‘ದೇವಮಾನವ’ನಿಂದ ಮರಳಿ ‘ಮಾನವ’ನಾದ ಪ್ರಧಾನಿ ಮೋದಿ

Date:

Advertisements

ಈ ಹಿಂದೆ, ‘ನಾನು ಜೈವಿಕವಾಗಿ ಹುಟ್ಟಿಲ್ಲ. ದೇವರ ಕೃಪೆಯಿಂದ ಜನಿಸಿದ್ದೇನೆ’ ಎಂದು ತಮ್ಮನ್ನು ತಾವು ದೇವಮಾನವನೆಂದು ಕರೆದುಕೊಂಡಿದ್ದ ಪ್ರಧಾನಿ ಮೋದಿ, ಈಗ ತಮ್ಮ ಮಾತು ಬದಲಿಸಿದ್ದಾರೆ. ತಾವೂ ಜೈವಿಕವಾಗಿಯೇ ಹುಟ್ಟಿರುವುದಾಗಿಯೂ, ತಮ್ಮಿಂದಲೂ ತಪ್ಪುಗಳಾಗುತ್ತವೆ ಎಂದೂ ಹೇಳಿದ್ದಾರೆ.

‘ಪೀಪಲ್ ಬೈ ಡಬ್ಲ್ಯೂಟಿಎಫ್‌’ ಚಾನೆಲ್‌ನ ಸಹ ಸಂಸ್ಥಾಪಕ ನಿಖಿಲ್ ಕಾಮತ್ ಅವರ ಜೊತೆ ಪಾಡ್‌ಕ್ಯಾಸ್ಟ್‌ನಲ್ಲಿ ಮೋದಿ ಮಾತನಾಡಿದ್ದಾರೆ.

ಸಂಭಾಷಣೆಯ ಸಮಯದಲ್ಲಿ, ಪ್ರಧಾನಿ ಮೋದಿ ಗುಜರಾತ್ ಮುಖ್ಯಮಂತ್ರಿಯಾಗಿದ್ದಾಗ ಮಾಡಿದ ಹಿಂದಿನ ಭಾಷಣವನ್ನು ನೆನಪಿಸಿಕೊಂಡರು, “ನಾನು ಮುಖ್ಯಮಂತ್ರಿ (ಗುಜರಾತ್) ಆಗಿದ್ದಾಗ, ನನ್ನ ಒಂದು ಭಾಷಣದಲ್ಲಿ ಹೇಳಿದ್ದೆ; ಮೊದಲನೆಯದಾಗಿ, ನನ್ನ ಪ್ರಯತ್ನಗಳಲ್ಲಿ ಯಾವುದೇ ಒಂದು ಸಣ್ಣ ಕಲ್ಲನ್ನು ಬಿಡುವುದಿಲ್ಲ. ಎರಡನೆಯದಾಗಿ, ನಾನು ನನಗಾಗಿ ಏನನ್ನೂ ಮಾಡಿಕೊಳ್ಳುವುದಿಲ್ಲ. ಮೂರನೆಯದಾಗಿ, ನಾನು ಮನುಷ್ಯ, ನಾನು ತಪ್ಪುಗಳನ್ನು ಮಾಡಬಹುದು. ಆದರೆ, ನಾನು ಕೆಟ್ಟ ಉದ್ದೇಶದಿಂದ ತಪ್ಪುಗಳನ್ನು ಮಾಡುವುದಿಲ್ಲ. ಇವುಗಳನ್ನು ನನ್ನ ಜೀವನದ ಮಂತ್ರಗಳನ್ನಾಗಿ ಮಾಡಿಕೊಂಡಿದ್ದೇನೆ” ಎಂದು ಹೇಳಿದ್ದಾರೆ.

Advertisements

“ನಾನು ಅಸಂವೇದನಾಶೀಲವಾಗಿ ಏನೋ ಹೇಳಿದೆ. ತಪ್ಪುಗಳು ಸಂಭವಿಸುತ್ತವೆ. ನಾನು ಮನುಷ್ಯ, ದೇವರಲ್ಲ” ಎಂದು ಮೋದಿ ಹೇಳಿದ್ದಾರೆ.

ಇದೇ ಮೋದಿ ಅವರು ಲೋಕಸಭಾ ಚುನಾವಣೆಯ ಸಮಯದಲ್ಲಿ ನಡೆದಿದ್ದ ಸಂದರ್ಶನವೊಂದರಲ್ಲಿ, ತಾವು ಜೈವಿಕವಲ್ಲ, ದೇವರೇ ನನ್ನನ್ನು ಕಳುಹಿಸಿಕೊಟ್ಟಿದ್ದಾನೆಂದು ಭಾವಿಸಿದ್ದೇನೆ ಎಂದು ಹೇಳಿದ್ದರು. ಈಗ, ತಾವು ಜೈವಿಕವಾಗಿ ಹುಟ್ಟಿರುವುದಾಗಿಯೂ, ದೇವರಲ್ಲವೆಂದೂ, ತಾವವೂ ತಪ್ಪುಗಳನ್ನು ಮಾಡುವುದಾಗಿಯೂ ಹೇಳಿಕೊಂಡಿದ್ದಾರೆ.

ಮೋದಿ ಅವರ ಎರಡು ರೀತಿಯ ಹೇಳಿಕೆಗಳ ಬಗ್ಗೆ ಕಾಂಗ್ರೆಸ್‌ ವ್ಯಂಗ್ಯವಾಡಿದೆ. ಮೋದಿ ಅವರ ಹಳೆಯ ವಿಡಿಯೋ ಮತ್ತು ಈಗಿನ ವಿಡಿಯೋವನ್ನು ‘ಎಕ್ಸ್‌’ನಲ್ಲಿ ಪೋಸ್ಟ್‌ ಮಾಡಿರುವ ಕಾಂಗ್ರೆಸ್‌ ನಾಯಕ ಜೈರಾಮ್‌ ರಮೇಶ್‌, “ಇದು ಕೇವಲ ಎಂಟು ತಿಂಗಳ ಹಿಂದೆ ತಮ್ಮ ಜೈವಿಕವಲ್ಲದ ಸ್ಥಿತಿಯನ್ನು ಘೋಷಿಸಿದ್ದ ವ್ಯಕ್ತಿಯ ವಿಡಿಯೋ. ಈಗ ಅವರು ತಾವು ಜೈವಿಕವಾಗಿ ಜನಿಸಿದ್ದಾಗಿ ಹೇಳುತ್ತಿದ್ದಾರೆ. ಅವರು ‘ಡ್ಯಾಮೆಜ್ ಕಂಟ್ರೋಲ್‌’ಗೆ ಯತ್ನಿಸುತ್ತಿದ್ದಾರೆ” ಎಂದು ಟೀಕಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

Download Eedina App Android / iOS

X