ಚಿತ್ರದುರ್ಗ | ಶಿಕ್ಷಕರಿಗೆ ʼಗುರುವಂದನೆʼ, ‘ಉಚಿತ ಆರೋಗ್ಯ ತಪಾಸಣಾ ಶಿಬಿರ’

Date:

Advertisements

ಪ್ರಸ್ತುತ ದಿನಗಳಲ್ಲಿ ಶಿಕ್ಷಕ ವೃತ್ತಿ ಸವಾಲಿನಿಂದ ಕೂಡಿದ್ದು, ಹಲವಾರು ಕಾರ್ಯಭಾರವನ್ನು ಶಿಕ್ಷಕರು ನಿರ್ವಹಿಸಬೇಕಾಗಿದೆ. ಈ ಹಿನ್ನಲೆಯಲ್ಲಿ ಪ್ರಸ್ತುತ ದಿನಮಾನಗಳಲ್ಲಿ ಶಿಕ್ಷಕರು ಹಲವು ಕಾರ್ಯ ನಿರ್ವಹಿಸುತ್ತಿರುವುದರಿಂದ ಪ್ರತಿಯೊಬ್ಬ ಶಿಕ್ಷಕರೂ ಆರೋಗ್ಯದ ಕಡೆ ಗಮನಹರಿಸಬೇಕು. ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವ ಜತೆಗೆ ಮಾನಸಿಕ ಒತ್ತಡ ಕಡಿಮೆ ಮಾಡಿಕೊಂಡು ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಶಿಕ್ಷಣಾಧಿಕಾರಿ ಕೆ ಎಸ್‌ ಸುರೇಶ್‌ ಸಲಹೆ ನೀಡಿದರು.

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಹೊಸಹಳ್ಳಿಯಲ್ಲಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆ, ಪ್ರಾಥಮಿಕ ಶಿಕ್ಷಕರ ಸಂಘ ಮತ್ತು ಸರ್ಕಾರಿ ನೌಕರರ ಸಂಘಗಳ ಸಹಯೋಗದೊಂದಿಗೆ ಆಯೋಜಿಸಿದ್ದ ಶಿಕ್ಷಕರಿಗೆ ‘ಉಚಿತ ಆರೋಗ್ಯ ತಪಾಸಣಾ ಶಿಬಿರ’ ಹಾಗೂ ʼಗುರುವಂದನೆʼ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಶಿಕ್ಷಣ ಸಂಯೋಜಕ ಮಾರುತಿ ಭಂಡಾರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ತಳಕು ಹೋಬಳಿಯ ಎಂಟು ಕ್ಲಸ್ಟರ್‌ಗಳಾದ ಗೌರಸಮುದ್ರ, ದೊಡ್ಡ ಉಳ್ಳಾರ್ತಿ, ಘಟಪರ್ತಿ, ದೇವರೆಡ್ಡಿಹಳ್ಳಿ, ತಳಕು, ಬಂಜಗೆರೆ, ರೇಣುಕಾಪುರ ವಿಭಾಗದ 250ಕ್ಕೂ ಹೆಚ್ಚು ಶಿಕ್ಷಕರು ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಭಾಗವಹಿಸಿ ಆರೋಗ್ಯ ತಪಾಸಣಾ ಪ್ರಯೋಜನ ಪಡೆದುಕೊಂಡರು.

Advertisements

ಈ ಸುದ್ದಿ ಓದಿದ್ದೀರಾ? ಕೊಪ್ಪಳ | ಇಂಗ್ಲಿಷ್‌ ಜ್ಞಾನದಿಂದ ಗ್ರಾಮೀಣ ವಿದ್ಯಾರ್ಥಿಗಳು ವಂಚಿತರಾಗಬಾರದು: ಪ್ರೊ. ಬಿ ಈಶ್ವರಪ್ಪ

ಕಾರ್ಯಕ್ರಮದಲ್ಲಿ ಅಕ್ಷರ ದಾಸೋಹ ಸಂಯೋಜಕ ಜಿ ಟಿ ಮಂಜುನಾಥ ಸ್ವಾಮಿ, ಇಲಾಖೆ ಅಧೀಕ್ಷಕಿಯರಾದ ವಾಣಿ, ಇಂಪನಾ, ರೇಖಾ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷೆ ಸಣ್ಣ ಸೂರವ್ವ, ಶಿಕ್ಷಕರಾದ ಹನುಮಂತರಾಯ, ಶ್ರೀಕಾಂತ್, ಮಹಾಲಿಂಗಪ್ಪ, ತಿಪ್ಪೇಸ್ವಾಮಿ, ಈರಣ್ಣ, ಸಿಆರ್ಪಿ ತಿಪ್ಪೇಸ್ವಾಮಿ, ಮಾರಣ್ಣ, ವಿಷ್ಣುವರ್ಧನ್, ಶಿವಣ್ಣ, ರಾಜಣ್ಣ, ಸುರೇಶ್, ತಿಪ್ಪೇಸ್ವಾಮಿ, ಚಿಟ್ಟಿ ಬಾಬು ಸೇರಿದಂತೆ ಶಿಕ್ಷಕರು, ಹಳೆಯ ವಿದ್ಯಾರ್ಥಿಗಳು, ಸಾರ್ವಜನಿಕರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

ಚಿಕ್ಕಮಗಳೂರು | ಐದಳ್ಳಿ ಗ್ರಾಮದಲ್ಲಿ ನಿಲ್ಲದ ಕಾಡಾನೆಗಳ ದಾಂಧಲೆ: ಬೆಳೆ ನಾಶ; ಕ್ರಮಕ್ಕೆ ರೈತರ ಒತ್ತಾಯ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ನಡುವೆ ಕಾಡಾನೆಗಳ ದಾಂಧಲೆ ಮಿತಿ...

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

Download Eedina App Android / iOS

X