‘ನಾನು ಸತ್ತರೆ ಎಎಪಿಯೇ ಕಾರಣ’: ಉಪವಾಸ ಕುಳಿತ ಬಿಜೆಪಿ ನಾಯಕ

Date:

Advertisements

“ನನ್ನ ವಿರುದ್ಧ ಎಎಪಿ ಸುಳ್ಳು ಆರೋಪಗಳನ್ನು ಮಾಡುತ್ತಿದೆ. ನನ್ನ ಮೇಲಿನ ಎಎಪಿಯ ಆರೋಪಗಳ ವಿರುದ್ಧ ಆಮರಣಾಂತ ಉಪವಾಸ ಆರಂಭಿಸುತ್ತಿದ್ದೇನೆ. ನಾನು ಸತ್ತರೆ ಎಎಪಿಯೇ ಕಾರಣ” ಎಂದು ದೆಹಲಿಯ ಬಿಜೆಪಿ ನಾಯಕ ಶೆಹಜಾದ್ ಪೂನಾವಾಲಾ ಹೇಳಿದ್ದಾರೆ.

ತಾವು ಉಪವಾಸ ಆರಂಭಿಸಿರುವುದಾಗಿ ‘ಎಕ್ಸ್‌‘ನಲ್ಲಿ ಪೋಸ್ಟ್‌ ಮಾಡಿರುವ ಪೂನಾವಾಲಾ, “ಪ್ರೀತಿಯ ಸ್ನೇಹಿತರೇ, ನಾನು ರುತುರಾಜ್ ಝಾ ವಿರುದ್ಧ ಅಸಭ್ಯವಾಗಿ ಮಾತನಾಡಿದ್ದೇನೆ ಎಂದು ಎಎಪಿ ಆರೋಪಿಸಿದೆ. ತಿರುಚಿದ ವಿಡಿಯೋವನ್ನು ಹಂಚಿಕೊಂಡು ಅಪಪ್ರಚಾರ ಮಾಡುತ್ತಿದೆ. ಎಎಪಿ ನನ್ನ ವಿರುದ್ಧ ಸುಳ್ಳುಗಳನ್ನು ಹರಡುತ್ತಿದೆ. ತೇಜೋವಧೆ ಮಾಡಿದೆ. ನಾನು ಯಾರನ್ನಾದರೂ ನಿಂದಿಸಿದ್ದೇನೆ ಎಂಬುದನ್ನು ಎಎಪಿ ಸಾಬೀತುಮಾಡಬೇಕು. ಅಲ್ಲಿಯವರೆಗೆ ಆಮರಣಾಂತ ಉಪವಾಸ ಮಾಡುತ್ತೇನೆ. ನಾನು ಸತ್ತರೆ ಅದಕ್ಕೆ ಎಎಪಿ ಜವಾಬ್ದಾರಿ” ಎಂದಿದ್ದಾರೆ.

“ನಾನು ಮುಸ್ಲಿಂ ಎಂಬ ಕಾರಣಕ್ಕೆ ಎಎಪಿ ನನ್ನನ್ನು ಗುರಿ ಮಾಡಿಕೊಂಡಿದೆ. ಟಿವಿ ಚರ್ಚೆಯ ಸಮಯದಲ್ಲಿ ಸೆರೆಹಿಡಿದ ವಿಡಿಯೋವನ್ನು ಎಡಿಟ್ ಮಾಡಿ ಎಎಪಿ ಹಂಚಿಕೊಂಡಿದೆ. ಅದು ತಿರುಚಿದ ವಿಡಿಯೋ ಎಂಬುದಕ್ಕೆ ಚರ್ಚೆಯ ಸಮಯದಲ್ಲಿ ಹಾಜರಿದ್ದ ಪತ್ರಕರ್ತ ಮತ್ತು ನಿರೂಪಕರೇ ಸಾಕ್ಷಿ” ಎಂದು ಹೇಳಿದ್ದಾರೆ.

Advertisements

“ನಾನು ಎಎಪಿ ಕಚೇರಿ ಎದುರು ಉಪವಾಸ ಕೂರುತ್ತೇನೆ. ನನ್ನ ವಿರುದ್ದದ ಆರೋಪವನ್ನು ಎಎಪಿ ಸಾಬೀತು ಮಾಡಬೇಕು. ಇಲ್ಲವೆ, ಕ್ಷಮೆ ಕೇಳಬೇಕು” ಎಂದಿದ್ದಾರೆ.

ದೆಹಲಿಯಲ್ಲಿ ಫೆಬ್ರವರಿ 5ರಂದು ವಿಧಾನಸಭಾ ಚುನಾವಣೆ ನಡೆಯಲಿದೆ. ಆಡಳಿತಾರೂಢ ಎಎಪಿ 3ನೇ ಬಾರಿಗೆ ಅಧಿಕಾರ ಪಡೆಯಲು ಕಸರತ್ತು ನಡೆಸುತ್ತಿದೆ. ಎಎಪಿಯಿಂದ ಅಧಿಕಾರ ಕಿತ್ತುಕೊಳ್ಳಲು ಬಿಜೆಪಿ ಹವಣಿಸುತ್ತಿದೆ. ಎಎಪಿ ವಿರುದ್ಧ ಬಿಜೆಪಿ ನಾಯಕರು ದ್ವೇಷಪೂರಿತ ಭಾಷಣಗಳೊಂದಿಗೆ ಪ್ರಚಾರ ಮಾಡುತ್ತಿದ್ದಾರೆ. ಕಳೆದ 10 ವರ್ಷಗಳಲ್ಲಿ ತನ್ನ ನೆಲೆ ಕಳೆದುಕೊಂಡಿರುವ ಕಾಂಗ್ರೆಸ್‌, ಮರಳಿ ನೆಲೆ ಪಡೆಯಲು ಯತ್ನಿಸುತ್ತಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X