ಮಂಗಳೂರು | ಬೀದಿಬದಿ ವ್ಯಾಪಾರಿಗಳ ಹೋರಾಟ ಹತ್ತಿಕ್ಕಲು ಶಾಸಕ ಕಾಮತ್ ಕುಮ್ಮಕ್ಕು: ಸಿಐಟಿಯು ಸುನಿಲ್ ಕುಮಾರ್ ಬಜಾಲ್ ಆಕ್ರೋಶ

Date:

Advertisements

ಬೀದಿಬದಿ ವ್ಯಾಪಾರಿಗಳ ನಡುವಿನ ಐಕ್ಯತೆ ಮುರಿದು ಅವರನ್ನು ಅತಂತ್ರಗೊಳಿಸಿ, ಅವರ ಹೋರಾಟವನ್ನು ಹತ್ತಿಕ್ಕಲು ಶಾಸಕ ವೇದವ್ಯಾಸ ಕಾಮತ್‌ ಕುಮ್ಮಕ್ಕು ನೀಡುತ್ತಿದ್ದಾರೆ ಎಂದು ಸೆಂಟರ್‌ ಆಫ್‌ ಇಂಡಿಯನ್‌ ಟ್ರೇಡ್‌ ಯೂನಿಯನ್ಸ್‌(ಸಿಐಟಿಯು)ನ ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ಆಕ್ರೋಶ ಹೊರಹಾಕಿದರು.

ಜಿಲ್ಲೆಯ ಮಂಗಳೂರು ನಗರದ ಬೀದಿ ವ್ಯಾಪಾರ ವಲಯದ ಎದುರು ಸಿಐಟಿಯು ನೇತೃತ್ವದ ದಕ್ಷಿಣ ಕನ್ನಡ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಸಂಘದಿಂದ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದರು.

“ಅಸುರಕ್ಷಿತ, ಅವೈಜ್ಞಾನಿಕ ಹಾಗೂ ಅಸಮರ್ಪಕ ಬೀದಿ ವ್ಯಾಪಾರ ವಲಯದಲ್ಲಿ ವ್ಯಾಪಾರ ಮಾಡಲು ಬಲವಂತ ಮಾಡುತ್ತಿರುವ ಅಧಿಕಾರಿಗಳು ಮತ್ತು ಕೆಲವು ಸ್ಥಾಪಿತ ಹಿತಾಸಕ್ತಿಗಳ ಜತೆಗೆ ಶಾಸಕ ವೇದವ್ಯಾಸ ಕಾಮತ್, ಬೀದಿ ವ್ಯಾಪಾರಿಗಳ ಮುಂಗೈಗೆ ಬೆಲ್ಲ ಹಚ್ಚಿ ಬಡ ಬೀದಿ ವ್ಯಾಪಾರಿಗಳಿಗೆ ಸಂಕಷ್ಟ ತಂದೊಡ್ಡಿದ್ದಾರೆ. ಬೀದಿ ವ್ಯಾಪಾರ ವಲಯ ಊಟಕ್ಕಿಲ್ಲದ ಉಪ್ಪಿನಕಾಯಿಯಂತಾಗಿದೆ” ಎಂದು ಬಜಾಲ್‌ ಆರೋಪಿಸಿದರು.

Advertisements
WhatsApp Image 2025 01 13 at 5.59.10 PM

“ಬೀದಿ ವ್ಯಾಪಾರಿಗಳ ಹಕ್ಕುಗಳನ್ನು ರಕ್ಷಣೆ ಮಾಡಲು ಹೋರಾಟವನ್ನು ಮತ್ತಷ್ಟು ತೀವ್ರಗೋಳಿಸುತ್ತೇವೆ” ಎಂದು ಸುನಿಲ್ ಕುಮಾರ್ ಎಚ್ಚರಿಸಿದರು.

ಈ ಸುದ್ದಿ ಓದಿದ್ದೀರಾ?: ಮಂಗಳೂರು | ತಣ್ಣೀರುಬಾವಿ ಕಡಲ ಕಿನಾರೆಯಲ್ಲಿ ಬೀಚ್ ಉತ್ಸವ ಸಮಾರೋಪ

ಸಂಘದ ಗೌರವಧ್ಯಕ್ಷ ಬಿ ಕೆ ಇಮ್ತಿಯಾಜ್ ಮಾತನಾಡಿ, “ನಗರದ ಹೃದಯ ಭಾಗದಲ್ಲಿರುವ ಬೀದಿ ವ್ಯಾಪಾರ ನಾಲ್ಕು ವಾರ್ಡ್‌ಗಳಲ್ಲಿ ಹರಡಿಕೊಂಡಿದೆ. ಕೇವಲ ಒಂದು ವಾರ್ಡಿನ ಬೀದಿ ವ್ಯಾಪಾರಿಗಳನ್ನು ವಲಯದ ಒಳಗೆ ಕಳುಹಿಸಿ ಅವರನ್ನು ನಷ್ಟಕ್ಕೆ ತಳ್ಳುವ ಬೀದಿ ವ್ಯಾಪಾರ ವಲಯ ನಿರ್ಮಾಣವನ್ನೇ ಬಿಜೆಪಿ ಸಾಧನೆಯೆಂದು ಬಿಂಬಿಸಲು ಹೊರಟಿದೆ. ರಾಜ್ಯದ ವಿವಿಧ ನಗರಗಳಲ್ಲಿ ನಿರ್ಮಾಣಗೊಂಡಿರುವ ವ್ಯಾಪಾರ ವಲಯ ಒಂದೇ ಸೂರಿನಡಿಯಲ್ಲಿ ಹಣ್ಣು, ತರಕಾರಿ ಮತ್ತು ಆಹಾರ ಮತ್ತಿತರ ವ್ಯಾಪಾರಿಗಳಿಗೆ ಪ್ರತ್ಯೇಕ ವಿಭಾಗಗಳನ್ನು ಮಾಡಿ ನಿರ್ಮಿಸಲಾಗಿದೆ. ಮಂಗಳೂರಿನ ವ್ಯಾಪಾರ ವಲಯದಲ್ಲೇ ಆಹಾರ ತಯಾರಿಸಿ ಮಾರಾಟ ಮಾಡಲು ಅವಕಾಶ ನೀಡಿರುವುದರಿಂದ ಗ್ಯಾಸ್ ಅವಘಡ ಸಂಭವಿಸಿದರೆ ಅನಾಹುತಕ್ಕೆ ಯಾರು ಹೊಣೆ” ಎಂದು ಪ್ರಶ್ನಿಸಿದರು.

WhatsApp Image 2025 01 13 at 5.59.09 PM 1

ಪ್ರತಿಭಟನೆ ವೇಳೆ ಸಂಘದ ಮುಖಂಡ ವಿಜಯ ಜೈನ್, ಸಿಕಂದರ್ ಬೇಗ್, ಹಂಝ, ಶಿವಪ್ಪ, ಹಸನ್ ಕುದ್ರೋಳಿ, ರಫೀಕ್, ಮೇಬಲ್ ಡಿ ಸೋಜ, ಫೀಲೋಮಿನ, ಅಬ್ದುಲ್ ಖಾದರ್, ಹನೀಫ್ ಬೆಂಗ್ರೆ, ಗುಡ್ಡಪ್ಪ, ಮುತ್ತುರಾಜ್, ಗಂಗಮ್ಮ ಮುಂತಾದವರು ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X