ಬಾಲಿವುಡ್‌ ನಟ ಸೈಫ್‌ ಅಲಿ ಖಾನ್‌ಗೆ ಚಾಕು ಇರಿತ: ರಾತ್ರಿ ಮನೆಗೆ ನುಗ್ಗಿದ್ದ ದುಷ್ಕರ್ಮಿಗಳು

Date:

Advertisements

ಬಾಲಿವುಡ್‌ ನಟ ಸೈಫ್‌ ಅಲಿ ಖಾನ್‌ ಮೇಲೆ ಚಾಕು ಇರಿದಿದ್ದು, ಮುಂಬೈನ ಲೀಲಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ನೀಡಲಾಗುತ್ತಿದೆ. ಈ ಸಂಬಂಧ ಮುಂಬೈ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಮುಂಬೈನ ಬಾಂದ್ರಾದಲ್ಲಿ ಸೈಫ್‌ ಅಲಿ ಖಾನ್‌ ಮೇಲೆ ತಡರಾತ್ರಿ 2 ಗಂಟೆಗೆ ದಾಳಿ ನಡೆದಿದೆ. ದರೋಡೆಗೆ ಬಂದಿದ್ದ ಕಿಡಿಗೇಡಿಗಳಿಂದ ಈ ಕೃತ್ಯ ಜರುಗಿದೆ. ಸೈಫ್‌ ಅಲಿ ಖಾನ್‌ಗೆ ಚಾಕುವಿನಿಂದ ಇರಿದು, ಕಿಡಿಗೇಡಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಸದ್ಯ ನಟನಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಪತ್ನಿ ಕರೀನಾ ಕಪೂರ್‌ ಮತ್ತು ಇಬ್ಬರೂ ಮಕ್ಕಳು ಸುರಕ್ಷಿತವಾಗಿದ್ದಾರೆ.

ಸೈಫ್‌ ಅಲಿ ಖಾನ್‌ ನಿವಾಸಕ್ಕೆ ಮುಂಬೈ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕಿಡಿಗೇಡಿಗಳಿಗಾಗಿ ಬಲೆ ಬೀಸಿದ್ದಾರೆ.
ಸೈಫ್ ಅವರು ಮುಂಬೈನ ಬಾಂದ್ರಾದಲ್ಲಿರುವ ತಮ್ಮ ಮನೆಯಲ್ಲಿ ಕುಟುಂಬದವರ ಜೊತೆ ಮಲಗಿದ್ದರು. ಇಂದು (ಜನವರಿ 16) ಮುಂಜಾನೆ 2.30ರ ವೇಳೆಗೆ ಕಳ್ಳರು ಮನೆ ಒಳಗೆ ನುಗ್ಗಿದ್ದಾರೆ. ಈ ವೇಳೆ ಎಲ್ಲರಿಗೂ ಎಚ್ಚರ ಆಗಿದೆ. ಆಗ ಸೈಫ್ ಅವರು ಕಳ್ಳರನ್ನು ತಡೆಯಲು ಹೋಗಿದ್ದು, ಈ ವೇಳೆ ಕಳ್ಳರು ಹಲ್ಲೆ ಮಾಡಿದ್ದಾರೆ. ತಕ್ಷಣ ಕಳ್ಳರು ಸ್ಥಳದಿಂದ ಕಾಲ್ಕಿತ್ತಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಗಾಜಾ ಕದನ ವಿರಾಮಕ್ಕೆ ಇಸ್ರೇಲ್ – ಹಮಾಸ್ ಒಪ್ಪಿಗೆ

ಬಾಂದ್ರಾ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದ್ದು, ವಿಶೇಷ ಪೊಲೀಸರ ತಂಡ ರಚನೆ ಆಗಿದೆ. ಮನೆ ಹಾಗೂ ಸುತ್ತಮುತ್ತ ಇರುವ ಸಿಸಿಟಿವಿ ದೃಶ್ಯಾವಳಿಗಳ ಪರಿಶೀಲನೆ ಮಾಡಲಾಗುತ್ತಿದೆ. ಸದ್ಯ ಸೈಫ್ ಅಲಿ ಖಾನ್ ಅವರನ್ನು ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

‘ಕಳ್ಳರು 2-3 ಬಾರಿ ಹಲ್ಲೆ ಮಾಡಿದ್ದಾರೆ. ನಾವು ಇದನ್ನು ತನಿಖೆ ನಡೆಸುತ್ತಿದ್ದೇವೆ. ಮುಂಬೈ ಕ್ರೈಮ್ ಬ್ರ್ಯಾಂಚ್ ಕೂಡ ತನಿಖೆ ನಡೆಸುತ್ತಿದೆ. ಮುಂಜಾನೆ 3 ಗಂಟೆಗೆ ಸೈಫ್ ಅವರನ್ನು ಲೀವಾತಿ ಆಸ್ಪತ್ರೆಗೆ ಕರೆತರಲಾಗಿದೆ. ಅವರಿಗೆ ಆರು ಗಾಯಗಳಾಗಿದ್ದು, ಎರಡು ಕಡೆ ಗಂಭೀರ ಗಾಯವಾಗಿದೆ’ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಬೆನ್ನಿನ ಭಾಗದಲ್ಲಿ ಕಳ್ಳರು ಇರಿದ ಚಾಕು ದೊಡ್ಡ ಗಾಯವನ್ನೇ ಮಾಡಿದೆ ಎನ್ನಲಾಗಿದೆ. ಬೆನ್ನಿನ ಮೂಳೆಗೆ ತೊಂದರೆ ಆಗಿದೆಯೇ ಎನ್ನುವ ಬಗ್ಗೆ ಪರೀಕ್ಷೆ ನಡೆಯುತ್ತಿದೆ. ಸದ್ಯ ಅವರಿಗೆ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಅವರಿಗೆ ಶಸ್ತ್ರಚಿಕಿತ್ಸೆಯ ಅಗತ್ಯ ಇದೆ ಎನ್ನಲಾಗಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಟ ,ನಿರ್ದೇಶಕ ಮುರಳಿ ಮೋಹನ್ ನಿಧನ; ಓಂ, ಶ್‌ ಸೇರಿ ಹಲವು ಚಿತ್ರಗಳಿಗೆ ಸಂಭಾಷಣೆ

ಕನ್ನಡ ಚಿತ್ರರಂಗದಲ್ಲಿ ನಿರ್ದೇಶಕನಾಗಿ ಗುರುತಿಸಿಕೊಂಡಿದ್ದ ಮುರಳಿ ಮೋಹನ್ ಅವರು ನಿಧನರಾಗಿದ್ದಾರೆ. ಹಲವು...

ನಾವು ಬಾಯಿ ಮುಚ್ಚಿಕೊಂಡಿದ್ದರೆ ಮತದಾನದ ಹಕ್ಕು ಕಸಿದುಕೊಳ್ಳುವ ದಿನ ದೂರವಿಲ್ಲ: ನಟ ಕಿಶೋರ್ ಕುಮಾರ್

ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿದೆ ಎನ್ನಲಾದ ಮತಗಳ್ಳತನದ ಬಗ್ಗೆ ಲೋಕಸಭೆಯ ವಿಪಕ್ಷ...

Download Eedina App Android / iOS

X