ಗದಗ |  ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ: ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು ಎಸ್ ಎಫ್ ಐ ಆಗ್ರಹ

Date:

Advertisements

“ಒಂಬತ್ತನೇ ತರಗತಿಯ ವಿದ್ಯಾರ್ಥಿನಿ ಖುಷಿ ನಿನ್ನೆ ಸಂಜೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿದ್ಯಾರ್ಥಿನಿ ಆತ್ಮಹತ್ಯೆಗೆ ಸರಿಯಾದ ಕಾರಣ ಗೊತ್ತಾಗಿಲ್ಲ’ ಎಂದು ವರದಿಯಾಗಿದೆ. ಸರಿಯಾಗಿ ನಿಷ್ಪಕ್ಷಪಾತ ತನಿಖೆ ಮಾಡಿ ನ್ಯಾಯ ಒದಗಿಸಬೇಕು. ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು” ಎಸ್ ಎಫ್ ಐ ಜಿಲ್ಲಾಧ್ಯಕ್ಷ ಚಂದ್ರು ರಾಠೋಡ್ ಒತ್ತಾಯಿಸಿದರು.

ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದಲ್ಲಿ ವಿದ್ಯಾರ್ಥಿನಿ ಸಂಶಯಾಸ್ಪದ ಸಾವು ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದು ಎಸ್ ಎಫ್ ಐ ತಾಲೂಕು ಶಿರಸ್ತೇದಾರ್ ಪಿ ಬಿ ಶಿಂಗ್ರೀ ಅವರಿಗೆ ಮನವಿ ಸಲ್ಲಿಸಿ ಮಾತನಾಡಿದರು.

“ಈ ಪ್ರಕರಣದಲ್ಲಿ ಯಾರೇ ತಪ್ಪು ಮಾಡಿದ್ದರು ಅವರಿಗೆ ತಕ್ಕ ಶಿಕ್ಷೆ ಆಗಬೇಕು. ಇದಕ್ಕೆ ಯಾವುದೇ ಜಾತಿ ಧರ್ಮದ ಬಣ್ಣ ಹಚ್ಚದೆ ತಪ್ಪು ಮಾಡಿದವರಿಗೆ ಶಿಕ್ಷೆ ನೀಡುವ ಕೆಲಸ ಮಾಡಬೇಕೆಂದು” ಎಸ್ ಎಫ್ ಐ ತಾಲ್ಲೂಕು ಸಮಿತಿಯು ಒತ್ತಾಯಿಸುತ್ತದೆ” ಎಂದು ಹೇಳಿದರು.

Advertisements

ಎಸ್ ಎಫ್ ಐ ರಾಜ್ಯ ಉಪಾಧ್ಯಕ್ಷ ಗಣೇಶ್ ರಾಠೋಡ್ ಮಾತನಾಡಿ, “ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿನಿಯರ ಮೇಲೆ ನಡೆಯುವ ದೌರ್ಜನ್ಯದ ವಿರುದ್ಧ, ಲೈಂಗಿಕ ಕಿರುಕುಳ ವಿರೋಧಿ ಸಮಿತಿಯನ್ನು ರಚಿಸಲು ಸುಪ್ರೀಂ ಕೋರ್ಟ್ ನೀಡಿರುವ ನಿರ್ದೇಶನಗಳನ್ನು ಪಾಲಿಸಬೇಕು. ವರ್ಮಾ ಸಮಿತಿಯ ಶಿಪಾರಸ್ಸಿನಂತೆ  ಎಲ್ಲಾ ಶಾಲಾ ಕಾಲೇಜುಗಳಲ್ಲಿ ಲೈಂಗಿಕ ಕಿರುಕುಳ ವಿರೋಧಿ ಸಮಿತಿಯನ್ನು ರಚಿಸಿ. ದೂರು ಪೆಟ್ಟಿಗೆಗಳನ್ನು ಅಳವಡಿಸಬೇಕು. ದೂರು ನಿರ್ವಹಣಾ ಸಮಿತಿಯನ್ನು ರಚಿಸಿ, ಬಂದ ದೂರುಗಳನ್ನು 15 ದಿನ, ತಿಂಗಳಿಗೊಮ್ಮೆ ತಗೆದು ದೂರುಗಳನ್ನು ನಿವಾರಿಸುವ ಕೆಲಸವನ್ನು ಮಾಡಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಕೊಪ್ಪಳ | ಗವಿಸಿದ್ಧೇಶ್ವರ ಜಾತ್ರೆ; ಈ ಬಾರಿ ಅನ್ನದಾಸೋಹದಲ್ಲಿ ಜಿಲೇಬಿ ಸಿಹಿ!

ಮನವಿ ಸಂದರ್ಭದಲ್ಲಿ ಡಿ ವೈ ಎಫ್ ಐ ಮುಖಂಡರು ಶಿವಾಜಿ ಜಿ, ಕನಕಪ್ಪ ಹಾದಿಮನಿ, ತಾಲ್ಲೂಕು ಎಸ್ ಎಫ್ ಐ ಮುಖಂಡರು ಹನುಮಂತ ಎಂ, ರಮೇಶ್ ಕೆ, ಕೃಷ್ಣ ಅನೇಕರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X