ದಾವಣಗೆರೆ | ಘನತ್ಯಾಜ್ಯ ವಿಲೇವಾರಿ ಘಟಕದಲ್ಲಿ ಬೆಂಕಿ; ಊರೆಲ್ಲಾ ಸುತ್ತುವರೆದ ಹೊಗೆ ಕಂಡು ಸ್ಥಳೀಯರ ಆತಂಕ

Date:

Advertisements

ದಾವಣಗೆರೆ ನಗರದ ಹೊರವಲಯದ ಆವರಗೊಳ್ಳ ಗ್ರಾಮಕ್ಕೆ ಹೊಂದಿಕೊಂಡಂತಿರುವ ಘನತ್ಯಾಜ್ಯ ವಿಲೇವಾರಿ ಘಟಕದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅದರ ಹೊಗೆ ಇಡೀ ಊರನ್ನೇ ಸುತ್ತುವರೆದಿದೆ. ಅದು ಕೇವಲ ಹೊಗೆಯೋ ಅಥವಾ ವಿಷಕಾರಿ ಹೊಗೆಯೋ ಎನ್ನುವುದು ಜನರಲ್ಲಿ ಆತಂಕ ಮೂಡಿಸಿದ್ದು, ಕೆಟ್ಟ ಗಾಳಿಯಿಂದ ಜನ ಉಸಿರಾಡಲೂ ಕಷ್ಟಪಡುವಂತಾಗಿದೆ.

ಮಹಾನಗರ ಪಾಲಿಕೆಯ ಘನತ್ಯಾಜ್ಯ ವಿಲೇವಾರಿ ಘಟಕದ ಸಂಭವನೀಯ ಅವಘಡಗಳ ಕುರಿತು ವರ್ಷದ ಹಿಂದೆಯೇ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದರು. ವಿಲೇವಾರಿ ಘಟಕದ ಸ್ಥಳಾಂತರಕ್ಕೆ ಮನವಿಯನ್ನೂ ಸಲ್ಲಿಸಿಲಾಗಿತ್ತು. ನಗರಾಡಳಿತ ಸುರಕ್ಷಿತ ಕಾರ್ಯಾಚರಣೆಯ ಭರವಸೆ ನೀಡಿತ್ತು. ಆದರೆ ಈವರೆಗೆ ಪರಿಹಾರ ಮಾತ್ರ ಸಿಕ್ಕಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ಹೊರಹಾಕಿದರು.

WhatsApp Image 2025 01 15 at 3.38.25 PM

ಕೆಲವು ದಿನಗಳ ಹಿಂದಷ್ಟೇ ಇದೇ ರೀತಿಯಾಗಿ ಬಿದ್ದಿದ್ದ ಬೆಂಕಿ ನಂದಿಸಲು ತಿಂಗಳುಗಳ ಕಾಲ ಹಿಡಿಯಿತು. ಇದರಿಂದಾಗಿ ಗ್ರಾಮಸ್ಥರು ತೀವ್ರ ಸಮಸ್ಯೆ ಅನುಭವಿಸಿದ್ದರು. ಈಗ ಮತ್ತೆ ಬೆಂಕಿ ಹೊತ್ತಿಕೊಂಡಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕೆಲಸದಲ್ಲಿ ತೊಡಗಿದ್ದಾರೆ.

Advertisements

“ದಿನಂಪ್ರತಿ ನಗರದಿಂದ ತಂದು ಸುರಿಯುವ ಟನ್ ಗಟ್ಟಲೆ ಕಸದ ರಾಶಿ ಗುಡ್ಡದ ರೀತಿಯಲ್ಲಿ ಬಿದ್ದಿದೆ. ಇದರಿಂದಾಗಿ ಸುತ್ತಮುತ್ತಲ ಜನರ ಆರೋಗ್ಯಕ್ಕೂ ಅಪಾಯ. ಈ ವಿಚಾರವನ್ನು ಪಾಲಿಕೆ ಅಧಿಕಾರಿಗಳಿಗೆ ತಿಳಿಸಿದ್ದರೂ ಕ್ರಮ ಕೈಗೊಳ್ಳುವಲ್ಲಿ ವಿಫಲರಾಗಿದ್ದಾರೆ” ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ?:ದಾವಣಗೆರೆ | ಆಸ್ತಿಯಲ್ಲಿ ಪಾಲು ಕೊಡಲಿಲ್ಲವೆಂದು ವ್ಯಕ್ತಿಯ ಕೊಲೆ; ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಬಂಧನ

ಮಾಹಿತಿ ತಿಳಿದು ಆವರಗೊಳ್ಳ ಬಳಿಯ ಘನತ್ಯಾಜ್ಯ ಘಟಕಕ್ಕೆ ಜಿಲ್ಲಾಧಿಕಾರಿ ಗಂಗಾಧರಸ್ವಾಮಿ, ಮಹಾನಗರ ಪಾಲಿಕೆ ಆಯುಕ್ತೆ ರೇಣುಕಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಳ್ಳಾರಿ | ನಶಿಸಿ ಹೋಗುತ್ತಿರುವ ತೊಗಲುಗೊಂಬೆ ಪ್ರದರ್ಶನ ಉಳಿಸಿ ಬೆಳೆಸಬೇಕು: ಜೋಳದರಾಶಿ ತಿಮ್ಮಪ್ಪ

ನಶಿಸಿ ಹೋಗುತ್ತಿರುವ ತೊಗಲು ಗೊಂಬೆ ಪ್ರದರ್ಶನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ...

ಭಟ್ಕಳ | ಮಗಳ ಅಶ್ಲೀಲ ವಿಡಿಯೊ ವೈರಲ್ ಮಾಡುವುದಾಗಿ ಬೆದರಿಕೆ: ಮೂವರ ಬಂಧನ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ನಗರದ ಕಿದ್ವಾಯಿ ರಸ್ತೆಯೊಂದರ ತರಕಾರಿ ವ್ಯಾಪಾರಿಯನ್ನು...

ದಾವಣಗೆರೆ | ಕೆರೆ ನೀರು ಪೋಲು, ನೀರಾವರಿ ಇಲಾಖೆ ನಿರ್ಲಕ್ಷ್ಯ; ದುರಸ್ತಿಗೆ ರೈತಸಂಘದ ಮುಖಂಡರ ಆಗ್ರಹ

"ಜಗಳೂರು ತಾಲೂಕಿನ ಭರಮ ಸಮುದ್ರ ಕೆರೆಯಲ್ಲಿ ಟ್ಯೂಬ್ ಗಳಲ್ಲಿ ನೀರು ಪೋಲಾಗುತ್ತಿದೆ....

ಮಂಗಳೂರು | ಸ್ನಾತಕೋತ್ತರದತ್ತ ಮುಖಮಾಡದ ಪದವೀಧರರು: ಪ್ರವೇಶಾತಿ ಗಡುವು ವಿಸ್ತರಣೆ

ನಾಲ್ಕು ದಶಕಗಳಷ್ಟು ಹಳೆಯದಾದ ಮಂಗಳೂರು ವಿಶ್ವವಿದ್ಯಾಲಯ(MU), ನಿರೀಕ್ಷಿತ ಸಂಖ್ಯೆಯ ಪ್ರವೇಶಗಳನ್ನು ಪಡೆಯಲು...

Download Eedina App Android / iOS

X