ಬೆಂಗಳೂರು | ಸ್ವಚ್ಛಗೊಳಿಸುವಾಗ ಮ್ಯಾನ್‌ಹೋಲ್‌ಗೆ ಬಿದ್ದ ಸ್ವಚ್ಛತಾ ಸಿಬ್ಬಂದಿ; ಬೆನ್ನು ಮೂಳೆ ಮುರಿತ

Date:

Advertisements
  • ಕಸ ತೆರವು ಮಾಡುವ ವೇಳೆ 20 ಅಡಿ ಆಳದ ಮೋರಿಗೆ ಬಿದ್ದ ರತ್ನಮ್ಮ
  • ರಾಜಾಜಿನಗರದ ಇಎಸ್​ಐ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳು

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯ ಸ್ವಚ್ಛತಾ ಸಿಬ್ಬಂದಿ ಕೆಲಸ ನಿರ್ವಹಿಸುವ ವೇಳೆ ಮ್ಯಾನ್‌ಹೋಲ್‌ಗೆ ಬಿದ್ದು ಬೆನ್ನು ಮೂಳೆ ಮುರಿದಿದ್ದು, ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಂಗಳೂರಿನ ನಂದಿನಿ ಲೇಔಟ್‌ನ ಶ್ರೀಕಂಠ ನಗರದಲ್ಲಿ ಈ ಘಟನೆ ನಡೆದಿದೆ. ರತ್ನಮ್ಮ ಗಾಯಗೊಂಡವರು. ಮೇ 27ರಂದು ಸಿಬ್ಬಂದಿ ಸ್ವಚ್ಛತಾ ಕೆಲಸ ಮಾಡುತ್ತಿದ್ದರು. ಈ ವೇಳೆ, ರಾಜಕಾಲುವೆ ಮೋರಿ ಮೇಲೆ ಹಾಕಿದ್ದ ಕಸವನ್ನು ತೆರವುಗೊಳಿಸುವ ವೇಳೆ ಈ ಘಟನೆ ನಡೆದಿದೆ.

ಕಸವಿರುವ ಕೆಳಗೆ ಮ್ಯಾನ್‌ಹೋಲ್‌ ಇರುವ ಬಗ್ಗೆ ತಿಳಿಯದ ರತ್ನಮ್ಮ ಕಸ ತೆರವು ಮಾಡುವ ವೇಳೆ ಅರಿವಿಲ್ಲದೆ 20 ಅಡಿ ಆಳದ ಮೋರಿಗೆ ಬಿದ್ದಿದ್ದಾರೆ. ಈ ವೇಳೆ, ಜತೆಗಿದ್ದ ಮತ್ತೋರ್ವ ಸಿಬ್ಬಂದಿ ಸ್ಥಳೀಯರನ್ನು ಕರೆದಿದ್ದಾರೆ. ಸ್ಥಳೀಯರು ನೀಡಿದ ಏಣಿ ಮೂಲಕ ರತ್ನಮ್ಮ ಅವರನ್ನು ರಕ್ಷಣೆ ಮಾಡಿದ್ದಾರೆ.

Advertisements

ರತ್ನಮ್ಮ ಅವರಿಗೆ ಸದ್ಯ ಬೆನ್ನು ಮೂಳೆ ಮುರಿದಿದ್ದು, ನಗರದ ರಾಜಾಜಿನಗರದ ಇಎಸ್​ಐ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಮಾದಕ ವ್ಯಸನ ಮುಕ್ತಿ ಕೇಂದ್ರದ ಮುಖ್ಯಸ್ಥನಿಂದಲೇ ಡ್ರಗ್ಸ್‌ ಮಾರಾಟ!

ನೀರು ಸರಾಗವಾಗಿ ಹರಿದು ಹೋಗಲು ಕಳೆದ 7 ವರ್ಷಗಳ ಹಿಂದೆ ದೊಡ್ಡ ರಾಜಕಾಲುವೆ ಮೋರಿ ನಿರ್ಮಾಣ ಮಾಡಲಾಗಿತ್ತು. ಮೋರಿಯನ್ನು ನಿರ್ಮಾಣ ಮಾಡಿ ಅದನ್ನು ಮುಚ್ಚದೇ ಹಾಗೆಯೇ ಬಿಟ್ಟಿದ್ದರು. ಈ ಮೋರಿಯ ಸುತ್ತಮುತ್ತ ಸಾಕಷ್ಟು ಮನೆಗಳಿದ್ದು, ಮಕ್ಕಳು ಬಿದ್ದಿದ್ದರೆ ಏನು ಗತಿ ಎಂದು ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯೂಟ್ಯೂಬರ್ ಸಮೀರ್ ಎಂ.ಡಿ. ಮನೆ ಸುತ್ತುವರಿದ ಖಾಕಿ ಪಡೆ, ತಾಯಿಯ ವಿಚಾರಣೆ

ಯೂಟ್ಯೂಬರ್ ಸಮೀರ್.ಎಂ.ಡಿ ಬಂಧನಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿರುವ ಸಮೀರ್ ಅವರ ಮನೆಯನ್ನು ಧರ್ಮಸ್ಥಳ...

ಪರಿಸರ ಸ್ನೇಹಿ ಗಣೇಶ ಹಬ್ಬಕ್ಕೆ ಮಾರ್ಗಸೂಚಿ ಪ್ರಕಟ, ನಿಯಮ ಉಲ್ಲಂಘಿಸಿದರೆ ಕ್ರಿಮಿನಲ್‌ ಕೇಸ್‌ ದಾಖಲು

ಬೆಂಗಳೂರು ನಗರದಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಮಾತ್ರ ಪೂಜಿಸಬೇಕಾಗಿ ಮತ್ತು...

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಮಹಿಳೆ ವಿರುದ್ಧದ ಪೋಕ್ಸೋ ಪ್ರಕರಣ ರದ್ದತಿಗೆ ಹೈಕೋರ್ಟ್‌ ನಕಾರ

ಬೆಂಗಳೂರಿನ ವಿಲ್ಲಾವೊಂದರಲ್ಲಿ ವಾಸವಿದ್ದ 53 ವರ್ಷದ ಮಹಿಳೆ ತನ್ನ ಕಾಮ ತೃಷೆಗಾಗಿ...

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

Download Eedina App Android / iOS

X