ರಾಯಚೂರು | ಫಾತಿಮಾ ಶೇಕ್ ಜನ್ಮದಿನ; ಶಾಲೆಗೆ ₹25 ಲಕ್ಷದ ನಿವೇಶನ ದಾನ ನೀಡಿದ ಅಕ್ಬರ್ ಪಾಷಾ

Date:

Advertisements

ಭಾರತದ ಮೊದಲ ಮುಸ್ಲಿಂ ಮಹಿಳಾ ಶಿಕ್ಷಕಿ ಫಾತಿಮಾ ಶೇಕ್ ಜನ್ಮದಿನದಂದು, ಗುತ್ತಿಗೆದಾರ ಸೈಯದ್ ಅಕ್ಬರ್ ಪಾಷಾ ಅವರು ರಾಯಚೂರು ಜಿಲ್ಲೆಯ ಮಾನ್ವಿ ನಗರದ ಉರ್ದು ಶಾಲೆಗೆ ₹25 ಲಕ್ಷ ಬೆಲೆಬಾಳುವ ನಿವೇಶನವನ್ನು ದಾನವಾಗಿ ನೀಡಿದ್ದು, ಜನರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಉರ್ದು ಶಾಲೆಯ ಸ್ವಂತ ಕಟ್ಟಡವಿಲ್ಲದೆ ಅನೇಕ ವರ್ಷ ಖಾಸಗಿ ಜಾಗದಲ್ಲಿ ತರಗತಿಗಳನ್ನು ನಡೆಯುತ್ತಿದೆ ಎಂಬ ಕಾರಣಕ್ಕೆ ಪ್ರಥಮ ದರ್ಜೆ ಗುತ್ತಿಗೆದಾರ ಸೈಯದ್ ಅಕ್ಬರ್ ಪಾಶ ಅವರು ತಮ್ಮ ನಿವೇಶನವನ್ನು ದಾನವಾಗಿ ನೀಡಿ ನೂರಾರು ಮಕ್ಕಳ ಭವಿಷ್ಯಕ್ಕೆ ರೂವಾರಿಯಾಗದ್ದಾರೆ.

ಭಾರತದ ಮೊದಲ ಮುಸ್ಲಿಂ ಮಹಿಳಾ ಶಿಕ್ಷಕಿ ಫಾತಿಮಾ ಶೇಖ್ ಜನ್ಮದಿನದಂದೇ ಉರ್ದು ಶಾಲೆ ನಿರ್ಮಾಣಕ್ಕೆ ದಾನವಾಗಿ ನಿವೇಶನ ನೀಡಿ ಅಕ್ಷರದವ್ವನ ಧ್ವನಿಗೆ ಮಕ್ಕಳು ಧ್ವನಿಗೂಡಿಸಲಿ ಎಂದು ಭದ್ರ ಬುನಾದಿ ಹಾಕಿದರು.

Advertisements
1000062443

ಮಾನ್ವಿ ನಗರದ ನಮಾಜಗೇರಿಗುಡ್ಡದ ಸರ್ಕಾರಿ ಕಿರಿಯ ಉರ್ದು ಪ್ರಾಥಮಿಕ ಶಾಲೆಗೆ ಸ್ವಂತ ಕಟ್ಟಡವಿಲ್ಲದೇ ಖಾಸಗಿ ಕೋಣೆಗಳಲ್ಲಿ ಬೋಧನೆ ನಡೆಯುತ್ತಿತ್ತು. ಶಾಲೆಯ ಮುಖ್ಯ ಗುರುಗಳು ಹಾಗೂ ಶಿಕ್ಷಕರು ಸ್ವಂತ ಕಟ್ಟಡಕ್ಕೆ ಅನೇಕ ಹೋರಾಟಗಳನ್ನು ಮಾಡಿ ಅಲೆದಾಡಿದರೂ ಸ್ವಂತ ಕಟ್ಟಡ ಒದಗಿಸಲು ಸಾಧ್ಯವಾಗಿರಲಿಲ್ಲ.

ಆದರೆ ಈಗ ಮಾನ್ವಿ ಪಟ್ಟಣದ ಪ್ರಥಮ ದರ್ಜೆ ಗುತ್ತಿಗೆದಾರ ಸೈಯದ್ ಅಕ್ಬರ್ ಪಾಷಾ ಅವರು ಈ ಶಾಲೆಯ ಕಟ್ಟಡ ನಿರ್ಮಾಣಕ್ಕೆ ತಮ್ಮ ಸ್ವಂತ ಖರ್ಚಿನಲ್ಲಿ ಖರೀದಿಸಿದ ₹25 ಲಕ್ಷ ಬೆಲೆ ಬಾಳುವ ನಿವೇಶನ ನೀಡಿ ಅಕ್ಷರ ಕ್ರಾಂತಿಗೆ ನಾಂದಿ ಹಾಡಿದ್ದಾರೆ. ಜತೆಗೆ ನೂರಾರು ಬಡ ಮಕ್ಕಳ ಶಿಕ್ಷಣಕ್ಕೆ‌ ನೆರವಾಗಿ ಉಜ್ವಲ ಭವಿಷ್ಯ ನಿರ್ಮಾಣಕ್ಕೆ ಕಾರಣರಾಗಿದ್ದಾರೆ.

ಅಕ್ಬರ್ ಪಾಷಾ ಅವರು ಸುಮಾರು ವರ್ಷಗಳಿಂದ ಸಮಾಜ ಸೇವೆಯಲ್ಲಿ ತೊಡಗಿ ನೂರಾರು ಬಡವರಿಗೆ ಆಹಾರ ಕಿಟ್, ಪಿಂಚಣಿ ಹಾಗೂ ಇತರ ಸಮಾಜಕಾರ್ಯ ಚಟುವಟಿಕೆಯಲ್ಲಿ ಭಾಗಿಯಾಗಿ ಹೆಸರುವಾಸಿಯಾದವರು ಎನ್ನಲಾಗಿದೆ.

ಈ ಸಮಾಜ ಸೇವೆಗೆ ಜಿಲ್ಲೆಯ ಸಾಹಿತಿಗಳು, ಶಿಕ್ಷಣ ಪ್ರೇಮಿಗಳು, ಹೋರಾಟಗಾರರು ಹಾಗೂ ಸಮಾಜ ಸೇವಕರು ಪ್ರಶಂಸೆ ವ್ಯಕ್ತಪಡಿಸಿದರು.

1000062441
ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X