ಕಠಿಣ ನಿಯಮಗಳ ಮೊರೆ ಹೋದ ಬಿಸಿಸಿಐ; ಕೊಹ್ಲಿ-ಅನುಷ್ಕಾಗೆ ನಿರಾಶೆ: ವರದಿ

Date:

Advertisements

ಇತ್ತೀಚೆಗೆ ನಡೆದ ಟೆಸ್ಟ್ ಸರಣಿಗಳಲ್ಲಿ ಭಾರತದ ಕ್ರಿಕೆಟ್‌ ತಂಡ ಕಳಪೆ ಪ್ರದರ್ಶನ ನೀಡಿದ್ದು, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಕೆಲವು ಕಠಿಣ ನಿಯಮಗಳನ್ನು ಜಾರಿಗೆ ತರಲು ಮುಂದಾಗಿದೆ. ಈವರೆಗೆ, ಆಟಗಾರರು ತಮ್ಮ ಕುಟುಂಬಗಳನ್ನು, ವಿಶೇಷವಾಗಿ ಪತ್ನಿಯರನ್ನು ಟೂರ್ನಿ ನಡೆಯುವ ಪ್ರದೇಶಕ್ಕೆ ಕರೆದೊಯ್ಯಲು, ಟೂರ್ನಿಯ ಸಮಯದಲ್ಲೂ ಕುಟುಂಬದೊಂದಿಗೆ ಇರುವ ಸ್ವಾತಂತ್ರ್ಯವಿತ್ತು. ಈಗ, ಕೆಲವು ತೀವ್ರ ಬದಲಾವಣೆಗಳನ್ನು ತರಲು ಬಿಸಿಸಿಐ ಸಜ್ಜಾಗಿದೆ ಎಂದು ವರದಿಯಾಗಿದೆ.

ವರದಿಯ ಪ್ರಕಾರ, ಆಟಗಾರರು ತಮ್ಮ ಕುಟುಂಬಗಳೊಂದಿಗೆ ದೀರ್ಘಕಾಲ ಇದ್ದರೆ, ಅದರಲ್ಲೂ ಟೂರ್ನಿಯ ಸಮಯದಲ್ಲೂ ವಿದೇಶಿ ಪ್ರವಾಸಗಳಲ್ಲಿಯೂ ಕುಟುಂಬದೊಂದಿಗೆ ಸಮಯ ಕಳೆಯುವುದು ಅವರ ಪ್ರದರ್ಶನದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ ಎಂದು ಬಿಸಿಸಿಐ ಭಾವಿಸಿದೆ. ಆದ್ದರಿಂದ, 2019ರ ಮೊದಲು ಅಸ್ತಿತ್ವದಲ್ಲಿದ್ದ ನಿಯಮವನ್ನು ಮತ್ತೆ ಜಾರಿಗೊಳಿಸಲು ಮುಂದಾಗಿದೆ. ಆ ಮೂಲಕ, ಆಟಗಾರರು ತಮ್ಮ ಕುಟುಂಬದೊಂದಿಗೆ ಕಳೆಯುವ ಸಮಯವನ್ನು ಸೀಮಿತಗೊಳಿಸಲಾಗುತ್ತದೆ.

45 ದಿನಗಳ ವಿದೇಶಿ ಪ್ರವಾಸದ ಸಮಯದಲ್ಲಿ ಕುಟುಂಬಗಳು, ವಿಶೇಷವಾಗಿ ಪತ್ನಿಯರು ಆಟಗಾರರೊಂದಿಗೆ ಎರಡು ವಾರಗಳ ಕಾಲ ಮಾತ್ರ ಇರಲು ಅವಕಾಶ ನೀಡುತ್ತದೆ. ಅಷ್ಟೇ ಅಲ್ಲ, ಪ್ರತಿಯೊಬ್ಬ ಆಟಗಾರನು ತಂಡದ ಇತರ ಸದಸ್ಯರೊಂದಿಗೆ ತಂಡದ ಬಸ್‌ನಲ್ಲಿಯೇ ಪ್ರಯಾಣಿಸಬೇಕಾಗುತ್ತದೆ. ಒಂಟಿ ಪ್ರಯಾಣವನ್ನು ಬಿಸಿಸಿಐ ನಿರ್ಬಂಧಿಸುತ್ತದೆ ಎಂದು ವರದಿಯಾಗಿದೆ.

Advertisements

ವಿಮಾನ ಪ್ರಯಾಣದ ಸಮಯದಲ್ಲಿ, ಆಟಗಾರರ ಲಗೇಜ್ ತೂಕ 150 ಕೆ.ಜಿ ಮೀರುವಂತಿಲ್ಲ. ತೂಕ ಹೆಚ್ಚಿದ್ದರೆ ಆ ವೆಚ್ಚವನ್ನು ಆಟಗಾರರೇ ಭರಿಸಬೇಕಾಗುತ್ತದೆ.

ಬಿಸಿಸಿಐ ಮುಖ್ಯ ಕೋಚ್ ಗೌತಮ್ ಗಂಭೀರ್ ಮತ್ತು ಅವರ ಮ್ಯಾನೇಜರ್ ಗೌರವ್ ಅರೋರಾ ಅವರ ವಿರುದ್ಧವೂ ಬಿಸಿಸಿಐ ಕಠಿಣ ಕ್ರಮ ಕೈಗೊಂಡಿದೆ. ಗಂಭೀರ್ ಅವರ ಮ್ಯಾನೇಜರ್ ತಂಡವು ಹೋಟೆಲ್‌ನಲ್ಲಿ ಉಳಿಯಲು ಅಥವಾ ಕ್ರೀಡಾಂಗಣಗಳಲ್ಲಿನ ವಿಐಪಿ ಬಾಕ್ಸ್‌ನಲ್ಲಿ ಕುಳಿತುಕೊಳ್ಳಲು ಅವಕಾಶ ನೀಡಲಾಗುವುದಿಲ್ಲ. ತಂಡದ ಬಸ್‌ನಲ್ಲಿ ಅಥವಾ ಅದರ ಹಿಂದಿನ ಬಸ್‌ನಲ್ಲಿ ಗಂಭೀರ್ ಅವರೊಂದಿಗೆ ಹೋಗಲು ಮ್ಯಾನೇಜರ್‌ಗೆ ಅವಕಾಶ ಇರುವುದಿಲ್ಲ ಎಂದು ತಿಳಿದುಬಂದಿದೆ.

ಗಮನಾರ್ಹವಾಗಿ, ಇತರ ಆಟಗಾರರಿಗಿಂತ ವಿರಾಟ್ ಕೊಹ್ಲಿ ಅವರು ತಮ್ಮ ಪತ್ನಿ, ನಟಿ ಅನುಷ್ಕಾ ಶರ್ಮಾ ಅವರನ್ನು ಎಲ್ಲ ಟೂರ್ನಿಗಳಲ್ಲಿಯೂ ಜೊತೆಯಲ್ಲಿ ಕರೆದೊಯ್ಯುತ್ತಿದ್ದರು. ಈಗ, ಟೂರ್ನಿ ವೇಳೆಯ ಪ್ರವಾಸದಲ್ಲಿ ಕುಟುಂಬದೊಂದಿಗೆ ಕಳೆಯುವ ಸಮಯಕ್ಕೆ ಬಿಸಿಸಿಐ ನಿರ್ಬಂಧ ಹೇರಲು ಮುಂದಾಗಿರುವುದರಿಂದ, ಅನುಷ್ಕಾ ಅವರು ಎಲ್ಲ ಟೂರ್ನಿಗಳಲ್ಲೂ, ಟೂರ್ನಿಯ ಪೂರ್ಣ ಸಮಯದಲ್ಲಿ ಕೊಹ್ಲಿ ಅವರಿಂದಿಗೆ ಇರಲು ಅಥವಾ ಪ್ರಯಾಣ ಮಾಡಲು ಸಾಧ್ಯವಾಗುವುದಿಲ್ಲ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸರ್ಕಾರಿ ಶಾಲೆ ಮಕ್ಕಳಿಗೆ ಸುಸಜ್ಜಿತ ವ್ಯವಸ್ಥೆ ಸಿಕ್ಕರೆ ಅತ್ಯುನ್ನತ ಸಾಧನೆ, ಸಾಮರ್ಥ್ಯ ಅನಾವರಣ

"ಖಾಸಗಿ ಶಾಲೆಗಳಲ್ಲಿ ಓದುವ ಮಕ್ಕಳಿಗಿಂತ ಸರ್ಕಾರಿ ಶಾಲೆಗಳ ಮಕ್ಕಳು ಯಾವುದರಲ್ಲಿಯೂ ಕಡಿಮೆ...

ಸಾಗರ್ ಧನಕರ್ ಹತ್ಯೆ ಪ್ರಕರಣ: ಕುಸ್ತಿಪಟು ಸುಶೀಲ್ ಕುಮಾರ್ ಜಾಮೀನು ರದ್ದು

ಜೂನಿಯರ್ ರಾಷ್ಟ್ರೀಯ ಕುಸ್ತಿ ಚಾಂಪಿಯನ್ ಸಾಗರ್ ಧನಕರ್ ಹತ್ಯೆ ಪ್ರಕರಣದ ಪ್ರಮುಖ...

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

Download Eedina App Android / iOS

X