ಗ್ಯಾರಂಟಿ ಯೋಜನೆ ಜಾರಿ ಮಾಡಿದ ಸರ್ಕಾರ; ಜುಲೈ 1ರಿಂದ ಉಚಿತ ವಿದ್ಯುತ್

Date:

Advertisements
  • ಸಂಪುಟ ಸಭೆ ಬಳಿಕ ಗ್ಯಾರಂಟಿ ಜಾರಿ ಮಾಡಿದ ಕೈ ಸರ್ಕಾರ
  • ಕೊಟ್ಟ ಮಾತಿನಂತೆ ನಡೆದುಕೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯ

ಗ್ಯಾರಂಟಿ ಯೋಜನೆ ಜಾರಿ ಮಾಡುವ ಮೂಲಕ ಕಾಂಗ್ರೆಸ್ ಸರ್ಕಾರ, ನುಡಿದಂತೆ ನಡೆಯುವ ಹಾದಿಯಲ್ಲಿ ಮೊದಲ ಹೆಜ್ಜೆ ಇಟ್ಟಿದೆ.

ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿದ್ದ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಲು ಒಪ್ಪಿಗೆ ನೀಡಿರುವ ಸರ್ಕಾರ ಅದನ್ನು ಇಂದಿನಿಂದಲೇ ಅನುಷ್ಠಾನ ಮಾಡುವುದಾಗಿ ತಿಳಿಸಿದೆ.

ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಸದ್ಯದ ಆರ್ಥಿಕ ಲೆಕ್ಕಾಚಾರಗಳನ್ನು ನೋಡಿಕೊಂಡು ಯೋಜನೆಗಳನ್ನು ಜಾರಿ ಮಾಡಲು ಮಂತ್ರಿಮಂಡಲ ಒಪ್ಪಿಗೆ ನೀಡಿದೆ.

Advertisements

ಈ ಹಿನ್ನೆಲೆಯಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ, 200ಯೂನಿಟ್ ಉಚಿತ ವಿದ್ಯುತ್ ಒದಗಿಸುವ ಗೃಹ ಜ್ಯೋತಿ ಯೋಜನೆ ಹಾಗೂ 10ಕೆ ಜಿ ಅಕ್ಕಿ ವಿತರಣೆ ಮಾಡುವ ಅನ್ನಭಾಗ್ಯ, ನಿರುದ್ಯೋಗಿ ಭತ್ಯೆ, ಮನೆಯೊಡತಿಗೆ 2000 ಸಹಾಯಧನ ನೀಡುವ ಯೋಜನೆಗಳಿಗೆ ಅಸ್ತು ಎಂದಿದೆ.

ಹೀಗೆ ಸರ್ಕಾರ ನೀಡಿರುವ ಈ ಯೋಜನೆಗಳು ಕೆಲ ಷರತ್ತುಗಳೊಂದಿಗೆ ಜಾರಿಯಾಗುತ್ತಿವೆ. ಬಿಪಿಎಲ್ ಕುಟುಂಬಗಳಿಗೆ ಯೋಜನೆಯ ಪೂರ್ಣ ಲಾಭ ದೊರಕಲಿದ್ದು, ಉಳಿದಂತೆ ಕೆಲ ನಿಯಮಗಳೊಂದಿಗೆ ಇತರ ಕುಟುಂಬಗಳಿಗೂ ಇದು ದೊರಕಲಿದೆ.

ಒಟ್ಟಾರೆ ಮೂರು ಯೋಜನೆಗಳ ಜಾರಿಯಿಂದ ಸರ್ಕಾರದ ಬೊಕ್ಕಸಕ್ಕೆ ಒಂದು ಲಕ್ಷ ಕೋಟಿಗೂ ಅಧಿಕ ಹೊರೆಯಾಗಲಿದೆ. ಇಷ್ಟಿದ್ದರೂ ಕೊಟ್ಟ ಮಾತಿನಂತೆ ಯೋಜನೆ ಜಾರಿ ಮಾಡಿದ ಸರ್ಕಾರ ಇದಕ್ಕಾಗಿನ ಆರ್ಥಿಕ ಹೊಂದಾಣಿಕೆಗೆ ಹೊಸ ಮಾರ್ಗೋಪಾಯಗಳನ್ನು ಹುಡುಕಿಕೊಂಡಿದೆ.

ಈ ಸುದ್ದಿ ಓದಿದ್ದೀರಾ?:ಗ್ಯಾರಂಟಿ ಯೋಜನೆಗಳಲ್ಲಿ ಬಿಪಿಎಲ್ ಕಾರ್ಡ್‌ದಾರರಿಗೆ ಆದ್ಯತೆ: ಸಚಿವ ಪ್ರಿಯಾಂಕ್ ಖರ್ಗೆ

ಐದೂ ಯೋಜನೆಗಳು ಇದೇ ವರ್ಷ ಜಾರಿಗೆ ಬರಲಿವೆ. ಯೋಜನೆ ಜಾರಿಗೂ ಮುನ್ನ ಮೂರು ದಿನಗಳ ಕಾಲ ಸರ್ಕಾರದ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ, ಯೋಜನೆಗಳ ಜಾರಿ ಸಾಧ್ಯತೆ ಮತ್ತು ಆರ್ಥಿಕ ಹೊಣೆಗಾರಿಕೆ ಬಗ್ಗೆ ಚರ್ಚಿಸಿ, ಮಾಹಿತಿ ಪಡೆದು ಈಗ ಅವುಗಳನ್ನು ಅನುಷ್ಥಾನಕ್ಕೆ ತಂದಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಪಟ್ಟಣ ಪಂಚಾಯತ್ ಚುನಾವಣೆ: ಮೂರರಲ್ಲಿ ಕಾಂಗ್ರೆಸ್‌ಗೆ ಮೇಲುಗೈ; ಎರಡರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಜಯ

ಕರ್ನಾಟಕದಲ್ಲಿ ಐದು ಪ್ರದೇಶಗಳು ತಾಲೂಕು ಸ್ಥಾನಕ್ಕೇರಿದ ಬಳಿಕ ರಚನೆಯಾದ ಪಟ್ಟಣ ಪಂಚಾಯಿತಿಗೆ...

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

Download Eedina App Android / iOS

X