ಬೀದರ್‌ | ರಾಷ್ಟ್ರೀಯ ಯುವ ದಿನ ಆಚರಣೆ

Date:

Advertisements

ಯುವ ಜನರು ಸ್ವಂತ ಬಲದ ಮೇಲೆ ಭವಿಷ್ಯ ಕಟ್ಟಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ ಹೇಳಿದರು.

ಬೀದರ್ ನಗರದ ನೆಹರೂ ಕ್ರೀಡಾಂಗಣದಲ್ಲಿ ಭಾನುವಾರ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಸರ್ಕಾರ ಸೇರಿದಂತೆ ಯಾರ ನೆರವಿಗಾಗಿ ಕಾಯದೇ ಗಟ್ಟಿ ನಿರ್ಧಾರ ಕೈಗೊಂಡು ಪರಿಶ್ರಮದಿಂದ ಬದುಕು ರೂಪಿಸಿಕೊಳ್ಳಬೇಕು. ಅನೇಕ ಯುವಕರು ಮೊಬೈಲ್‌ಗೆ ದಾಸರಾಗಿದ್ದಾರೆ. ಮೊಬೈಲ್ ದುರ್ಬಳಕೆ ಮಾಡಿಕೊಂಡು ಭವಿಷ್ಯ ಹಾಳು ಮಾಡಿಕೊಳ್ಳುತ್ತಿದ್ದಾರೆ. ಮೊಬೈಲ್ ಅತಿಯಾದ ಬಳಕೆ ನಿಲ್ಲಿಸಬೇಕು. ಹಿತ ಮಿತವಾಗಿ ಬಳಸಬೇಕುʼ ಎಂದು ಸಲಹೆ ನೀಡಿದರು.

Advertisements

ದಿಶಾ ಸಮಿತಿಯ ಸದಸ್ಯ ಶಿವಯ್ಯ ಸ್ವಾಮಿ ಮಾತನಾಡಿ, ʼಯುವಕರು ದೇಶದ ಬೆನ್ನೆಲುಬು, ದೇಶವನ್ನು ಸರಿಯಾದ ದಿಕ್ಕಿನಲ್ಲಿ ಮುನ್ನಡೆಸುವ ಶಕ್ತಿ ಯುವಕರಲ್ಲಿದೆ. ಸರ್ಕಾರ ರಾಜಕೀಯ ಹಿನ್ನೆಲೆ ಹೊಂದಿರದ ₹1 ಲಕ್ಷ ಯುವಕರನ್ನು ಗ್ರಾಮ ಪಂಚಾಯಿತಿಯಿಂದ ಸಂಸತ್ ಸದಸ್ಯ ಸ್ಥಾನದವರೆಗೆ ಅಣಿಗೊಳಿಸಲು ಯೋಜನೆ ಹಾಕಿಕೊಂಡಿದೆ. ದೇಶದಲ್ಲಿ ಯುವಕರಿಗೆ ಒಳ್ಳೆಯ ಭವಿಷ್ಯ ಇದೆ. ಸ್ವಾಮಿ ವಿವೇಕಾನಂದರು ಹೇಳಿದಂತೆ ಎಲ್ಲ ಶಕ್ತಿಯೂ ಯುವಕರೊಳಗೆ ಇದ್ದು, ಏನು ಬೇಕಾದರೂ ಸಾಧಿಸಬಹುದುʼ ಎಂದು ಹೇಳಿದರು.

ರಾಷ್ಟ್ರೀಯ ಯುವ ಪ್ರಶಸ್ತಿ ಪುರಸ್ಕೃತರಾದ ಓಂಪ್ರಕಾಶ ರೊಟ್ಟೆ, ಪ್ರಭುಲಿಂಗ ಬಿರಾದಾರ, ರಾಜ್ಯ ಯುವ ಪ್ರಶಸ್ತಿ ಪುರಸ್ಕೃತರಾದ ಶಿವಕುಮಾರ ಸ್ವಾಮಿ, ಮಹೇಶ ಗೋರನಾಳಕರ್, ಯುವ ಮುಖಂಡ ಆದೀಶ್ ರಜನೀಶ್ ವಾಲಿ ಮಾತನಾಡಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ರಾಜಕಾರಣಿಗಳು ಹೇಳಿದಂತೆ ಮಠಾಧೀಶರು ಕೇಳುವ ಸ್ಥಿತಿಯಿದೆ : ಸಾಣೇಹಳ್ಳಿ ಶ್ರೀ

ನೆಹರೂ ಯುವ ಕೇಂದ್ರದ ಜಿಲ್ಲಾ ಯುವ ಅಧಿಕಾರಿ ಮಯೂರಕುಮಾರ ಗೋರಮೆ ಉಪಸ್ಥಿತರಿದ್ದರು. ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ನಾಗರಾಜ ಮಠ ಪ್ರಾಸ್ತಾವಿಕವಾಗಿ ಮಾತನಾಡಿದರು. ಪವನ್ ಸ್ವಾಗತಿಸಿದರು. ಜಯಪ್ರಕಾಶ ನಿರೂಪಿಸಿದರು. ಲಕ್ಷ್ಮಣ ಎಂ. ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X