ಆರು ನಕ್ಸಲರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಬುಧವಾರ ಮುಖ್ಯವಾಹಿನಿಗೆ ಬಂದಿದ್ದಾರೆ. ಅವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಇದೀಗ, ಅವರ ಬಳಿ ಇದ್ದ ಶಸ್ತ್ರಾಸ್ತ್ರಗಳನ್ನು ಚಿಕ್ಕಮಗಳೂರು ಅರಣ್ಯ ಪ್ರದೇಶದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಕಿತ್ತಲೆಗುಳಿ ಬಳಿಯ ಅರಣ್ಯದಲ್ಲಿ ಆರು ಬಂದೂಕು ಹಾಗೂ ಮದ್ದು ಗುಂಡುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ವಶಕ್ಕೆ ಪಡೆದ ಶಸ್ತ್ರಾಸ್ತ್ರಗಳಲ್ಲಿ ಒಂದು ಎ.ಕೆ-56 ಮತ್ತು ಮೂರು 303 ರೈಫಲ್ ಬಂದೂಕುಗಳು, ಹನ್ನೆರಡು ಬೋರ್ ಎಸ್ಬಿಬಿಎಲ್ ಮತ್ತು ಒಂದು ಸ್ವದೇಶಿ ಬಂದೂಕುಗಳು ಸೇರಿವೆ.
ಅಲ್ಲದೆ, 7.62 ಎಂಎಂ ಗಾತ್ರದ 11 ಎ.ಕೆ ಮದ್ದುಗುಂಡು, 303 ರೈಫಲ್ನ 133 ಮದ್ದುಗುಂಡು, 12 ಬೋರ್ ಕಾರ್ಟ್ರಿಡ್ಜಸ್, ಸ್ವದೇಶಿ ನಿರ್ಮಿತ ಪಿಸ್ತೂಲ್ನ 8 ಮದ್ದುಗುಂಡುಗಳು ಸೇರಿದಂತೆ ಒಟ್ಟು 176 ಮದ್ದುಗುಂಡು ಮತ್ತು 1 ಎ.ಕೆ-56 ಖಾಲಿ ಮ್ಯಾಗ್ಜಿನ್ಅನ್ನು ವಶಕ್ಕೆ ಪಡೆಯಲಾಗಿದೆ.
ಈ ವರದಿ ಓದಿದ್ದೀರಾ?: ‘ಹಿಂದುತ್ವ ಮೊದಲು – ಜಾತಿ ನಂತರ’: ಏನಿದು ಬಿಜೆಪಿಯ ‘ಹೈಂದವ ಸಂಖಾರವಂ’?
ಶಸ್ತ್ರಾಸ್ತ್ರ ವಶಕ್ಕೆ ಪಡೆರುವ ಬಗ್ಗೆ ಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಮ ಅಮಟೆ ತಿಳಿಸಿದ್ದಾರೆ.