ರಾಯಚೂರು | ಅಂಗನವಾಡಿ ಕೇಂದ್ರಗಳಿಗೆ ಮೂಲ ಸೌಕರ್ಯ ಮರೀಚಿಕೆ; ಅಪೌಷ್ಟಿಕ ಮುಕ್ತ ಮಾಡುವಂತೆ ಒತ್ತಾಯ

Date:

Advertisements

ರಾಯಚೂರು ಜಿಲ್ಲೆಯ ನೂರಕ್ಕಿಂತ ಹೆಚ್ಚು ಅಂಗನವಾಡಿ ಕೇಂದ್ರಗಳಲ್ಲಿ ಮೂಲ ಸೌಕರ್ಯಗಳ ಕೊರತೆಯಿದ್ದು, ರಕ್ತಹೀನತೆ ಹಾಗೂ ಅಪೌಷ್ಟಿಕತೆ ಮುಕ್ತಗೊಳಿಸಿ ಸರ್ಕಾರ ಅಂಗನವಾಡಿ ಕೇಂದ್ರಗಳನ್ನು ಬಲಪಡಿಸಬೇಕು‌ ಎಂದು ಒತ್ತಾಯಿಸಿ ರಾಜ್ಯ ಮಹಿಳಾ ಒಕ್ಕೂಟದಿಂದ ಜಿಲ್ಲಾಡಳಿತಕ್ಕೆ ಹಕ್ಕೊತ್ತಾಯ ಸಲ್ಲಿಸಿದರು.

ʼರಾಜ್ಯ ಮಹಿಳಾ ಒಕ್ಕೂಟವು ರಾಯಚೂರು ಜಿಲ್ಲೆಯ ಸುಮಾರು 100ಕ್ಕಿಂತ ಹೆಚ್ಚು ಅಂಗನವಾಡಿ ಕೇಂದ್ರಗಳಲ್ಲಿ ಸಮೀಕ್ಷೆ ಮಾಡಿದೆ. ಈ ಜಿಲ್ಲೆಯನ್ನು ರಕ್ತಹೀನತೆ ಮತ್ತು ಅಪೌಷ್ಟಿಕತೆಯಿಂದ ಮುಕ್ತಗೊಳಿಸಲು ನಾವು ಕಳೆದ 3 ವರ್ಷಗಳಿಂದ ಅಭಿಯಾನ ನಡೆಸುತ್ತಿದ್ದೇವೆ. ಆದರೆ ಸರ್ಕಾರ ಮುಕ್ತಗೊಳಿಸಲು ಯಾರೂ ಸಹಕರಿಸುತ್ತಿಲ್ಲʼ ಎಂದು ಆರೋಪಿಸಿದರು.

ʼಅಂಗನವಾಡಿ ಕೇಂದ್ರಗಳಲ್ಲಿ ಸುಸಜ್ಜಿತ ಕಟ್ಟಡಗಳಿಲ್ಲ. ಹೆಚ್ಚು ಅಂಗನವಾಡಿ ಕೇಂದ್ರಗಳು ಖಾಸಗಿ ಕಟ್ಟಡದಲ್ಲಿ ನಡೆಯುತ್ತಿವೆ. ಶೌಚಾಲಯ ಹಾಗೂ ನೀರಿನ ವ್ಯವಸ್ಥೆಯಿಲ್ಲದೆ ಅಂಗನವಾಡಿ ಕೇಂದ್ರಗಳು ಅಶುಚಿತತೆಯಿಂದ ಕೂಡಿವೆ. ಮಕ್ಕಳಿಗೆ ಆಹಾರವಾಗಿ ಪೌಷ್ಟಿಕಪುಡಿ ನೀಡುವುದರಿಂದ ಮಕ್ಕಳು ಮತ್ತು ಪೋಷಕರು ತುಂಬಾ ಅತೃಪ್ತರಾಗಿದ್ದಾರೆ. ಮಕ್ಕಳಿಗೆ ಸರಿಯಾದ ಆಹಾರ ನೀಡಬೇಕುʼ ಎಂದು ಆಗ್ರಹಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ತುಮಕೂರು | ಜ.12ರಂದು ಈ ದಿನ ನ್ಯೂಸ್ ಆ್ಯಪ್, ವಿಶೇಷ ಸಂಚಿಕೆ ಬಿಡುಗಡೆ

ʼಕೆಲವು ಸ್ಥಳಗಳಲ್ಲಿ ಅಂಗನವಾಡಿ ಶಿಕ್ಷಕಿ ಮತ್ತು ಸಹಾಯಕಿಯರ ಸಿಬ್ಬಂದಿ ಕೊರತೆಯಿಂದ ಮುಚ್ಚಿಹೋಗುವ ದಃಸ್ಥಿತಿ ಎದುರಾಗಿದೆ. ಹಾಗಾಗಿ ಸರ್ಕಾರ‌ ಕೂಡಲೇ ಅಂಗನವಾಡಿ ಕೇಂದ್ರಗಳನ್ನು ಬಲಪಡಿಸಬೇಕು ಹಾಗೂ ಮೂಲ ಸೌಕರ್ಯ ಒದಗಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಬೃಹತ್ ಹೋರಾಟ ಮಾಡಲಾಗುವುದುʼ ಎಂದು ಎಚ್ಚರಿಕೆ ನೀಡಿದರು.

ಈ ವೇಳೆ ಗುರುರಾಜ, ವಿದ್ಯಾ ಪಾಟೀಲ್, ಚಂದ್ರಕಲಾ, ಮಲ್ಲಮ್ಮ, ಹನುಮೇಶ್, ಸಾವಿತ್ರಮ್ಮ, ರೇಣುಕಾ, ರಾಧಾ, ಬಸಮ್ಮ ಉಡುಮ ಗಲ್ ಸೇರಿದಂತೆ ಇತರರು ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X