ಬೀದರ್‌ | ರಾಜ್ಯ ಸರ್ಕಾರದಿಂದ ʼಬಸವ ಉತ್ಸವʼ ಆಚರಣೆಗೆ ಆಗ್ರಹ

Date:

Advertisements

ಕರ್ನಾಟಕದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಸಾಮಾಜಿಕ ಮೌಲ್ಯಗಳನ್ನು ವಿಶ್ವದಲ್ಲೆಡೆ ಪಸರಿಸುವ ಉದ್ದೇಶದಿಂದ ರಾಜ್ಯ ಸರ್ಕಾರದಿಂದ ʼಬಸವ ಉತ್ಸವʼ ಆಚರಣೆಗೆ ಮುಂದಾಗಬೇಕು ಬಸವಕಲ್ಯಾಣ ಬಸವತತ್ವ ಪ್ರಸಾರ ಕೇಂದ್ರದ ಪದಾಧಿಕಾರಿಗಳು ಆಗ್ರಹಿಸಿದ್ದಾರೆ.

ಈ ಸಂಬಂಧ ಗುರುವಾರ ಸಿಎಂ ಸಿದ್ದರಾಮಯ್ಯನವರಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ಬಸವಕಲ್ಯಾಣ ಸಹಾಯಕ ಆಯುಕ್ತ ಹಾಗೂ ಬಸವಕಲ್ಯಾಣ ಅಭಿವೃದ್ಧಿ ಮಂಡಳಿ (ಬಿಕೆಡಿಬಿ) ಆಯುಕ್ತರಾದ ಜಗನಾಥ ರೆಡ್ಡಿ ಅವರಿಗೆ ಸಲ್ಲಿಸಿದರು.

ʼರಾಜ್ಯ ಸರಕಾರದಿಂದ ʼನವರಸೋತ್ಸವ, ಆನೆಗುಂದಿ ಉತ್ಸವ, ಹಂಪಿ ಉತ್ಸವ, ಕರಾವಳಿ ಉತ್ಸವ, ಜಲಪಾತೋತ್ಸವ, ಜನಪದೋತ್ಸವ, ಕನ್ನಡ ಸಾಹಿತ್ಯೋತ್ಸವ, ಕನಕೋತ್ಸವ, ಕದಂಬೋತ್ಸವ, ಬನಶಂಕರಿ ಉತ್ಸವ, ಕಿತ್ತೂರು ಉತ್ಸವ, ರಾಷ್ಟ್ರಕೂಟ ಉತ್ಸವ, ಬೀದರ ಉತ್ಸವ ಮುಂತಾದ ಆಚರಿಸಲಾಗುತ್ತಿದೆ. ಆದರೆ ಬಸವಾದಿ ಶರಣರ ಕಾಯಕ ಚಳವಳಿ, ಅನುಭವ ಮಂಟಪ ಪರಿಕಲ್ಪನೆ ಸೇರಿದಂತೆ ಶರಣರ ವೈಶಿಷ್ಟತೆ ಇಡೀ ಜಗತ್ತಿಗೆ ಮಾದರಿಯಾಗಿದ್ದರೂ ರಾಜ್ಯ ಸರ್ಕಾರ ಬಸವ ಉತ್ಸವ ಆಚರಣೆಗೆ ಮುಂದಾಗುತ್ತಿಲ್ಲʼ ಎಂದು ಬೇಸರ ವ್ಯಕ್ತಪಡಿಸಿದರು.

Advertisements

ʼಈ ಹಿಂದೆ ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿಗಳಾಗಿದ್ದ ವೇಳೆ ಪ್ರಥಮ ಬಾರಿಗೆ ಪ್ರಾರಂಭಿಸಲಾಗಿದ್ದ ʼಬಸವ ಉತ್ಸವʼ ಪ್ರತಿವರ್ಷ ಆಚರಿಸಿದರೆ ಸಕಲ ಜೀವಾತ್ಮರಿಗೆ ಲೇಸು ಬಯಸಿದ ಬಸವಾದಿ ಶರಣರ ಜೀವನ-ಹೋರಾಟ ಇಂದಿನ ಯುವ ಪೀಳಿಗೆಗೆ ಆದರ್ಶವಾಗಬಲ್ಲದು. ಹೀಗಾಗಿ ಪ್ರಸಕ್ತ ವರ್ಷದಿಂದ ಸರ್ಕಾರ ಬಸವ ಉತ್ಸವ ಆಚರಣೆಗೆ ಮುಂದಾಗಬೇಕುʼ ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್ ಬಂದ್ ಯಶಸ್ವಿ | ಅಮಿತ್ ಶಾ ರಾಜೀನಾಮೆ ನೀಡದಿದ್ದರೆ ‘ಚಲೋ ಪಾರ್ಲಿಮೆಂಟ್’ ಎಚ್ಚರಿಕೆ

ಈ ಸಂದರ್ಭದಲ್ಲಿ ಪ್ರಮುಖರಾದ ಜಯಪ್ರಕಾಶ ಸದಾನಂದೆ, ಮಹಾದೇವಪ್ಪಾ ಇಜಾರೆ, ಗಣಪತಿ ಕಾಸ್ತೆ, ಶಂಕರ ಕರುಣೆ, ಲಕ್ಷ್ಮೀಬಾಯಿ ಹೂಗಾರ, ವಿಜಯಲಕ್ಷ್ಮಿ ಗಡ್ಡೆ, ಸುಮಿತ್ರಾ ದಾವಣಗಾಂವೆ, ಸಂಗೀತಾ ಅಂಬಣ್ಣಾ, ಜಗನ್ನಾಥ ಕುಸನೂರೆ, ಈಶ್ವರ ಶೀಲವಂತ, ರವೀಂದ್ರ ಕೋಳಕುರ, ಶಿವಕುಮಾರ ಬಿರಾದಾರ, ಸಂಗಮೇಶ ತೊಗರಖೇಡೆ, ಚಂದ್ರಪ್ಪಾ ಗುಂಗೆ, ಬಸವರಾಜ ನರಶೆಟ್ಟಿ, ಚನ್ನಪ್ಪಾ ಇಜಾರೆ, ರಾಜಶೇಖರ ಬಿರಾದರ, ಶಾಮರಾವ ಪಂಡರಗೆರೆ ಮತ್ತಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X