ಶಿವಮೊಗ್ಗ ನಗರದಲ್ಲಿ ಚಾಕು ಇರಿತ ಪ್ರಕರಣ; ಓರ್ವನ ಬಂಧನದ ಕುರಿತು ಎಸ್‌ಪಿ ಪ್ರತಿಕ್ರಿಯೆ

Date:

Advertisements

ಬೈಕ್‌ನಲ್ಲಿ ಬಂದ ಇಬ್ಬರು ಕಿಡಿಗೇಡಿಗಳು ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿ ಚಾಕು ಇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ಬಂಧಿಸಿರುವುದಾಗಿ ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಜಿ ಕೆ ತಿಳಿಸಿದ್ದಾರೆ. 

ಶಿವಮೊಗ್ಗ ನಗರದ ಕಸ್ತೂರ ಬಾ ರಸ್ತೆಯಲ್ಲಿರುವ ಮುರುಡೇಶ್ವರ ದೇವಸ್ಥಾನದ ಬಳಿ ಹಿರಾಲಾಲ್ ಸನ್ ಎಂಬುವರ ಮೇಲೆ ಇಬ್ವರು ಕಿಡಿಗೇಡಿಗಳು ಹಲ್ಲೆ ನಡೆಸಿ ಚಾಕು ಇರಿದಿದ್ದ ಘಟನೆಗೆ ಸಂಬಂಧಿಸಿದಂತೆ ಎಸ್‌ಪಿ ಮಿಥುನ್ ಕುಮಾರ್ ಜಿ ಕೆ ಸುದ್ದಿಗೋಷ್ಠಿ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ.

“ಶಿವಮೊಗ್ಗ ನಗರದ ಕಸ್ತೂರ ಬಾ ರಸ್ತೆಯಲ್ಲಿರುವ ಮುರುಡೇಶ್ವರ ದೇವಸ್ಥಾನದ ಬಳಿ ಬುಧವಾರ ಸಂಜೆ 6ರ ಸುಮಾರಿಗೆ ನಾಲ್ವರು, ಕಚೋರಿ ಮಾರುವ ಅಂಗಡಿಗೆ ಬಂದಿದ್ದರು. ಕಚೋರಿ ಅಂಗಡಿಗೆ ಬಂದವರು ಅವರ ಬಳಿ ಹತ್ತಿರದಲ್ಲಿರುವ ಕುಕ್ಕರ್ ಅಂಗಡಿಯ ವಿಳಾಸ ಕೇಳಿದ್ದರು. ಕುಕ್ಕರ್ ಅಂಗಡಿ ಬಾಗಿಲು ಹಾಕಿದ್ದಕ್ಕೆ ನಮಗೆ ತಪ್ಪು ವಿಳಾಸ ಹೇಳುತ್ತೀಯಾ ಎಂದು ಗಲಾಟೆ ಮಾಡಿದ್ದರು” ಎಂದು ತಿಳಿಸಿದ್ದಾರೆ. 

Advertisements

ಈ ಸುದ್ದಿ ಓದಿದ್ದೀರ ? ಬೀದರ್‌ ಎಟಿಎಂ ದರೋಡೆ ಪ್ರಕರಣ : ಹೈದರಾಬಾದ್‌ನಲ್ಲಿ ಮತ್ತೆ ಗುಂಡಿನ ದಾಳಿ

“ಘಟನೆಯನ್ನು ಖಂಡಿಸಿ ಜೈನ ಸಮುದಾಯದ ವ್ಯಾಪಾರಸ್ಥರು ಮನವಿ ಮಾಡಿದ್ದರು. ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ನಾಲ್ವರಲ್ಲಿ ಒಬ್ಬನನ್ನು ಬಂಧಿಸಲಾಗಿದೆ. ಈ ಪ್ರಕರಣದಲ್ಲಿ ಮದನ್ ಯಾನೆ ಮಂಜುನಾಥ್(35) ಎಂಬಾತನನ್ನು ಬಂಧಿಸಲಾಗಿದೆ. ಉಳಿದ ಮೂವರ ಪತ್ತೆಗೆ ಕ್ರಮ ಜರುಗಿಸಲಾಗಿದೆ” ಎಂದು ಮಾಹಿತಿ ನೀಡಿದ್ದಾರೆ.

“ಇಂತಹ ಘಟನೆ ವೇಳೆ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಬೇಕು” ಎಂದು ಎಸ್‌ಪಿ ಮಿಥುನ್‌ ಕುಮಾರ್‌ ವರ್ತಕರಿಗೆ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಡಿಮ್ಹಾನ್ಸ್ ಸಂಸ್ಥೆಯ ಟೆಲಿ-ಮನಸ್ ವಿಭಾಗದ ಸಿಬ್ಬಂದಿಗಳಿಗೆ ತರಬೇತಿ ಕಾರ್ಯಾಗಾರ

ಬೆಂಗಳೂರು ನಿಮ್ಹಾನ್ಸ್ ಟೆಲಿ-ಮನಸ್ ಅಪೆಕ್ಸ್ ತಂಡದಿಂದ ಧಾರವಾಡ ಡಿಮ್ಹಾನ್ಸ್ ಸಂಸ್ಥೆಯ ಟೆಲಿ-ಮನಸ್...

ಕಲಬುರಗಿ | ಶಾಲಾ ಮೇಲ್ಚಾವಣಿ ಕುಸಿದು ಮೂವರು ವಿದ್ಯಾರ್ಥಿಗಳಿಗೆ ಗಾಯ; ಗ್ರಾಮಸ್ಥರಿಂದ ಪ್ರತಿಭಟನೆ

ಸೇಡಂ ತಾಲ್ಲೂಕಿನ ಮಲ್ಕಾಪಲ್ಲಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮೇಲ್ಚಾವಣಿ...

ಗದಗ | ನಾಲ್ಕು ದಿನಗಳಿಂದ ರೈತರು ಪ್ರತಿಭಟನೆ, ಸ್ಪಂದಿಸದ ಆಡಳಿತ: ಜೆಡಿಎಸ್ ರಾಜ್ಯ ವಕ್ತಾರ ವೆಂಕನಗೌಡ ಗೋವಿಂದಗೌಡ್ರ ಕಿಡಿ

"ಬಗರ್‌ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ ನೀಡಬೇಕು ಎಂದು ಒತ್ತಾಯಿಸಿ ರೈತರು ನಾಲ್ಕು ದಿನಗಳಿಂದ...

ಕೊಪ್ಪಳ | ಅಕ್ರಮ ಗಾಂಜಾ ಮಾರಾಟ : ಒಂದೇ ಕುಟುಂಬದ 3 ಸೇರಿ ನಾಲ್ವರ ಬಂಧನ

ಸಾರ್ವಜನಿಕ ಸ್ಥಳಗಳಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದವರ ಮೇಲೆ ದಾಳಿ ನಡೆಸಿ...

Download Eedina App Android / iOS

X