ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಸಚಿವ ಸತೀಶ್‌ ಜಾರಕಿಹೊಳಿ ಟವೆಲ್?

Date:

Advertisements

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹಾಗೂ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ನಡುವೆ ಬಹಳ ದಿನದಿಂದ ಮಡುಗಟ್ಟಿದ ಅಸಮಾಧಾನ ಕೊನೆಗೂ ಸ್ಫೋಟಗೊಂಡಿದೆ.

ಆದಷ್ಟು ಶೀಘ್ರವೇ ಕೆಪಿಸಿಸಿಗೆ ಹೊಸ ಅಧ್ಯಕ್ಷರ ನೇಮಕ ಮಾಡಿ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಅವರನ್ನು ಭೇಟಿ ಮಾಡಿ ಬೇಡಿಕೆ ಇಟ್ಟಿದ್ದೇನೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, “ಸುರ್ಜೆವಾಲಾರನ್ನು ಭೇಟಿ ಮಾಡಿದ್ದೇನೆ. ಪಕ್ಷದ ಆಗು ಹೋಗುಗಳು ಹಾಗೂ ಸಂಘಟನೆ ಬಗ್ಗೆ ಚರ್ಚೆ ಮಾಡಿರುವೆ. ಆದಷ್ಟು ಬೇಗ ಹೊಸ ಅಧ್ಯಕ್ಷರ ನೇಮಕ ಆಗಬೇಕು ಎಂದು ಹೇಳಿದ್ದೇನೆ. ಡಿ ಕೆ ಶಿವಕಮಾರ್ ಅವರನ್ನೇ ಮುಂದುವರಿಸುವುದಾದರೆ ಅದನ್ನೂ ಸ್ಪಷ್ಟಪಡಿಸಿ ಅಂತ ಹೇಳಿದ್ದೇನೆ. ನಮಗೆ ಪೂರ್ಣಪ್ರಮಾಣದ ಅಧ್ಯಕ್ಷರು ಬೇಕು. ಮತ ಸೆಳೆಯುವವರನ್ನು ಹಾಗೂ ವರ್ಚಸ್ಸು ಇರುವವರನ್ನು ಅಧ್ಯಕ್ಷರನ್ನಾಗಿ ಮಾಡಿ ಅಂತ ಹೇಳಿದ್ದೇನೆ” ಎಂದರು.

Advertisements

“ನನ್ನನ್ನು ಅಧ್ಯಕ್ಷ ಮಾಡಿ ಅಂತ ಕೇಳಿಲ್ಲ. ಆದರೆ ಪೂರ್ಣ ಪ್ರಮಾಣದ ಅಧ್ಯಕ್ಷರನ್ನು ಮಾಡಿ ಎಂದು ಹೇಳಿದ್ದೇನೆ. ಇವರು ಇರಬೇಕು ಬೇಡ ಎಂಬ ಬಗ್ಗೆ ಗೊಂದಲಗಳಿವೆ. ಹೀಗಾಗಿ ಎಲ್ಲ ಗೊಂದಲಗಳಿಗೆ ತೆರೆಎಳೆಯಿರಿ” ಎಂದು ಸುರ್ಜೆವಾಲಾಗೆ ಮನವಿ ಮಾಡಿರುವೆ” ಎಂದು ಹೇಳಿದರು.

ಒಂದು ಕಡೆ ತೆರೆಮರೆಯಲ್ಲೇ ಸಿಎಂ ಕುರ್ಚಿ ಫೈಟ್​ ನಡೆಯುತ್ತಿದೆ. ಇದೀಗ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕೂಗು ಎಬ್ಬಿಸಿರೋ ಸಚಿವ ಸತೀಶ್ ಜಾರಕಿಹೊಳಿ, ನೇರಾ ನೇರವಾಗಿಯೇ ಹೊಸ ಅಧ್ಯಕ್ಷರ ನೇಮಕಕ್ಕೆ ಪಟ್ಟು ಹಿಡಿದಿದ್ದಾರೆ. ಕೊನೆಯ ಎರಡ್ಮೂರು ವರ್ಷವದಾರೂ ಸಿಎಂ ಆಗಬೇಕೆಂದು ಡಿ ಕೆ ಶಿವಕುಮಾರ್ ಕಸರತ್ತು ನಡೆಸಿದ್ದಾರೆ. ಆದರೆ ಇತ್ತ ಸತೀಶ್ ಜಾರಕಿಹೊಳಿ ಡಿ ಕೆ ಶಿವಕುಮಾರ್ ಬಳಿ ಇರುವ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರಾ ಎನ್ನುವ ಅನುಮಾನ ಅವರ ಮಾತುಗಳಿಂದಲೇ ವ್ಯಕ್ತವಾಗಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೋದಿಯವರು ಗಳಿಸಿದ ಡಿಗ್ರಿಗಳು ಮತ್ತು ಮಾಹಿತಿ ಹಕ್ಕು ಎಂಬ ತುಕ್ಕು ಹಿಡಿದ ಹತಾರು

ರಾಜ್ಯ ಕಾಂಗ್ರೆಸ್‌ನ ವಿವಿಧ ಬಣಗಳು ಮುಖ್ಯಮಂತ್ರಿ ಹುದ್ದೆ ಹಾಗೂ ಕೆಪಿಸಿಸಿ ಅಧ್ಯಕ್ಷ ಹುದ್ದೆಗೆ ಸಂಬಂಧಿಸಿದಂತೆ ಮೇಲಾಟ ನಡೆಸುತ್ತಿದ್ದರೂ ದೆಹಲಿ ಚುನಾವಣೆಯ ಬ್ಯುಸಿಯಲ್ಲಿರುವ ಕಾಂಗ್ರೆಸ್ ಹೈಕಮಾಂಡ್ ರಾಜ್ಯ ಬಜೆಟ್ ಮುಗಿಯುವವರೆಗೂ ಇಂತಹ ಯಾವುದೇ ಬೆಳವಣಿಗೆ ಬಗ್ಗೆ ಚಿಂತಿಸುವ ಮನಸ್ಥಿತಿ ಹೊಂದಿಲ್ಲ ಎನ್ನಲಾಗಿದೆ.

ವಾಸ್ತವವಾಗಿ ಕೆಪಿಸಿಸಿ ಅಧ್ಯಕ್ಷ ಹುದ್ದೆ ಬದಲಾವಣೆ ಮಾಡುವ ಸಂದರ್ಭ ಎದುರಾದರೆ ಆಗ ಲಿಂಗಾಯತ ಸಮುದಾಯಕ್ಕೆ ಹುದ್ದೆ ನೀಡಬೇಕು ಎಂಬ ಚಿಂತನೆ ಪಕ್ಷದಲ್ಲಿತ್ತು. ಹೀಗಾಗಿ ಲಿಂಗಾಯತ ಸಮುದಾಯದ ಈಶ್ವರ್ ಖಂಡ್ರೆ ಅವರ ಹೆಸರು ಪ್ರಧಾನವಾಗಿ ಕೇಳಿ ಬರುತ್ತಿತ್ತು. ಇದೀಗ ಹಠಾತ್ ಆಗಿ ಸತೀಶ್ ಜಾರಕಿಹೊಳಿ ಅವರು ನೇರವಾಗಿ ಹುದ್ದೆ ಆಕಾಂಕ್ಷೆಯನ್ನು ಹೈಕಮಾಂಡ್ ಮುಂದೆ ನೇರವಾಗಿ ವ್ಯಕ್ತಪಡಿಸಿರುವುದು ಕುತೂಹಲ ಮೂಡಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

Download Eedina App Android / iOS

X