ಚಿಕ್ಕಬಳ್ಳಾಪುರ | ಅರ್ಧ ಎಕರೆ ಸೇವಂತಿಗೆ ಕಳೆನಾಶಕ ಸಿಂಪಡಿಸಿದ ದುಷ್ಕರ್ಮಿಗಳು; ರೈತ ಕಂಗಾಲು

Date:

Advertisements

ಸುಮಾರು ಅರ್ಧ ಎಕರೆಯಲ್ಲಿ ಬೆಳೆದಿದ್ದ ಸೇವಂತಿಗೆ ಗಿಡಗಳಿಗೆ ರಾತ್ರೋರಾತ್ರಿ ದುಷ್ಕರ್ಮಿಗಳು ಕಳೆನಾಶಕ ಸಿಂಪಡಿಸಿರುವ ಘಟನೆ ಬೆಳಕಿಗೆ ಬಂದಿದೆ.

ಚಿಕ್ಕಬಳ್ಳಾಪುರ ತಾಲೂಕಿನ ಹೊಸಹುಡ್ಯ ಗ್ರಾಮದಲ್ಲಿ ಘಟನೆ ನಡೆದಿದೆ. ರೈತ ಸತೀಶ್‌ ಬಾಬು ಬಿನ್ ವೆಂಕಟೇಶಪ್ಪ ಎಂಬುವರು ಅರ್ಧ ಎಕರೆಯಲ್ಲಿ ಸುಮಾರು 3 ಸಾವಿರ‌ ಸೇವಂತಿಗೆ ಗಿಡಗಳನ್ನು ಬೆಳೆದಿದ್ದಾರೆ. ಕಳೆದ ಸೋಮವಾರ ಔಷಧಿ ಸಿಂಪಡಣೆ ಮಾಡಿದ್ದರು. ಇದಾದ ಬಳಿಕ, ಎರಡ್ಮೂರು ದಿನಗಳ ಹಿಂದೆ ಯಾರೋ ದುಷ್ಕರ್ಮಿಗಳು ರಾತ್ರೋರಾತ್ರಿ ಹೂವಿನ ಗಿಡಗಳಿಗೆ ಕಳೆನಾಶಕ ಸಿಂಪಡಣೆ ಮಾಡಿದ್ದು, ಉತ್ತಮ ಬೆಳೆಯ ನಿರೀಕ್ಷೆಯಲ್ಲಿದ್ದ ರೈತ ಸತೀಶ್‌ ಬಾಬು ಬೆಳೆ ನಾಶದಿಂದ ಕಂಗಾಲಾಗಿದ್ದಾರೆ.

ಸೇವಂತಿಗೆ123

“ಇನ್ನೇನು 15 ದಿನಗಳಲ್ಲಿ ಸ್ಯಾಂಪಲ್‌ ಬರ್ತಿತ್ತು. ಅಷ್ಟರಲ್ಲಿ ಯಾರೋ ದುಷ್ಕರ್ಮಿಗಳು ಬೆಳೆದು ನಿಂತಿದ್ದ ಸೇಂದಿಲ್‌ ಸೇವಂತಿ ಹೂವಿನ ಗಿಡಗಳಿಗೆ ಕಳೆನಾಶಕ ಸಿಂಪಡಣೆ ಮಾಡಿದ್ದಾರೆ. ಇದರಿಂದ ಸೇವಂತಿಗೆ ಗಿಡಗಳ ಎಲೆಗಳ ಬಣ್ಣ ಬದಲಾಗಿದ್ದು, ಒಣಗುವ ಹಂತಕ್ಕೆ ತಲುಪಿವೆ. ಯಾರೆಂಬುದು ತಿಳಿಯುತ್ತಿಲ್ಲ. ನಮ್ಮಂತ ರೈತರು ಏನು ಮಾಡಬೇಕು?” ಎನ್ನುತ್ತಾರೆ ಜಮೀನಿನ ಮಾಲೀಕ ವೆಂಕಟೇಶಪ್ಪ.

Advertisements

ಕಳೆನಾಶಕ ಸಿಂಪಡಣೆಯಿಂದ ಗಿಡಗಳ ಎಲೆಗಳು ಹಳದಿ ಬಣ್ಣಕ್ಕೆ ತಿರುಗಿದ್ದು, ಕೆಲ ಗಿಡಗಳು ಸಂಪೂರ್ಣ ಒಣಗಿ ಹೋಗಿವೆ. ಇನ್ನೇನು 15 ದಿನಗಳಲ್ಲಿ ಹೂವು ಬಿಡಬೇಕಿದ್ದ ಗಿಡಗಳು ಒಣಗುವ ಹಂತಕ್ಕೆ ತಲುಪಿವೆ. ಇದರಿಂದ ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದ್ದು, ಬೆಳೆ ಬೆಳೆದಿದ್ದ ರೈತ ಸತೀಶ್‌ ಬಾಬು ಕುಟುಂಬ ಆತಂಕದಲ್ಲಿದೆ.

ಸೇವಂತಿಗೆ 11
ಸೇವಂತಿ ಗಿಡದ ಎಲೆಗಳು ಬಾಡಿರುವುದು

ಈ ಕುರಿತು ಈದಿನ ಡಾಟ್‌ ಕಾಮ್‌ ಜತೆ ಮಾತನಾಡಿದ ತೋಟಗಾರಿಕೆ ಇಲಾಖೆ ಅಧಿಕಾರಿಯೊಬ್ಬರು, ʼಹೊಸಹುಡ್ಯದ ಸತೀಶ್‌ ಬಾಬು ಅವರ ಹೊಲದಲ್ಲಿ ಸೇವಂತಿಗೆ ಹೂ ಹಾಕಲಾಗಿದ್ದು, ಕಳೆನಾಶಕ ಸಿಂಪಡಿಸಲಾಗಿದೆ ಎಂದು ಆರೋಪಿಸಿದ್ದಾರೆ. ಈ ಹಿನ್ನೆಲೆ ಇಂದು ಸ್ಥಳಕ್ಕೆ ಭೇಟಿ ನೀಡಿ ಗಿಡಗಳ ಮಾದರಿಯನ್ನು ಇಲಾಖೆಗೆ ಕಳಿಸಲಾಗಿದೆ. ಈ ಕುರಿತು ವಿಜ್ಞಾನಿಗಳ ವರದಿ ಬರಬೇಕಿದೆ. ಆನಂತರವಷ್ಟೇ ಸೂಕ್ತ ಕಾರಣ ತಿಳಿಯಲಿದೆʼ ಎಂದು ಹೇಳಿದರು.

ಸೇವಂತಿಗೆ1
ಕಳೆನಾಶಕ ಸಿಂಪಡಣೆಯಿಂದ ಒಣಗಿರುವ ಸೇವಂತಿ

ಇದನ್ನೂ ಓದಿ : ಚಿಕ್ಕಬಳ್ಳಾಪುರ | ಭಾರತೀಯ ಮೂಲ ಕಲೆಯ ಪೋಷಣೆ ಶ್ಲಾಘನೀಯ:‌ ಹೈಕೋರ್ಟ್ ವಕೀಲ ಪಾವಗಡ ಶ್ರೀರಾಮ್

ಈ ಕುರಿತು ಈದಿನ ಡಾಟ್‌ ಕಾಮ್‌ ಜತೆಗೆ ಮಾತನಾಡಿದ ರೈತ ಸತೀಶ್‌ ಬಾಬು, ʼಕಳೆದ ಬಾರಿ 1 ಎಕರೆಯಲ್ಲಿ ಇದೇ ಬೆಳೆ ಬೆಳೆದಿದ್ದೆ. ಸುಮಾರು 1 ಲಕ್ಷ ಆದಾಯ ಬಂದಿತ್ತು. ಆದರೆ, ಈ ಬಾರಿ ಯಾರೋ ದುಷ್ಕರ್ಮಿಗಳು ಕಳೆನಾಶಕ ಸಿಂಪಡಣೆ ಮಾಡಿದ್ದಾರೆ. ಇದರಿಂದ ಬೆಳೆ ಹಾಳಾಗಿದೆ. ಗಿಡಗಳು ಬಾಡುತ್ತಿವೆ. ಕಳೆನಾಶಕ ಸಿಂಪಡಣೆಯಾದರೆ ಗಿಡಗಳು ಹೂ ಬಿಡುವುದಿಲ್ಲ. ಇದರಿಂದ ನಮಗೆ ನಾವು ನಷ್ಟದ ಭೀತಿಯಲ್ಲಿದ್ದೇವೆ. ರೈತರಿಗೆ ರೈತರೇ ವಿರೋಧಿಗಳಾಗುತ್ತಿದ್ದಾರೆ. ಇಂತಹವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು. ಅಲ್ಲದೇ ಇಲಾಖೆ ನಮ್ಮಂತಹ ರೈತರಿಗೆ ಸೂಕ್ತ ಪರಿಹಾರ ಕೊಡಬೇಕುʼ ಎಂದು ಮನವಿ ಮಾಡಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

Download Eedina App Android / iOS

X