ಕಲಬುರಗಿ | ಬಹುತ್ವ ಸಂಸ್ಕೃತಿ ಭಾರತೋತ್ಸವ-2025; ಸೌಹಾರ್ದ ಕರ್ನಾಟಕದ ಬೃಹತ್ ಬೈಕ್ ರ್‍ಯಾಲಿ ಯಶಸ್ವಿ

Date:

Advertisements

ಬಹುತ್ವ ಸಂಸ್ಕೃತಿ ಭಾರತೋತ್ಸವ-2025ರ ಚಲೋ ಕಲಬುರಗಿ ಕಾರ್ಯಕ್ರಮದ ಅಂಗವಾಗಿ ನಗರದ ಶರಣಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಅಧಿಕೃತವಾಗಿ ಚಾಲನೆ ನೀಡಿ, ನಡೆಸಿದ ಬೈಕ್ ರ್‍ಯಾಲಿ ಯಶಸ್ವಿಯಾಗಿದೆ.

ಬೆಳಗ್ಗೆ 11ಗಂಟೆಗೆ ದೇವಸ್ಥಾನದ ಆವರಣದಲ್ಲಿ ಸಂಸ್ಥಾನದ ಮಾತೋಶ್ರೀ ದಾಕ್ಷಾಯಿಣಿ ಶರಣಬಸಪ್ಪ ಹಾಗೂ ನಿವೃತ್ತ ಕುಲಪತಿ ಪ್ರೊ. ಸಬಿಹಾ ಭೂಮಿಗೌಡ ಅವರು ಬಹುತ್ವ ಸಂಸ್ಕೃತಿ ಭಾರತೋತ್ಸವದ ಧ್ವಜ ಹಾರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

be2dd4ef 1f04 4f4d 9441 32b89515400e

ಚಾಲನೆ ನೀಡಿ ದಾಕ್ಷಾಯಿಣಿ ಶರಣಬಸಪ್ಪ ಮಾತನಾಡಿ, “ಭವಿಷ್ಯಕ್ಕಾಗಿ ಬಹುತ್ವ ಭಾರತ ಉಳಿಸುವುದು ಅಗತ್ಯವಾಗಿದ್ದು, ಇದಕ್ಕೆ ಸಂಸ್ಥಾನ ಸಂಪೂರ್ಣ ಸಹಕಾರ ನೀಡುತ್ತದೆ” ಎಂದು ಹೇಳಿದರು.

Advertisements

ದೇವಸ್ಥಾನದ ಮುಂಭಾಗದಿಂದ ಪ್ರಾರಂಭಗೊಂಡ ರ್‍ಯಾಲಿ ಸೇಂಟ್ ಮೇರಿ ಚರ್ಚ್ ಮಾರ್ಗವಾಗಿ ಸಾಗಿ ಸರ್ದಾರ್ ವಲ್ಲಭಭಾಯಿ ಪಟೇಲ್ ಮಾರ್ಗ, ಜಗತ್ ವೃತ್ತದಿಂದ ಹಾಯ್ದು ಸೌಹಾರ್ದ ಸಂಕೇತವಾದ ಖಾಜಾ ಬಂದೇನವಾಜ್ ದರ್ಗಾದಲ್ಲಿ ಮುಕ್ತಾಯವಾಯಿತು.

ಈ ಸುದ್ದಿ ಓದಿದ್ದೀರಾ?: ಕಲಬುರಗಿ | ಸಚಿವ ಪ್ರಿಯಾಂಕ್‌ ಖರ್ಗೆ ಮನೆ ಮುತ್ತಿಗೆ ಖಂಡಿಸಿ ದಸಂಸ ಪ್ರತಿಭಟನೆ

ಜಾಥಾದಲ್ಲಿ ಕೆ ನೀಲಾ, ಆರ್ ಕೆ ಹುಡಗಿ, ಮೀನಾಕ್ಷಿ ಬಾಳಿ, ಸುರೇಶ್ ಹಾದಿಮನಿ, ಮಹಮ್ಮದ್ ಅಫಜಲ್, ಅಬ್ದುಲ್ ಖಾದರ್, ಕಾಶಿನಾಥ್ ಅಂಬಲಗೆ, ಪ್ರಭು ಖಾನಾಪುರ, ಅಬ್ದುಲ್ ರಹೀಂ, ರಿಜ್ವಾನ್ ಸಿದ್ದಿಕಿ, ಶಾಹನಾಜ್ ಅಖರ್, ದತ್ತಾತ್ರೇಯ ಇಕ್ಕಳಕಿ, ಮಹಾಂತೇಶ್ ಕಲಬುರಗಿ, ಮುಬೀನ್ ಅಹ್ಮದ್, ಲವಿತ್ರಾ ರಾಜೇಂದ್ರ ರಾಜವಾಳ್, ವಸ್ತ್ರದ್, ಅರ್ಜುನ್ ಗೊಬ್ಬರ್, ಶ್ರೀನಾಥ್ ಬಿರಾದಾರ, ಗೌರಮ್ಮ ಪಾಟೀಲ್ ಸೇರಿದಂತೆ ವಿವಿಧ ಧರ್ಮಗಳ ಮುಖಂಡರು ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಕಲಬುರಗಿ | ಯುವಕರು ಮಾರಕಾಸ್ತ್ರ ಹಿಡಿದ ವಿಡಿಯೊ ವೈರಲ್: ನಾಲ್ವರು ಯುವಕರ ವಿರುದ್ಧ ಎಫ್‌ಐಆರ್

ಕಲಬುರಗಿಯ ದೇವಿ ನಗರದಲ್ಲಿ ನಾಲ್ವರು ಯುವಕರು ಕೈಯಲ್ಲಿ ಮಾರಕಾಸ್ತ್ರಗಳು ಹಿಡಿದು ವಿಡಿಯೋ...

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

Download Eedina App Android / iOS

X