ಹುಟ್ಟುಹಬ್ಬ ಆಚರಣೆ ನೆಪದಲ್ಲಿ ಬಾಲಕಿ ಮೇಲೆ ಅತ್ಯಾಚಾರ; ದೂರು ದಾಖಲು

Date:

Advertisements

ಹುಟ್ಟುಹಬ್ಬ ಆಚರಿಸುವ ನೆಪದಲ್ಲಿ ಕರೆಸಿ 14 ವರ್ಷದ ಬಾಲಕಿಯ ಮೇಲೆ ಯುವಕನೋರ್ವ ಅತ್ಯಾಚಾರ ಎಸಗಿರುವ ಘಟನೆ ಗುರುಗ್ರಾಮದಲ್ಲಿ ನಡೆದಿದೆ.

ಭಾನುವಾರ ರಾತ್ರಿ ಬಾಲಕಿ ಹುಟ್ಟುಹಬ್ಬ ಆಚರಣೆಗಾಗಿ ತನ್ನ ಸ್ನೇಹಿತರೊಂದಿಗೆ ಗೆಸ್ಟ್‌ ಹೌಸ್ ಒಂದಕ್ಕೆ ಹೋಗಿದ್ದಳು. ಆದರೆ ನಿಖರ ಸ್ಥಳದ ಬಗ್ಗೆ ಪೋಷಕರಿಗೆ ಮಾಹಿತಿ ನೀಡಿರಲಿಲ್ಲ. ಮರುದಿನ ಬೆಳಿಗ್ಗೆ ಬಂದು ತನ್ನ ಮೇಲೆ ಅತ್ಯಾಚಾರ ಆಗಿರುವ ಬಗ್ಗೆ ಪೋಷಕರಿಗೆ ತಿಳಿಸಿದ್ದು, ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ ಎಂದು ವರದಿಯಾಗಿದೆ.

ಇದನ್ನು ಓದಿದ್ದೀರಾ? ಬಳ್ಳಾರಿ| 5 ವರ್ಷದ ಬಾಲಕಿ ಮೇಲೆ ಅತ್ಯಾಚಾರ : ಪೋಕ್ಸೊ ದಾಖಲು

Advertisements

8ನೇ ತರಗತಿ ವಿದ್ಯಾಭ್ಯಾಸ ಮಾಡುತ್ತಿದ್ದ ತನ್ನ ಮಗಳು ತನ್ನ ಸ್ನೇಹಿತ ಅಂಶು ಜೊತೆ ಮತ್ತೊಬ್ಬ ಯುವಕನ (ಅವಿನಾಶ್) ಹುಟ್ಟುಹಬ್ಬ ಆಚರಿಸಲು ಬೈಕ್‌ನಲ್ಲಿ ಹೋಗಿದ್ದಳು ಎಂದು ಸಂತ್ರಸ್ತೆಯ ತಾಯಿ ತಮ್ಮ ದೂರಿನಲ್ಲಿ ತಿಳಿಸಿರುವುದಾಗಿ ಪೊಲೀಸರು ಹೇಳಿದ್ದಾರೆ.

ಅವಿನಾಶ್ ಹುಟ್ಟುಹಬ್ಬದ ಕೇಕ್ ಕತ್ತರಿಸಿದ ಬಳಿಕ ವಾಪಸ್ ಬರುವುದಾಗಿ ಅಂಶು ಹೇಳಿದ್ದ. ಆದರೆ ಅವಿನಾಶ್ ಗೆಸ್ಟ್‌ ಹೌಸ್‌ನಿಂದ ಹೊರ ಹೋಗಿದ್ದು, ಅಂಶು ತನ್ನ ಮಗಳ ಮೇಲೆ ಅತ್ಯಾಚಾರ ಮಾಡಿದ್ದಾನೆ ಎಂದು ತಾಯಿ ದೂರಿನಲ್ಲಿ ತಿಳಿಸಿದ್ದಾರೆ.

“ಅವಿನಾಶ್ ಈ ಹಿಂದೆ ಎರಡು ಬಾರಿ ತನ್ನ ಮೇಲೆ ಅತ್ಯಾಚಾರ ಮಾಡಿದ್ದಾಗಿ ತನ್ನ ಮಗಳು ಬಹಿರಂಗಪಡಿಸಿದ್ದಾಳೆ” ಎಂದು ಸಂತ್ರಸ್ತೆಯ ತಾಯಿ ದೂರಿನಲ್ಲಿ ಹೇಳಿದ್ದಾರೆ.

ಇದನ್ನು ಓದಿದ್ದೀರಾ? ಬೆಂಗಳೂರು | 6 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆಗೈದ ಕಾಮುಕ

ತಾಯಿಯ ದೂರಿನ ಆಧಾರದಲ್ಲಿ ಸೋಮವಾರ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಬಾಲಕಿಯನ್ನು ವೈದ್ಯಕೀಯ ಪರೀಕ್ಷೆ ಮತ್ತು ಸಮಾಲೋಚನೆಗಾಗಿ ಆಸ್ಪತ್ರೆಗೆ ಕಳುಹಿಸಲಾಗಿದೆ.

ಈ ಬಗ್ಗೆ ಮಾಹಿತಿ ನೀಡಿದ ಹಿರಿಯ ಪೊಲೀಸ್ ಅಧಿಕಾರಿ, “ಆರೋಪಿಗಳನ್ನು ಬಂಧಿಸಲು ವಿಶೇಷ ತಂಡವನ್ನು ರಚಿಸಲಾಗಿದೆ. ಇಬ್ಬರೂ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಶೀಘ್ರದಲ್ಲೇ ಅವರನ್ನು ಬಂಧಿಸಲಾಗುವುದು” ಎಂದು ಹೇಳಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X