ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ತಮೀಮ್ ಇಕ್ಬಾಲ್

Date:

Advertisements

ಬಾಂಗ್ಲಾದೇಶದ ಮಾಜಿ ನಾಯಕ ತಮೀಮ್ ಇಕ್ಬಾಲ್ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಚಾಂಪಿಯನ್ಸ್ ಟ್ರೋಫಿಗೆ ಮುಂಚಿತವಾಗಿ ತಂಡಕ್ಕೆ ಅಡ್ಡಿಯಾಗಲು ಬಯಸುವುದಿಲ್ಲ ಎಂದು ತಮೀಮ್ ಹೇಳಿದ್ದಾರೆ.

2007ರಲ್ಲಿ ಹರಾರೆಯಲ್ಲಿ ಜಿಂಬಾಬ್ವೆ ವಿರುದ್ಧ ನಡೆದ ಏಕದಿನ ಅಂತಾರಾಷ್ಟ್ರೀಯ (ಒಡಿಐ) ಮೂಲಕ ತಮೀಮ್ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ್ದಾರೆ. ಈವರೆಗೆ 243 ಒಡಿಐಗಳು, 70 ಟೆಸ್ಟ್‌ಗಳು ಮತ್ತು 78 ಟ್ವೆಂಟಿ-20 ಅಂತಾರಾಷ್ಟ್ರೀಯ (ಟಿ20ಐ) ಕ್ರಿಕೆಟ್ ಅನ್ನು ಆಡಿದ್ದಾರೆ.

ಇದನ್ನು ಓದಿದ್ದೀರಾ? ಕ್ರಿಕೆಟ್ | ಟೀಂ ಇಂಡಿಯಾ ನಿದ್ದೆಗೆಡಿಸಿದ ಕ್ಯಾಪ್ಟನ್ ಪ್ಯಾಟ್ ಕಮಿನ್ಸ್!

Advertisements

2023ರಲ್ಲಿ ಭಾರತದಲ್ಲಿ ನಡೆದ 50 ಓವರ್‌ಗಳ ವಿಶ್ವಕಪ್‌ಗೆ ಕೆಲವು ತಿಂಗಳುಗಳ ಮುನ್ನವೇ ತಮೀಮ್ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದರು. ಆದರೆ ಒಂದೇ ದಿನದಲ್ಲಿ ತನ್ನ ನಿರ್ಧಾರವನ್ನು ಹಿಂಪಡೆದಿದ್ದರು. ಬಳಿಕ ಬೆನ್ನು ನೋವು ಕಾಣಸಿಕೊಂಡ ಕಾರಣ ವಿಶ್ವಕಪ್‌ನಲ್ಲಿ ಆಡಿಲ್ಲ.

35 ವರ್ಷದ ತಮೀಮ್ ಈವರೆಗೆ 15,000ಕ್ಕೂ ಹೆಚ್ಚು ರನ್‌ಗಳನ್ನು ಪೇರಿಸಿದ್ದಾರೆ. 25 ಶತಕಗಳನ್ನು ಬಾರಿಸಿದ್ದು, ಬಾಂಗ್ಲಾದೇಶದ ಇತರೆ ದಾಂಡಿಗರಿಗಿಂತ ಅತೀ ಹೆಚ್ಚು ಶತಕ ಬಾರಿಸಿದವರೆಂಬ ಹೆಗ್ಗಳಿಕೆ ಪಡೆದುಕೊಂಡಿದ್ದಾರೆ. ಕೊನೆಯ ಬಾರಿಗೆ 2023ರ ಸೆಪ್ಟೆಂಬರ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧದ 2-0 ಏಕದಿನ ಸರಣಿಯಲ್ಲಿ ಬಾಂಗ್ಲಾದೇಶದ ಪರವಾಗಿ ಆಡಿದ್ದರು. ಇದರಲ್ಲಿ ಬಾಂಗ್ಲಾ ಸೋಲು ಕಂಡಿತ್ತು.

“ನಾನು ಬಹಳ ಸಮಯದಿಂದ ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ದೂರವಿದ್ದೇನೆ. ಆ ಅಂತರ ಉಳಿಯುತ್ತದೆ. ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ನನ್ನ ಅಧ್ಯಾಯ ಮುಗಿದಿದೆ” ಎಂದು ತಮೀಮ್ ತನ್ನ ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.

ಇದನ್ನು ಓದಿದ್ದೀರಾ? ಹೋಗಿ ರಣಜಿ ಕ್ರಿಕೆಟ್‌ ಆಡಿ: ವಿರಾಟ್‌, ರೋಹಿತ್‌ ವಿರುದ್ಧ ರವಿ ಶಾಸ್ತ್ರಿ ಕಿಡಿ

“ನಾನು ನಿವೃತ್ತಿ ಘೋಷಿಸುವ ಬಗ್ಗೆ ಬಹಳ ಸಮಯದಿಂದ ಯೋಚಿಸುತ್ತಿದ್ದೇನೆ. ಈಗ ಚಾಂಪಿಯನ್ಸ್ ಟ್ರೋಫಿಯಂತಹ ದೊಡ್ಡ ಪಂದ್ಯ ಬರುವುದರಿಂದ ನಾನು ಕೇಂದ್ರಬಿಂದುವಾಗಿರಲು ಬಯಸಲ್ಲ. ಇದು ತಂಡವು ತನ್ನ ಗಮನವನ್ನು ಕಳೆದುಕೊಳ್ಳಲು ಕಾರಣವಾಗಬಹುದು” ಎಂದು ಅಭಿಪ್ರಾಯಿಸಿದ್ದಾರೆ.

“ನಾಯಕ ನಜ್ಮುಲ್ ಹುಸೇನ್ ಶಾಂಟೊ ನಾನು ತಂಡಕ್ಕೆ ಮರಳುವಂತೆ ಒತ್ತಾಯಿಸಿದರು. ಆಯ್ಕೆ ಸಮಿತಿಯೊಂದಿಗೆ ಚರ್ಚೆಗಳು ನಡೆದವು. ನನ್ನನ್ನು ಇನ್ನೂ ತಂಡದಲ್ಲಿ ಪರಿಗಣಿಸಿದ್ದಕ್ಕಾಗಿ ನಾನು ಅವರಿಗೆ ಕೃತಜ್ಞನಾಗಿದ್ದೇನೆ. ಆದರೆ ನಾನು ನನ್ನ ಹೃದಯದ ಮಾತನ್ನು ಕೇಳುತ್ತೇನೆ” ಎಂದಿದ್ದಾರೆ.

ಫೆಬ್ರವರಿ 19ರಿಂದ ಮಾರ್ಚ್ 9ರವರೆಗೆ ಚಾಂಪಿಯನ್ಸ್ ಟ್ರೋಫಿ ಪಾಕಿಸ್ತಾನದಲ್ಲಿ ನಡೆಯಲಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

ಕೇರಳ ಭೇಟಿ ರದ್ದುಗೊಳಿಸಿದ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ

ಲಿಯೊನೆಲ್ ಮೆಸ್ಸಿ ನೇತೃತ್ವದ ಫೀಫಾ ವಿಶ್ವಕಪ್ ವಿಜೇತ ಅರ್ಜೆಂಟೀನಾ ತಂಡವನ್ನು ಕೇರಳಕ್ಕೆ...

Download Eedina App Android / iOS

X