ಮೈಸೂರು | ಅಶೋಕಪುರಂ ನಿಲ್ದಾಣದವರೆಗೆ ರೈಲುಗಳ ವಿಸ್ತರಣೆ; ಸ್ಥಳೀಯರ ವಿರೋಧ

Date:

Advertisements

ಮೈಸೂರು ನಗರ ವ್ಯಾಪ್ತಿಯಲ್ಲಿ ರೈಲ್ವೆ ನಿಲ್ದಾಣದಿಂದ ಅಶೋಕಪುರಂ ರೈಲ್ವೆ ನಿಲ್ದಾಣದವರೆಗೆ ಪ್ರಮುಖ ಎಂಟು ರೈಲುಗಳ ವಿಸ್ತರಣೆಗೆ ನಗರದ ನಿವಾಸಿಗಳು ವಿರೋಧಿಸುತ್ತಿದ್ದಾರೆ.

“ಎಂಟು ದೈನಂದಿನ ರೈಲುಗಳು ಅಶೋಕಪುರಂನಿಂದ ಪ್ರಾರಂಭವಾಗಿ, ಕೊನೆಗೊಳ್ಳುವುದು ಪ್ರಾರಂಭವಾದರೆ, ಎರಡು ಪ್ರಮುಖ ಸ್ಥಳಗಳಾದ ಟೆನ್ನಿಸ್ ಕೋರ್ಟ್/ಚಾಮರಾಜಪುರಂ ರೈಲ್ವೆ ನಿಲ್ದಾಣ ಮತ್ತು ಕುಕ್ಕರಹಳ್ಳಿ ರೈಲ್ವೆ ಲೆವೆಲ್ ಕ್ರಾಸಿಂಗ್‌ಗಳ ಬಳಿ ಹೆಚ್ಚಿನ ಸಮಯವನ್ನು ಕಳೆಯಬೇಕಾಗುತ್ತದೆ. ಪ್ರಸ್ತುತ, ಆರು ಜೋಡಿ ರೈಲುಗಳು ಈ ಎರಡು ರೈಲ್ವೆ ಲೆವೆಲ್ ಕ್ರಾಸಿಂಗ್ ಮೂಲಕ ಹಾದುಹೋಗುತ್ತವೆ. ಪ್ರತಿ ಬಾರಿ ರೈಲುಗಳು ಬಂದಾಗ, ಈ ಕ್ರಾಸಿಂಗ್‌ಗಳನ್ನು ಕನಿಷ್ಠ 10 ನಿಮಿಷಗಳ ಕಾಲ ಮುಚ್ಚಲಾಗುತ್ತದೆ. ಇದು ಎರಡೂ ದಿಕ್ಕುಗಳಲ್ಲಿ ದೀರ್ಘ ಸಂಚಾರದಟ್ಟಣೆ ಉಂಟಾಗುತ್ತದೆ” ಎಂಬುದು ಸ್ಥಳೀಯರ ಅಭಿಪ್ರಾಯವಾಗಿದೆ.

ಪ್ರಸ್ತಾವನೆಯ ಪ್ರಕಾರ, ಎಂಟು ಪ್ರಮುಖ ರೈಲುಗಳಾದ ಎಂಎಎಸ್-ಮೈಸೂರು-ಎಂಎಎಸ್‌ ಕಾವೇರಿ ಎಕ್ಸ್‌ಪ್ರೆಸ್‌(16021/22), ಎಂಎಎಸ್-ಮೈಸೂರು-ಎಂಎಎಸ್‌ ಎಕ್ಸ್‌ಪ್ರೆಸ್‌(12609/10), ಎಸ್‌ಬಿಸಿ-ಎಂವೈಎಸ್-ಎಸ್‌ಬಿಸಿ ಮಾಲ್ಗುಡಿ ಎಕ್ಸ್‌ಪ್ರೆಸ್‌(20624/23), ಕೆಸಿಜಿ-ಎಂವೈಎಸ್-ಕೆಸಿಜಿ ಎಕ್ಸ್‌ಪ್ರೆಸ್‌(12785/86), ಎಸ್‌ಬಿಸಿ-ಮೈಸೂರು-ಎಸ್‌ಬಿಸಿ ಮೆಮು(06525/26), ಎಸ್‌ಬಿಸಿ-ಮೈಸೂರು-ಎಸ್‌ಬಿಸಿ ಮೆಮು(06559/60), ಎಸ್‌ಬಿಸಿ-ಮೈಸೂರು-ಎಸ್‌ಬಿಸಿ ಮೆಮು(06255/56), ಮತ್ತು ಎಸ್‌ಬಿಸಿ-ಮೈಸೂರು ಮೆಮು(06257/58) ರೈಲುಗಳನ್ನು ಇತ್ತೀಚೆಗೆ ಪುನರಾಭಿವೃದ್ಧಿ ಮಾಡಲಾದ ಅಶೋಕಪುರಂ ರೈಲು ನಿಲ್ದಾಣಕ್ಕೆ ವಿಸ್ತರಿಸಲಾಗುವುದು ಎನ್ನಲಾಗುತ್ತಿದೆ.

Advertisements

ಕಳೆದ ನಾಲ್ಕೈದು ವರ್ಷಗಳಿಂದ ಕುಕ್ಕರಹಳ್ಳಿ ಕೆರೆ ಬಳಿಯ ರೈಲ್ವೆ ಕ್ರಾಸಿಂಗ್‌ನಲ್ಲಿ ರೈಲ್ವೆ ಅಂಡರ್ ಬ್ರಿಡ್ಜ್ (ಆರ್‌ಯುಬಿ) ಬಗ್ಗೆ ಕೇಳುತ್ತಿದ್ದೇವೆ. ಆದರೆ ಕಾಮಗಾರಿ ಇನ್ನೂ ಆರಂಭವಾಗಿಲ್ಲ. ಪ್ರತಿ ಬಾರಿ ಈ ಎರಡು ಕ್ರಾಸಿಂಗ್‌ಗಳ ಮೂಲಕ ರೈಲು ಹಾದುಹೋದಾಗ, ಸಂಚಾರ ದಟ್ಟಣೆ ಉಂಟಾಗುತ್ತದೆ. ಇದರಿಂದ ವಾಹನ ಚಾಲಕರು ರಸ್ತೆಯಲ್ಲಿ ಸಿಲುಕಿಕೊಳ್ಳುತ್ತಾರೆ. ಈ ಮಾರ್ಗದಲ್ಲಿ ಇನ್ನೂ ಎಂಟು ರೈಲುಗಳಿಗೆ ವಿಸ್ತರಣೆ ಮಾಡಿದರೆ ಉಂಟಾಗುವ ಪರಿಣಾಮದ ಬಗ್ಗೆ ಸ್ಥಳೀಯರು ಚಿಂತಿತರಾಗಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮೈಸೂರು | ಎಂಸಿಸಿ ಇ-ಖಾತಾ ಅಭಿಯಾನ; ಡಿಸೆಂಬರ್‌ನಲ್ಲಿ ₹1.7 ಕೋಟಿ ಆದಾಯ ಹೆಚ್ಚಳ

“ನಗರದ ರೈಲ್ವೆ ನಿಲ್ದಾಣದ ದಟ್ಟಣೆಯನ್ನು ಕಡಿಮೆ ಮಾಡುವುದು ಮತ್ತು ನಗರದ ದಕ್ಷಿಣ ಭಾಗದಲ್ಲಿ ಉಳಿದುಕೊಂಡಿರುವ ಪ್ರಯಾಣಿಕರಿಗೆ ರೈಲು ಸೇವೆ ಒದಗಿಸುವುದು ಸೇರಿದಂತೆ ವಿವಿಧ ಕಾರಣಗಳಿಗಾಗಿ ರೈಲುಗಳನ್ನು ಅಶೋಕಪುರಂ ರೈಲ್ವೆ ನಿಲ್ದಾಣಕ್ಕೆ ವಿಸ್ತರಿಸುವುದು ಮುಖ್ಯವಾಗಿದೆ. ಕುಕ್ಕರಹಳ್ಳಿ ಕೆರೆ ಬಳಿ ರೈಲ್ವೆ ಕ್ರಾಸಿಂಗ್‌ಗೆ ಅಂಡರ್‌ಗ್ರೌಂಡ್‌ ಮಂಜೂರಾಗಿದ್ದು, ಅದನ್ನು ತ್ವರಿತವಾಗಿ ನಿರ್ಮಿಸಬೇಕು” ಎಂದು ಮೈಸೂರು ರೈಲ್ವೆ ಪ್ರಯಾಣಿಕರ ವೇದಿಕೆಯ ಎಸ್ ಯೋಗೇಂದ್ರ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಸಾರ್ವಜನಿಕರು ಯಾವುದೇ ಸಮಸ್ಯೆ ಅಥವಾ ಅನಾನುಕೂಲತೆಗಳನ್ನು ಅನುಭವಿಸುವಂತಾದರೆ ಕೂಡಲೇ ಪರಿಶೀಲಿಸಲಾಗುವುದೆಂದು ನೈಋತ್ಯ ರೈಲ್ವೆಯ ಮೈಸೂರು ವಿಭಾಗದ ವಿಭಾಗೀಯ ವಾಣಿಜ್ಯ ವ್ಯವಸ್ಥಾಪಕ ಮತ್ತು ಸಾರ್ವಜನಿಕ ಸಂಪರ್ಕಾಧಿಕಾರಿ ಗಿರೀಶ್ ಧರ್ಮರಾಜ್ ಕಲಗೊಂಡ ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X