ಬೆಳಗಾವಿ | ಎರಡನೇ ಪತ್ನಿಗಾಗಿ ಮೊದಲ ಪತ್ನಿಯ ಕೊಲೆ; ಆರೋಪಿಗಳು ಪರಾರಿ

Date:

Advertisements

ವ್ಯಕ್ತಿಯೊಬ್ಬ ತನ್ನ ಎರಡನೇ ಪತ್ನಿಯ ಮಾತು ಕೇಳಿ ಮೊದಲ ಪತ್ನಿಯನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಿ ಪರಾರಿಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಇಂಚಲ ಗ್ರಾಮದಲ್ಲಿ ನಡೆದಿದೆ.

ಇಂಚಲ ಗ್ರಾಮದ ಶಮಾ ಪಠಾಣ್(25) ಕೊಲೆಯಾದ ಮಹಿಳೆಯಾಗಿದ್ದು, ಆರೋಪಿತರನ್ನು ರಿಯಾಜ್ ಸಾಹೇಬ‌ ಖಾನ ಪಠಾಣ್ ಮತ್ತು ಫರ್ಜಾನಾ ರಿಯಾಜ್ ಪಠಾಣ್(28) ಎಂದು ಗುರುತಿಸಲಾಗಿದೆ. ಇಬ್ಬರು ಆರೋಪಿಗಳೂ ತಲೆಮರೆಸಿಕೊಂಡಿದ್ದಾರೆ.

ಕೊಲೆ ಆರೋಪಿ ರಿಯಾಜ್ ಕಳೆದ ಒಂದು ವರ್ಷದ ಹಿಂದೆ ಫರ್ಜಾನಾ ಎಂಬುವವರನ್ನು ಎರಡನೇ ಮದುವೆಯಾಗಿದ್ದ. ಮೊದಲನೇ ಹೆಂಡತಿ ಶಮಾ ಹಾಗೂ ರಿಯಾಜ್ ನಡುವೆ ವೈಮನಸ್ಸು ಉಂಟಾಗಿ ಹೊಂದಾಣಿಕೆ ಆಗದಿರುವ ಕಾರಣ ಅವಳು ತನ್ನ ತವರುಮನೆ ಇಂಚಲ ಗ್ರಾಮಕ್ಕೆ ಬಂದು ವಾಸವಾಗಿದ್ದಳು.

Advertisements

“ಆರೋಪಿ ತನ್ನ ಎರಡನೇ ಹೆಂಡತಿ ಫರ್ಜಾನಾಳನ್ನೂ ಕೂಡಾ ಇಂಚಲ ಗ್ರಾಮಕ್ಕೆ ಕರೆದುಕೊಂಡು ಬಂದು ಇಬ್ಬರಿಗೂ ಬೇರೆ ಮನೆ ಮಾಡಿದ್ದನು. ಎರಡನೇ ಹೆಂಡತಿ ಫರ್ಜಾನಾಳ ಕುಮ್ಮಕ್ಕಿನಿಂದ ತಾನು ಮೊದಲ ಪತ್ನಿಯನ್ನು ಕೊಲ್ಲುವುದಾಗಿ ಯತ್ನಿಸಿದ್ದು, ಶಮಾ ಮನೆಯಲ್ಲಿ ಮಲಗಿದಾಗ ಮುಖ ಮತ್ತು ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿದ್ದಾನೆ” ಎಂದು ದಾವಲಸಾಬ ಮಕ್ತುಮ ಸಾಬ ಬುಡ್ಡನ್ನವರ ಮುರಗೋಡ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.‌

ಈ ಸುದ್ದಿ ಓದಿದ್ದೀರಾ?: ಬೆಳಗಾವಿ | ಅಪ್ರಾಪ್ತೆಯರ ಮೇಲೆ ಸಾಮೂಹಿಕ ಅತ್ಯಾಚಾರ; ವಿಡಿಯೊ ತೋರಿಸಿ ಬೆದರಿಸುತ್ತಿದ್ದ ಆರೋಪಿಗಳ ಬಂಧನ

ಘಟನಾ ಸ್ಥಳಕ್ಕೆ ಹೆಚ್ಚುವರಿ ಎಸ್ ಪಿ ಬಸರಗಿ, ಡಿವೈಎಸ್‌ಪಿ ಚಿದಂಬರ, ಪಿಐ ವೀರೇಶ ಮಠಪತಿ ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಮಹಾರಾಷ್ಟ್ರದಲ್ಲಿ ಮಳೆ – ಬೆಳಗಾವಿ ಜಿಲ್ಲೆಯ ನದಿ ತೀರದ ಗ್ರಾಮಗಳಲ್ಲಿ ಪ್ರವಾಹದ ಆತಂಕ

ಮಹಾರಾಷ್ಟ್ರದ ಕೊಂಕಣ ಭಾಗದಲ್ಲಿ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಅಲ್ಲಿ ಇರುವ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

Download Eedina App Android / iOS

X