ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಾರು ಅಪಘಾತ ಪ್ರಕರಣ: ಟ್ರಕ್ ಚಾಲಕನ ವಿರುದ್ಧ ಎಫ್‌ಐಆರ್ ದಾಖಲು

Date:

Advertisements

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪ್ರಯಾಣಿಸುತ್ತಿದ್ದ ಕಾರು ಮಂಗಳವಾರ ಮುಂಜಾನೆ ಅಪಘಾತಕ್ಕೀಡಾಗಿದ್ದು, ಸಚಿವೆ, ಅವರ ಸಹೋದರ ಹಾಗೂ ಕಾರು ಚಾಲಕನಿಗೆ ಸಣ್ಣ-ಪುಟ್ಟ ಗಾಯಗಳಾಗಿವೆ. ಘಟನೆಗೆ ಸಂಬಂಧಿಸಿದಂತೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಕಾರು ಚಾಲಕ ಜಿ ಶಿವಪ್ರಸಾದ್ ವಿರುದ್ಧ ಮಂಗಳವಾರ ಪ್ರಕರಣ ದಾಖಲಾಗಿತ್ತು. ಇದೀಗ, ಶಿವಪ್ರಸಾದ್ ಅವರು ಟ್ರಕ್‌ ಚಾಲಕನೊಬ್ಬನ ವಿರುದ್ಧ ದೂರು ದಾಖಲಿಸಿದ್ದಾರೆ. ಅವರ ದೂರಿನ ಆಧಾರದ ಮೇಲೆ ಟ್ರಕ್ ಚಾಲಕನ ವಿರುದ್ಧವೂ ಕಿತ್ತೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟ್ರಕ್‌ ಚಾಲಕನ ವಿರುದ್ದ ದೂರು ನೀಡಿರುವ ಶಿವಪ್ರಸಾದ್, “ಟ್ರಕ್ ಚಾಲಕ ತಮ್ಮ ಕಾರನ್ನು ಓವರ್​ಟೇಕ್ ಮಾಡುವ ಪ್ರಯತ್ನಸಿ, ಕಾರಿಗೆ ಗುದ್ದಿದ್ದಾರೆ. ಪರಿಣಾಮ ಅಪಘಾತ ಸಂಭವಿಸಿದೆ. ಘಟನೆಗೆ ಟ್ರಕ್ ಚಾಲಕನ ಅಜಾಗರೂಕ ಚಾಲನೆಯೇ ಕಾರಣ. ಕಾರಿಗೆ ಟ್ರಕ್ ಗುದ್ದಿದ್ದರಿಂದ ತಮ್ಮ ನಿಯಂತ್ರಣ ಕಳೆದುಕೊಂಡ ಕಾರು ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆಯಿತು” ಎಂದು ಆರೋಪಿಸಿದ್ದಾರೆ.

“ನಾನು ಸಚಿವರ ಸರ್ಕಾರಿ ಕಾರನ್ನು ಚಲಾಯಿಸುತ್ತಿದ್ದೆ. ಕಿತ್ತೂರು ಬಳಿಯ ಅಂಬಡಗಟ್ಟಿ ಸಮೀಪ ನಮ್ಮ ಮುಂದೆ ಲೇನ್ 1ರಲ್ಲಿ ಕಂಟೇನರ್ ಟ್ರಕ್ ಹೋಗುತ್ತಿತ್ತು. ಅದರ ಚಾಲಕ ಯಾವುದೇ ಮುನ್ಸೂಚನೆ ಕೊಡದೆ ಎಡಬದಿಗೆ ಟ್ರಕ್‌ಅನ್ನು ತಿರುಗಿಸಿದರು. ಕಾರನ್ನು ರಕ್ಷಣವೇ ಎಡಬದಿಗೆ ತೆಗೆದುಕೊಂಡರೂ, ಕಾರಿನ ಬಲಬದಿಗೆ ಟ್ರಕ್‌ ತಾಗಿತು. ಹೀಗಾಗಿ, ಕಾರು ನಿಯಂತ್ರಣ ತಪ್ಪಿ ಸರ್ವಿಸ್ ರಸ್ತೆಯಲ್ಲಿದ್ದ ಮರಕ್ಕೆ ಡಿಕ್ಕಿ ಹೊಡೆಯಿತು. ಅಪಘಾತ ಎಸಗಿದ ಟ್ರಕ್ ಚಾಲಕ, ಅಪಘಾತವಾಗಿದ್ದನ್ನು ಕಂಡರೂ ವಾಹನ ನಿಲ್ಲಿಸದೇ ಹೋಗಿದ್ದಾನೆ” ಎಂದು ದೂರಿನಲ್ಲಿ ವಿವರಿಸಿದ್ದಾರೆ.

Advertisements

ಅವರ ದೂರಿನ ಆಧಾರದ ಮೇಲೆ ಅಪರಿಚಿತ ಟ್ರಕ್ ಚಾಲಕನ ವಿರುದ್ದ ಬಿಎನ್​ಎಸ್ ಕಾಯ್ದೆಯ ಸೆಕ್ಷನ್ 281, 125ಎ, 125 ಬಿ ಹಾಗೂ ಭಾರತೀಯ ಮೋಟಾರು ವಾಹನ ಕಾಯ್ದೆಯಡಿ 134, 187 ಅಡಿ ಪ್ರಕರಣ ದಾಖಲಾಗಿದೆ. ಕಿತ್ತೂರು ಪೊಲೀಸ್‌ ಠಾಣೆಯ ಪೊಲೀಸರು ತನಿಖೆ ಆರಂಭಿದ್ದಾರೆ.

ಮಂಗಳವಾರ ಅಪಘಾತ ಸುದ್ದಿ ವರದಿಯಾದಾಗ, ರಸ್ತೆಯಲ್ಲಿ ನಾಯಿ ಅಡ್ಡ ಬಂದಿತ್ತು. ನಾಯಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿತ್ತು. ಈ ಬಗ್ಗೆ ಕಾರು ಚಾಲಕ ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ. ಇದೀಗ, ಅವರು ಪೊಲೀಸರಿಗೆ ದೂರು ನೀಡಿದ್ದು, ಅಪಘಾತಕ್ಕೆ ಟ್ರಕ್‌ ಚಾಲಕನ ಅಜಾಗರೂಕ ಚಾಲನೆಯೇ ಕಾರಣವೆಂದು ಆರೋಪಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಮಹಾರಾಷ್ಟ್ರದಲ್ಲಿ ಮಳೆ – ಬೆಳಗಾವಿ ಜಿಲ್ಲೆಯ ನದಿ ತೀರದ ಗ್ರಾಮಗಳಲ್ಲಿ ಪ್ರವಾಹದ ಆತಂಕ

ಮಹಾರಾಷ್ಟ್ರದ ಕೊಂಕಣ ಭಾಗದಲ್ಲಿ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಅಲ್ಲಿ ಇರುವ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X