಿಸಿದರು. ಇದು ನಮ್ಮ ಮೈತ್ರಿಕೂಟದ ಒಗ್ಗಟ್ಟನ್ನು ದುರ್ಬಲಗೊಳಿಸುತ್ತದೆ ಎಂದು ಹೇಳಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

Download Eedina App Android / iOS

X