ಲಾಸ್ ಏಂಜಲೀಸ್‌ನಲ್ಲಿ ಹೆಚ್ಚಾದ ಕಾಡ್ಗಿಚ್ಚು: ಮೃತರ ಸಂಖ್ಯೆ 16ಕ್ಕೆ ಏರಿಕೆ, 12 ಸಾವಿರ ಕಟ್ಟಡಗಳು ಬೆಂಕಿಗಾಹುತಿ

Date:

Advertisements

ಭೀಕರ ಕಾಡ್ಗಿಚ್ಚಿಗೆ ಲಾಸ್ ಏಂಜಲೀಸ್ ನಲ್ಲಿ ಈವರೆಗೆ ಕನಿಷ್ಠ 16 ಜನರು ಮೃತಪಟ್ಟಿದ್ದು, 12,000ಕ್ಕೂ ಹೆಚ್ಚು ಮನೆಗಳು ಮತ್ತು ಕಟ್ಟಡಗಳು ಬೆಂಕಿಯ ಕೆನ್ನಾಲಿಗೆಗೆ ಸುಟ್ಟು ಹೋಗಿದೆ.

ಲಾಸ್ ಏಂಜಲೀಸ್ ಕೌಂಟಿಯಲ್ಲಿನ ಪಾಲಿಸೇಡ್ಸ್ ಫೈರ್ ಹೆಚ್ಚುವರಿಯಾಗಿ 1,000 ಎಕರೆಗಳಷ್ಟು ಪ್ರದೇಶಕ್ಕೆ ವಿಸ್ತರಿಸಿದೆ. ಹೆಚ್ಚಿನ ಮನೆಗಳಿಗೆ ಬೆಂಕಿ ಆವರಿಸಿದ್ದು, ಜನರನ್ನು ತುರ್ತು ಸ್ಥಳ ಸ್ಥಳಾಂತರಿಸುವಂತೆ ಮಾಡಿದೆ. 1,00,000ಕ್ಕೂ ಅಧಿಕ ಮಂದಿ ಈಗಾಗಲೇ ಸ್ಥಳಾಂತರಗೊಂಡಿದ್ದಾರೆ. ಕಾಡ್ಗಿಚ್ಚಿನ ವೇಳೆ 13 ಮಂದಿ ಕಾಣೆಯಾಗಿದ್ದು, ಅವರಿಗಾಗಿ ಹುಡುಕಾಟ ನಡೆಸಲಾಗುತ್ತಿದೆ.ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಾಪತ್ತೆಯಾದವರ ಬಗ್ಗೆ ದೂರು ನೀಡಲು ಕೇಂದ್ರವೊಂದನ್ನು ಕೂಡ ಸ್ಥಾಪಿಸಲಾಗಿದೆ.

ಇದನ್ನು ಓದಿದ್ದೀರಾ?: ಹೋಗಿ ರಣಜಿ ಕ್ರಿಕೆಟ್‌ ಆಡಿ: ವಿರಾಟ್‌, ರೋಹಿತ್‌ ವಿರುದ್ಧ ರವಿ ಶಾಸ್ತ್ರಿ ಕಿಡಿ

Advertisements

ಲಾಸ್ ಏಂಜಲೀಸ್ ನಲ್ಲಿ ಕಳೆದು ಎಂಟು ತಿಂಗಳಿಂದ ಒಮ್ಮೆಯೂ ಮಳೆ ಸುರಿದಿಲ್ಲ ಎಂದು ತಿಳಿದು ಬಂದಿಲ್ಲ. ʼಸಾಂತಾ ಅನಾʼ ಎಂದು ಕರೆಯಲಾದ ಶಕ್ತಿಶಾಲಿ ಒಣ ಹವೆಯಿಂದ ಸೃಷ್ಟಿಯಾದ ಬೆಂಕಿಯು ತನ್ನ ಕೆನ್ನಾಲಿಗೆಗಳನ್ನು ಚಾಚಿ ಲಾಸ್ ಏಂಜಲೀಸ್ ನಲ್ಲಿ ಮನೆಗಳು ಹಾಗೂ ಕಟ್ಟಡಗಳ ಆಹುತಿಗೆ ಕಾರಣವಾಗಿದೆ ಎಂದು ಹೇಳಲಾಗಿದೆ.

ಜನವರಿ 7ರಂದು ಬೆಂಕಿ ಪ್ರಾರಂಭವಾದಾಗಿನಿಂದ ಸುಮಾರು 39,000 ಎಕರೆಗಳು ಭೂಮಿ ಸುಟ್ಟು ಹೋಗಿದೆ. ಈ ವಿಸ್ತೀರ್ಣವು ಸ್ಯಾನ್ ಫ್ರಾನ್ಸಿಸ್ಕೋಗಿಂತ ದೊಡ್ಡದಾಗಿದೆ ಎಂದು ಅಂದಾಜಿಸಲಾಗಿದೆ.ಯುಎಸ್ ಇತಿಹಾಸದಲ್ಲಿ ಇದು ಅತ್ಯಂತ ಭಯಾನಕ ಕಾಡ್ಗಿಚ್ಚಾಗಿದ್ದು, ಆರಂಭಿಕ ಅಂದಾಜುಗಳ ಪ್ರಕಾರ ಈಗಾಗಲೇ 150 ಶತಕೋಟಿ ಡಾಲರ್ ಆರ್ಥಿಕ ನಷ್ಟವುಂಟಾಗಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಾರತದ ಮೇಲೆ ಅಮೆರಿಕ ದ್ವೇಷ: ಟ್ರಂಪ್‌ಗೆ ನೊಬೆಲ್ ನೀಡುವಂತೆ ಮೋದಿ ಶಿಫಾರಸು ಮಾಡಿದ್ರೆ ಎಲ್ಲವೂ ಸರಿಹೋಗತ್ತ?

ಪಾಕಿಸ್ತಾನವು 2026ರ ನೊಬೆಲ್ ಶಾಂತಿ ಪ್ರಶಸ್ತಿಗೆ ಟ್ರಂಪ್‌ ಅವರನ್ನು ಶಿಫಾರಸು ಮಾಡುವುದಾಗಿ...

ಗಾಝಾದಲ್ಲಿ ನರಮೇಧ: ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಮತ್ತು ಇಸ್ರೇಲ್ ರಾಯಭಾರಿ ನಡುವೆ ವಾಕ್ಸಮರ

ಗಾಝಾದಲ್ಲಿ 'ಅಲ್‌ಝಝೀರಾ' ಸಂಸ್ಥೆಯ ಪತ್ರಕರ್ತನನ್ನು ಇಸ್ರೇಲ್ ಹತ್ಯೆಗೈದಿದೆ. ಈ ಹತ್ಯೆಯನ್ನು ಕಾಂಗ್ರೆಸ್‌...

ಮೋದಿ-ಝೆಲೆನ್ಸ್ಕಿ ಫೋನ್ ಮಾತುಕತೆ: ರಷ್ಯಾ ತೈಲ ಖರೀದಿ ಕುರಿತು ಭಾರತದ ಮೇಲೆ ಉಕ್ರೇನ್‌ ಒತ್ತಡ

ರಷ್ಯಾ ಜೊತೆ ಸಂಘರ್ಷದಲ್ಲಿರುವ ಉಕ್ರೇನ್‌ನ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರು ಪ್ರಧಾನಿ...

ಗಾಝಾದಲ್ಲಿ ಹತ್ಯೆಯಾದ ಯುವ ಪತ್ರಕರ್ತರೊಬ್ಬರ ಭಿನ್ನ ಉಯಿಲು !

ನಾನು ಸಾಯುವುದಾದರೆ, ನನ್ನ ಸಿದ್ಧಾಂತಗಳ ಮೇಲೆ ದೃಢವಾಗಿರುವೆ. ದೇವರ ಮುಂದೆ ನಾನು...

Download Eedina App Android / iOS

X