ಹಾಸನ l ಜಿಲ್ಲೆಯ ಅಭಿವೃದ್ಧಿ ಮಾಡಿಯೇ, ರಾಜಕೀಯಕ್ಕೆ ನಿವೃತ್ತಿ ಪಡೆಯುವೆ; ಶಾಸಕ ಹೆಚ್ ಡಿ ರೇವಣ್ಣ 

Date:

Advertisements

ನಮ್ಮ ತಂದೆ ದೇವೇಗೌಡರಿಗೆ 1962ರಿಂದ ರಾಜಕೀಯ ಜನ್ಮ ನೀಡಿ ಶಕ್ತಿ ತುಂಬಿದ ಹಾಸನ ಜಿಲ್ಲೆಯಲ್ಲಿ ಆಗದೇ ಉಳಿದಿರುವ ಯೋಜನೆ ಪೂರ್ಣಗೊಳಿಸಿ, ಸಮಗ್ರ ಅಭಿವೃದ್ಧಿ ಮಾಡಿದ ನಂತರವೇ ತಾವು ರಾಜಕೀಯ ನಿವೃತ್ತಿ ಪಡೆಯುವುದಾಗಿ ಹೊಳೆನರಸೀಪುರ ಕ್ಷೇತ್ರದ ಶಾಸಕ  ಹೆಚ್.ಡಿ.ರೇವಣ್ಣ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಶಾಸಕ ಹೆಚ್ ಡಿ ರೇವಣ್ಣ ಸುದ್ದಿಗೋಷ್ಠಿಯಲ್ಲಿ ಮಾತಾಡಿದ ಅವರು ದೇವೇಗೌಡರು ರಾಜಕೀಯವಾಗಿ ಹಲವು ಸ್ಥಾನಮಾನ, ಸಿಎಂ-ಪಿಎಂ ಆಗಲು ಹಾಸನ ಹಾಗೂ ಕನಕಪುರ ಲೋಕಸಭಾ ಕ್ಷೇತ್ರದ ಜನರೇ ಕಾರಣ ಎಂದರು. ದೇವೇಗೌಡರಲ್ಲದೆ, ನಾನು ಜೊತೆಗೆ ದಿ.ಪ್ರಕಾಶ್‌, ಈಗ ಸ್ವರೂಪ್ ಮೊದಲಾದವರು ಗೆಲ್ಲಲು ಜನರೇ ಕಾರಣರಾಗಿದ್ದಾರೆ. ಕೆಲವೊಮ್ಮೆ ಎಂಟಕ್ಕೆ ಎಂಟೂ ಈ ಸ್ಥಾನ ಗೆಲ್ಲಿಸಿದ್ದನ್ನು ನಾವು ಮರೆಯುವುದಿಲ್ಲ, ನನ್ನ ಕೊನೆ ಉಸಿರು ಇರೋವರೆಗೂ ಜಿಲ್ಲೆಯಲ್ಲಿ ಬಾಕಿ ಕೆಲಸ ಮುಗಿಸಲು ಸಿದ್ದವಿದ್ದೇನೆ ಎಂದು ಹೇಳಿದರು.

ಇದನ್ನೂ ಓದಿದ್ದೀರಾ?ಹಾಸನ | ಮತ್ತೆ ನಾಲಿಗೆ ಹರಿಬಿಟ್ಟ ಸೂರಜ್ ರೇವಣ್ಣ; ಪಕ್ಷದ ಮುಖಂಡರಿಗೆ ಅಶ್ಲೀಲವಾಗಿ ನಿಂದನೆ

Advertisements

ಈ ಹಿಂದೆ ಕುಮಾರಸ್ವಾಮಿ ಹಾಸನ ಜಿಲ್ಲೆಯ ಅಭಿವೃದ್ಧಿ ಕೆಲಸ ಮಾಡಿರುವುದರಲ್ಲಿ ಸ್ವಲ್ಪ ಬಾಕಿ ಇದೆ. ಯಾವುದೇ ಅಡೆತಡೆ ಬಂದರೂ ಪೂರ್ಣಗೊಳಿಸುವೆ. ಹಾಸನ, ಹೊಳೆನರಸೀಪುರ ತಾಲ್ಲೂಕಿನಲ್ಲಿ ರಿಂಗ್ ರೋಡ್‌ ಮಾಡಿಸಲು ಪ್ರಯತ್ನ ನಡೆಯುತ್ತಿದೆ. ಜಿಲ್ಲೆಗೆ ಏನೆಲ್ಲ ಅಭಿವೃದ್ಧಿ ಕೆಲಸ ಆಗಬೇಕು ಎಂದು ರಾಜ್ಯ ಸರ್ಕಾರಕ್ಕೆ ಪತ್ರ ಬರೆಡಿದ್ದೇನೆ. ಹಾಸನ ಜಿಲ್ಲೆಯ ಜನರು ನೀಡಿರುವ ಸಹಕಾರ ಮರೆಯಲ್ಲ. ರಾಜ್ಯ ಸರ್ಕಾರ ಕೊಟ್ಟರೆ ಸಂತೋಷ, ಇಲ್ಲವಾದರೆ ಕೇಂದ್ರದ ನೆರವಿನಿಂದಲೇ ಅಭಿವೃದ್ಧಿ ಮಾಡುವುದಾಗಿ ಶಾಸಕ ಹೆಚ್ ಡಿ ರೇವಣ್ಣ ತಿಳಿಸಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X